ಬಂಟ್ವಾಳ

ಆರೆಸ್ಸೆಸ್ ಕಾರ್ಯಕರ್ತ ಶರತ್ ಮೃತ

ಮಂಗಳವಾರ ರಾತ್ರಿ ದುಷ್ಕರ್ಮಿಗಳಿಂದ ದಾಳಿಗೊಳಗಾಗಿ ಜೀವನ್ಮರಣ ಸ್ಥಿತಿಯಲ್ಲಿದ್ದ ಸಜೀಪಮುನ್ನೂರು ಗ್ರಾಮದ ಕಂದೂರು ಸಮೀಪ ನಿವಾಸಿ ಹಾಗೂ ಆರೆಸ್ಸೆಸ್ ಕಾರ್ಯಕರ್ತ ಶರತ್ (28) ಶುಕ್ರವಾರ ಸಂಜೆ ಮೃತಪಟ್ಟಿದ್ದಾರೆ.


ಬಿ.ಸಿ.ರೋಡಿನ ಹೆದ್ದಾರಿ ಸಮೀಪ ಉದಯ ಲಾಂಡ್ರಿಯನ್ನು ನಡೆಸುತ್ತಿದ್ದ ತನಿಯಪ್ಪ ಮಡಿವಾಳ ಅವರ ಏಕೈಕ ಪುತ್ರ ಶರತ್ ಅವರನ್ನು ಮಂಗಳವಾರ ರಾತ್ರಿ ಬೈಕಿನಲ್ಲಿ ಬಂದಿದ್ದ ಮೂವರು ಮಾರಕಾಸ್ತ್ರಗಳಿಂದ ಇರಿದಿದ್ದರು. ಕೂಡಲೇ ಸಮೀಪದ ಅಂಗಡಿ ಮಾಲೀಕರು ಹಾಗೂ ಸಾರ್ವಜನಿಕರ ಸಹಾಯದಿಂದ ಶರತ್ ಅವರನ್ನು ತುಂಬೆ ಆಸ್ಪತ್ರೆ, ಬಳಿಕ ಮಂಗಳೂರಿನ ಎ.ಜೆ.ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ದೇಹಕ್ಕೆ ಆದ ಬಲವಾದ ಗಾಯದಿಂದ ತೀವ್ರ ರಕ್ತಸ್ರಾವಗಳೊಂದಿಗೆ ಶರತ್ ಜೀವನ್ಮರಣ ಸ್ಥಿತಿಯಲ್ಲಿದ್ದರು. ಮೂರು ದಿನಗಳ ನಿರಂತರ ಚಿಕಿತ್ಸೆ ಬಳಿಕವೂ ಚಿಕಿತ್ಸೆಗೆ ಸ್ಪಂದಿಸದ ಶರತ್ ಅವರು ಮೃತಪಟ್ಟಿರುವುದಾಗಿ ಶುಕ್ರವಾರ ಘೋಷಿಸಲಾಯಿತು.
ಉದಯ ಲಾಂಡ್ರಿಯನ್ನು ಬಾಡಿಗೆ ಕಟ್ಟಡದಲ್ಲಿ ನಡೆಸುತ್ತಿದ್ದವರು ತನಿಯಪ್ಪ ಮಡಿವಾಳ. ಅವರ ಏಕೈಕ ಪುತ್ರ ಶರತ್. ಅಂಗಡಿ ವ್ಯವಹಾರಗಳ ಸಂಪೂರ್ಣ ಜವಾಬ್ದಾರಿಯನ್ನು ಶರತ್ ಹೊತ್ತಿದ್ದರು. ತಾಯಿ, ಇಬ್ಬರು ಅಕ್ಕಂದಿರು.
ಶರತ್ ಮೃತಪಟ್ಟಿರುವ ಹಿನ್ನೆಲೆಯಲ್ಲಿ ಬಂಟ್ವಾಳ ಸಹಿತ ಜಿಲ್ಲೆಯಾದ್ಯಂತ ಬಿಗು ಬಂದೋಬಸ್ತ್ ಏರ್ಪಡಿಸಲಾಗಿದೆ. ಈಗಾಗಲೇ ಸೆ.144ರನ್ವಯ ನಿಷೇಧಾಜ್ಞೆ ಹೇರಲಾಗಿದ್ದು, ವಿವಿಧೆಡೆಗಳಿಂದ ಹೆಚ್ಚುವರಿ ಪೊಲೀಸರು ಆಗಮಿಸಿದ್ದಾರೆ. ಪರಿಸ್ಥಿತಿಯ ಮೇಲೆ ತೀವ್ರ ನಿಗಾ ಇರಿಸಲಾಗಿದೆ. ಯಾವುದೇ ವದಂತಿಗಳಿಗೆ ಕಿವಿಗೊಡದಂತೆ ಪೊಲೀಸರು ಮನವಿ ಮಾಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ