ಬಂಟ್ವಾಳ

ಆರೆಸ್ಸೆಸ್ ಕಾರ್ಯಕರ್ತ ಶರತ್ ಮೃತ

ಮಂಗಳವಾರ ರಾತ್ರಿ ದುಷ್ಕರ್ಮಿಗಳಿಂದ ದಾಳಿಗೊಳಗಾಗಿ ಜೀವನ್ಮರಣ ಸ್ಥಿತಿಯಲ್ಲಿದ್ದ ಸಜೀಪಮುನ್ನೂರು ಗ್ರಾಮದ ಕಂದೂರು ಸಮೀಪ ನಿವಾಸಿ ಹಾಗೂ ಆರೆಸ್ಸೆಸ್ ಕಾರ್ಯಕರ್ತ ಶರತ್ (28) ಶುಕ್ರವಾರ ಸಂಜೆ ಮೃತಪಟ್ಟಿದ್ದಾರೆ.


ಬಿ.ಸಿ.ರೋಡಿನ ಹೆದ್ದಾರಿ ಸಮೀಪ ಉದಯ ಲಾಂಡ್ರಿಯನ್ನು ನಡೆಸುತ್ತಿದ್ದ ತನಿಯಪ್ಪ ಮಡಿವಾಳ ಅವರ ಏಕೈಕ ಪುತ್ರ ಶರತ್ ಅವರನ್ನು ಮಂಗಳವಾರ ರಾತ್ರಿ ಬೈಕಿನಲ್ಲಿ ಬಂದಿದ್ದ ಮೂವರು ಮಾರಕಾಸ್ತ್ರಗಳಿಂದ ಇರಿದಿದ್ದರು. ಕೂಡಲೇ ಸಮೀಪದ ಅಂಗಡಿ ಮಾಲೀಕರು ಹಾಗೂ ಸಾರ್ವಜನಿಕರ ಸಹಾಯದಿಂದ ಶರತ್ ಅವರನ್ನು ತುಂಬೆ ಆಸ್ಪತ್ರೆ, ಬಳಿಕ ಮಂಗಳೂರಿನ ಎ.ಜೆ.ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ದೇಹಕ್ಕೆ ಆದ ಬಲವಾದ ಗಾಯದಿಂದ ತೀವ್ರ ರಕ್ತಸ್ರಾವಗಳೊಂದಿಗೆ ಶರತ್ ಜೀವನ್ಮರಣ ಸ್ಥಿತಿಯಲ್ಲಿದ್ದರು. ಮೂರು ದಿನಗಳ ನಿರಂತರ ಚಿಕಿತ್ಸೆ ಬಳಿಕವೂ ಚಿಕಿತ್ಸೆಗೆ ಸ್ಪಂದಿಸದ ಶರತ್ ಅವರು ಮೃತಪಟ್ಟಿರುವುದಾಗಿ ಶುಕ್ರವಾರ ಘೋಷಿಸಲಾಯಿತು.
ಉದಯ ಲಾಂಡ್ರಿಯನ್ನು ಬಾಡಿಗೆ ಕಟ್ಟಡದಲ್ಲಿ ನಡೆಸುತ್ತಿದ್ದವರು ತನಿಯಪ್ಪ ಮಡಿವಾಳ. ಅವರ ಏಕೈಕ ಪುತ್ರ ಶರತ್. ಅಂಗಡಿ ವ್ಯವಹಾರಗಳ ಸಂಪೂರ್ಣ ಜವಾಬ್ದಾರಿಯನ್ನು ಶರತ್ ಹೊತ್ತಿದ್ದರು. ತಾಯಿ, ಇಬ್ಬರು ಅಕ್ಕಂದಿರು.
ಶರತ್ ಮೃತಪಟ್ಟಿರುವ ಹಿನ್ನೆಲೆಯಲ್ಲಿ ಬಂಟ್ವಾಳ ಸಹಿತ ಜಿಲ್ಲೆಯಾದ್ಯಂತ ಬಿಗು ಬಂದೋಬಸ್ತ್ ಏರ್ಪಡಿಸಲಾಗಿದೆ. ಈಗಾಗಲೇ ಸೆ.144ರನ್ವಯ ನಿಷೇಧಾಜ್ಞೆ ಹೇರಲಾಗಿದ್ದು, ವಿವಿಧೆಡೆಗಳಿಂದ ಹೆಚ್ಚುವರಿ ಪೊಲೀಸರು ಆಗಮಿಸಿದ್ದಾರೆ. ಪರಿಸ್ಥಿತಿಯ ಮೇಲೆ ತೀವ್ರ ನಿಗಾ ಇರಿಸಲಾಗಿದೆ. ಯಾವುದೇ ವದಂತಿಗಳಿಗೆ ಕಿವಿಗೊಡದಂತೆ ಪೊಲೀಸರು ಮನವಿ ಮಾಡಿದ್ದಾರೆ.

ಜಾಹೀರಾತು
ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.