ಆರು ತಂಡಗಳಲ್ಲಿ ಪೊಲೀಸ್ ತನಿಖೆ: ಎಸ್ಪಿ ಸುಧೀರ್ ರೆಡ್ಡಿ

ಬಿ.ಸಿ.ರೋಡ್ ನ ಲಾಂಡ್ರಿಗೆ ನುಗ್ಗಿ ಅದರ ಮಾಲೀಕನ ಪುತ್ರ ಶರತ್ ಅವರ ಮೇಲೆ ಮಾರಣಾಂತಿಕ ದಾಳಿಯ ವಿಚಾರಕ್ಕೆ ಸಂಬಂಧಿಸಿ ತನಿಖೆ ತೀವ್ರಗೊಂಡಿದ್ದು, ಇದಕ್ಕಾಗಿ ಆರು ತಂಡಗಳನ್ನು ರಚಿಸಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಧೀರ್ ಕುಮಾರ್ ರೆಡ್ಡಿ ಹೇಳಿದ್ದಾರೆ.

ಜಾಹೀರಾತು

ಇದಕ್ಕಾಗಿ ಮಂಗಳೂರು ಕಮೀಷನರೇಟ್ ವ್ಯಾಪ್ತಿಯಲ್ಲಿ ಮೂರು ತಂಡಗಳು ಕಾರ್ಯಾಚರಿಸಿದರೆ, ಜಿಲ್ಲೆಯ ಇತರ ವ್ಯಾಪ್ತಿಯಲ್ಲಿ ಮೂರು ತಂಡಗಳು ಕಾರ್ಯಾಚರಿಸಲಿವೆ ಎಂದು ಎಸ್ಪಿ ಬಂಟ್ವಾಳದಲ್ಲಿ ತಮ್ಮನ್ನು ಭೇಟಿಯಾದ ಸುದ್ದಿಗಾರರಿಗೆ ತಿಳಿಸಿದರು.

ಈಗಾಗಲೇ ಹಲವರನ್ನು ವಿಚಾರಿಸಲಾಗಿದೆ. ಮಹತ್ವದ ಸುಳಿವು ಇನ್ನಷ್ಟೇ ಸಿಗಬೇಕಾಗಿದೆ ಎಂದ ಅವರು, ಶರತ್ ಅವರ ಸ್ಥಿತಿ ನಿನ್ನೆಯಂತೆಯೇ ಇದೆ ಎಂದು ಮಾಹಿತಿ ನೀಡಿದರು.

ಪೊಲೀಸ್ ಸರ್ಪಗಾವಲು:

ಒಟ್ಟು 1000ಕ್ಕೂ ಅಧಿಕ ಪೊಲೀಸ್ ಸಿಬ್ಬಂದಿ ಬಂದೋಬಸ್ತ್ ನಲ್ಲಿ ತೊಡಗಿದ್ದಾರೆ. ಇವರ ಮೇಲುಸ್ತುವಾರಿಗೆ 100 ಮಂದಿ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ 10 ಡಿಆರ್, 12 ಕೆ.ಎಸ್.ಆರ್.ಪಿ ತುಕಡಿಗಳು ಕಾರ್ಯಾಚರಣೆ ನಡೆಸುತ್ತಿವೆ. ಎಂದು ಎಸ್ಪಿ ರೆಡ್ಡಿ ಸುದ್ದಿಗಾರರಿಗೆ ಮಾಹಿತಿ ನೀಡಿದರು.

ಗುರುವಾರ  ಪರಿಸ್ಥಿತಿಯನ್ನು ಅವಲೋಕಿಸಲು ಬಂಟ್ವಾಳ ನಗರ ಠಾಣೆಯಲ್ಲಿ ಎಸ್ಪಿ ಸಭೆ ನಡೆಸಿದರು. ಈ ಸಂದರ್ಭ ಪ್ರಭಾರ ಅಡಿಷನಲ್ ಎಸ್ಪಿ ವಿಷ್ಣವರ್ಧನ್, ಡಿವೈಎಸ್ಪಿ ರವೀಶ್ ಸಹಿತ ಉನ್ನತ ಅಧಿಕಾರಿಗಳು ಉಪಸ್ಥಿತರಿದ್ದರು.

ವಿಶೇಷವಾಗಿ ಬಿ.ಸಿ.ರೋಡ್ ನಲ್ಲಿ ಪೊಲೀಸ್ ಬಂದೋಬಸ್ತ್ ಎಂದಿಗಿಂತಲೂ ಜಾಸ್ತಿ ಇದೆ. ಶುಕ್ರವಾರ ಪ್ರತಿಭಟನೆಗೆ ಕರೆ ನೀಡಿರುವುದು ಹಾಗೂ ಸೆ.144ರನ್ವಯ ನಿಷೇಧಾಜ್ಞೆ ಜಾರಿಯಲ್ಲಿರುವುದು ಇದಕ್ಕೆ ಕಾರಣ.

ಬಿ.ಸಿ.ರೋಡ್ ನಲ್ಲಿ ಯುವಕನ ಇರಿದು ಪರಾರಿಯಾದ ದುಷ್ಕರ್ಮಿಗಳು

 

ಜಾಹೀರಾತು

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಆರು ತಂಡಗಳಲ್ಲಿ ಪೊಲೀಸ್ ತನಿಖೆ: ಎಸ್ಪಿ ಸುಧೀರ್ ರೆಡ್ಡಿ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*