ಬಂಟ್ವಾಳ

ಗ್ರಾಪಂ ಚುನಾವಣೆ ವಿಜೇತರಿಗೆ ಕಾಂಗ್ರೆಸ್ ಅಭಿನಂದನೆ

ಕರೋಪಾಡಿ ಗ್ರಾಪಂ ಉಪಚುನಾವಣೆಯಲ್ಲಿ ವಿಜೇತರಾದ ಅನ್ವರ್ ಕರೋಪಾಡಿ ಮತ್ತು ಕರೋಪಾಡಿಯ ಕಾಂಗ್ರೆಸ್ ಪ್ರಮುಖರು ಸಚಿವ ರಮಾನಾಥ ರೈ ಅವರನ್ನು ಭೇಟಿಯಾದರು. ಈ ಸಂದರ್ಭ ಅನ್ವರ್ ಅವರನ್ನು ಸಚಿವರು ಅಭಿನಂದಸಿದರು. ಜಿಪಂ ಸದಸ್ಯ ಎಂ.ಎಸ್. ಮಹಮ್ಮದ್, ಚಂದ್ರಪ್ರಕಾಶ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

ಗ್ರಾಮ ಪಂಚಾಯತ್ ಉಪಾಧ್ಯಕ್ಷ ಜಲೀಲ್ ಕರೋಪಾಡಿ ಅವರ ಬರ್ಬರ ಹತ್ಯೆ ಬಳಿಕ ತೆರವಾಗಿದ್ದ ಸ್ಥಾನಕ್ಕೆ ಭಾನುವಾರ ನಡೆದಿದ್ದ ಉಪಚುನಾವಣೆಯಲ್ಲಿ 129 ಮತಗಳ ಅಂತರದಿಂದ ಜಯ ಗಳಿಸಿದ ಜಲೀಲ್ ಸಹೋದರ ಎ.ಮಹಮ್ಮದ್ ಅನ್ವರ್ ಮತ್ತು ಬೋಳಂತರು ಕ್ಷೇತ್ರದಲ್ಲಿ ಅವಿರೋಧವಾಗಿ ಆಯ್ಕೆಯಾದ ಆಶಾ ಬೋಳಂತೂರು  ಇವರನ್ನು ಬಿಸಿರೋಡಿನಲ್ಲಿ ಕಾಂಗ್ರೇಸ್ ವತಿಯಿಂದ ಅಭಿನಂದಿಸಲಾಯಿತು.

ಈ ಸಂದರ್ಭ ಮಾತನಾಡಿದ ಜಿ.ಪಂ.ಸದಸ್ಯ ಎಂಎಸ್ ಮಹಮ್ಮದ್ ಮಾತನಾಡಿ ಜಲೀಲ್ ಕರೋಪಾಡಿ ಅವರ ಹತ್ಯೆಗೆ ಅ ಕ್ಷೇತ್ರದ ಜನತೆ ಉತ್ತರವನ್ನು ಕೊಟ್ಟಿದ್ದಾರೆ. ಆ ಮೂಲಕ ಅವರ ಜನಪರ ಕೆಲಸವನ್ನು ಮುಂದುವರಿಸಿಕೊಂಡು ಹೋಗಲು ಜಲೀಲ್ ಸಹೋದರ ಎ.ಮಹಮ್ಮದ್ ಅನ್ವರ್ ಅವರಿಗೆ ಜನ ಆರ್ಶಿವಾದ ಮಾಡಿದ್ದಾರೆ ಎಂದು ಹೇಳಿದರು. ಬಳಿಕ ಮಾತನಾಡಿದ ತಾ.ಪಂ.ಉಪಾಧ್ಯಕ್ಷ ಅಬ್ಬಾಸ್ ಆಲಿ ಮಾತನಾಡಿ ಜಲೀಲ್ ಅವರ ಜನಪರ ಕೆಲಸ ಮತ್ತು ಸೌಹಾರ್ದತೆ ಜೊತೆಗೆ ಉಸ್ತುವಾರಿ ಸಚಿವ ಬಿ ರಮನಾಥ ರೈ ಅವರ ಅಭಿವೃದ್ದಿ ಕೆಲಸಕ್ಕೆ ಸಿಕ್ಕ ಜಯ ಎಂದು ಹೇಳಿದರು. ಈ ಸಂದರ್ಭ  ತಾ.ಪಂ ಅಧ್ಯಕ್ಷ ಚಂದ್ರಹಾಸ ಕರ್ಕೇರ, ಬಾಳಪ್ಪ ಶೆಟ್ಟಿ, ಮಹಮ್ಮದ್ ಅನ್ವರ್, ಮೂಸಬ್ಬ, ವಿಜಯ ಪೂಜಾರಿ, ಪುತ್ತುಮೋನು, ರಹೀಂ ಮಿತ್ತನಡ್ಕ, ಸಿದ್ದೀಕ್, ರಜಾಕ್ ಸೇರಾಜೆ, ಶಗೀರ್ ಮತ್ತಿರರು ಉಪಸ್ಥಿತರಿದ್ದರು

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ