ಬಂಟ್ವಾಳ

ಗ್ರಾಪಂ ಚುನಾವಣೆ ವಿಜೇತರಿಗೆ ಕಾಂಗ್ರೆಸ್ ಅಭಿನಂದನೆ

ಕರೋಪಾಡಿ ಗ್ರಾಪಂ ಉಪಚುನಾವಣೆಯಲ್ಲಿ ವಿಜೇತರಾದ ಅನ್ವರ್ ಕರೋಪಾಡಿ ಮತ್ತು ಕರೋಪಾಡಿಯ ಕಾಂಗ್ರೆಸ್ ಪ್ರಮುಖರು ಸಚಿವ ರಮಾನಾಥ ರೈ ಅವರನ್ನು ಭೇಟಿಯಾದರು. ಈ ಸಂದರ್ಭ ಅನ್ವರ್ ಅವರನ್ನು ಸಚಿವರು ಅಭಿನಂದಸಿದರು. ಜಿಪಂ ಸದಸ್ಯ ಎಂ.ಎಸ್. ಮಹಮ್ಮದ್, ಚಂದ್ರಪ್ರಕಾಶ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

ಗ್ರಾಮ ಪಂಚಾಯತ್ ಉಪಾಧ್ಯಕ್ಷ ಜಲೀಲ್ ಕರೋಪಾಡಿ ಅವರ ಬರ್ಬರ ಹತ್ಯೆ ಬಳಿಕ ತೆರವಾಗಿದ್ದ ಸ್ಥಾನಕ್ಕೆ ಭಾನುವಾರ ನಡೆದಿದ್ದ ಉಪಚುನಾವಣೆಯಲ್ಲಿ 129 ಮತಗಳ ಅಂತರದಿಂದ ಜಯ ಗಳಿಸಿದ ಜಲೀಲ್ ಸಹೋದರ ಎ.ಮಹಮ್ಮದ್ ಅನ್ವರ್ ಮತ್ತು ಬೋಳಂತರು ಕ್ಷೇತ್ರದಲ್ಲಿ ಅವಿರೋಧವಾಗಿ ಆಯ್ಕೆಯಾದ ಆಶಾ ಬೋಳಂತೂರು  ಇವರನ್ನು ಬಿಸಿರೋಡಿನಲ್ಲಿ ಕಾಂಗ್ರೇಸ್ ವತಿಯಿಂದ ಅಭಿನಂದಿಸಲಾಯಿತು.

ಈ ಸಂದರ್ಭ ಮಾತನಾಡಿದ ಜಿ.ಪಂ.ಸದಸ್ಯ ಎಂಎಸ್ ಮಹಮ್ಮದ್ ಮಾತನಾಡಿ ಜಲೀಲ್ ಕರೋಪಾಡಿ ಅವರ ಹತ್ಯೆಗೆ ಅ ಕ್ಷೇತ್ರದ ಜನತೆ ಉತ್ತರವನ್ನು ಕೊಟ್ಟಿದ್ದಾರೆ. ಆ ಮೂಲಕ ಅವರ ಜನಪರ ಕೆಲಸವನ್ನು ಮುಂದುವರಿಸಿಕೊಂಡು ಹೋಗಲು ಜಲೀಲ್ ಸಹೋದರ ಎ.ಮಹಮ್ಮದ್ ಅನ್ವರ್ ಅವರಿಗೆ ಜನ ಆರ್ಶಿವಾದ ಮಾಡಿದ್ದಾರೆ ಎಂದು ಹೇಳಿದರು. ಬಳಿಕ ಮಾತನಾಡಿದ ತಾ.ಪಂ.ಉಪಾಧ್ಯಕ್ಷ ಅಬ್ಬಾಸ್ ಆಲಿ ಮಾತನಾಡಿ ಜಲೀಲ್ ಅವರ ಜನಪರ ಕೆಲಸ ಮತ್ತು ಸೌಹಾರ್ದತೆ ಜೊತೆಗೆ ಉಸ್ತುವಾರಿ ಸಚಿವ ಬಿ ರಮನಾಥ ರೈ ಅವರ ಅಭಿವೃದ್ದಿ ಕೆಲಸಕ್ಕೆ ಸಿಕ್ಕ ಜಯ ಎಂದು ಹೇಳಿದರು. ಈ ಸಂದರ್ಭ  ತಾ.ಪಂ ಅಧ್ಯಕ್ಷ ಚಂದ್ರಹಾಸ ಕರ್ಕೇರ, ಬಾಳಪ್ಪ ಶೆಟ್ಟಿ, ಮಹಮ್ಮದ್ ಅನ್ವರ್, ಮೂಸಬ್ಬ, ವಿಜಯ ಪೂಜಾರಿ, ಪುತ್ತುಮೋನು, ರಹೀಂ ಮಿತ್ತನಡ್ಕ, ಸಿದ್ದೀಕ್, ರಜಾಕ್ ಸೇರಾಜೆ, ಶಗೀರ್ ಮತ್ತಿರರು ಉಪಸ್ಥಿತರಿದ್ದರು

ಜಾಹೀರಾತು
ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts