ನಡೆಯುತ್ತಿದೆ ತನಿಖೆ, ಬರಲಿದ್ದಾರೆ ಹೊಸ ಮುಖಗಳು

ನಿಷೇಧಾಜ್ಞೆ ವಿಸ್ತರಣೆ ಆಗಿದೆ. ಜನರಿಗೆ ಸಾಕಪ್ಪಾ ಸಾಕು ಎಂಬ ಭಾವನೆ ಮೂಡಿದರೂ ಮೇಲ್ನೋಟಕ್ಕೆ ಇದು ಅನಿವಾರ್ಯವೂ ಹೌದು ಎಂದೆನಸಿದೆ. ಏಕೆಂದರೆ ಹದಿನೈದು ದಿನ ಯಾವ ಘಟನೆ ನಡೆದೇ ಇಲ್ಲದ ಸಂದರ್ಭವೂ ನಿಷೇಧಾಜ್ಞೆ ವಿಸ್ತರಣೆಯಾದಾಗ ಯಾಕೆ ಬೇಕಿತ್ತಾ, ಎಂಬ ಪ್ರಶ್ನೆಗಳು ಎಲ್ಲರಲ್ಲೂ ಮೂಡಿತ್ತು. ಆದರೆ ಮತ್ತೆ ಅಹಿತಕರ ಘಟನೆಗಳು ಸಾಲು ಸಾಲಾಗಿ ನಡೆದಿರುವಾಗ ಸೆ.144 ಜಾರಿಯಲ್ಲಿರುವುದು ಸಮಾಜದ ಸ್ವಾಸ್ಥ್ಯ ಕಾಪಾಡಲು ಅನಿವಾರ್ಯವೂ ಹೌದು. ಹೀಗಾಗಿ ಜುಲೈ 21ರವರೆಗೆ ಸಾರ್ವಜನಿಕರೂ ಇದಕ್ಕೆ ಸ್ಪಂದಿಸುವುದು ಅನಿವಾರ್ಯವೂ ಆಗಿದೆ.

ಜಾಹೀರಾತು

ಇದೇ ವೇಳೆ ಪೊಲೀಸರು ಹಲವು ಮನೆಗಳಿಗೆ ದಾಳಿ ಮಾಡಿ ವಶಕ್ಕೆ ತೆಗೆದುಕೊಳ್ಳುವ ಕಾರ್ಯವವನ್ನು ವಿವಿಧ ಪ್ರಕರಣಗಳಡಿ ಮಾಡುತ್ತಾ ಬಂದಿದ್ದಾರೆ. ಈ ಕಾರ್ಯಾಚರಣೆ ಕುರಿತು ಸುದ್ದಿಗಾರರಿಗೂ ಈ ಕುರಿತು ಸ್ಪಷ್ಟ ಮಾಹಿತಿ ನೀಡಲು ಪೊಲೀಸರು ಕಳೆದ ಎರಡು ದಿನಗಳಿಂದ ನಿರಾಕರಿಸುತ್ತಿದ್ದಾರೆ.

ವರ್ಗಾವರ್ಗಿ:

ಕಲ್ಲಡ್ಕ ಘಟನೆ ಬಳಿಕ ಪೊಲೀಸರ ವರ್ಗಾವರ್ಗಿ ನಡೆಯುತ್ತಿದೆ. ವಿಶೇಷವೆಂದರೆ ಇಲ್ಲಿಗೆ ಆಗಮಿಸುವವರ ಹೆಸರು ಬದಲಾಗುತ್ತಲೇ ಇದೆ. ಈ ಹಿಂದೆ ಸರ್ಕಲ್ ಇನ್ಸ್‌ಪೆಕ್ಟರ್ ಬಿ.ಕೆ.ಮಂಜಯ್ಯ ಅವರನ್ನು ವರ್ಗಾಯಿಸಿ ಆದೇಶ ಹೊರಡಿಸಲಾಗಿತ್ತು. ಅವರ ಬದಲಿಗೆ ಸಂದೇಶ್ ಅವರನ್ನು ನಿಯುಕ್ತಿಗೊಳಿಸಿರುವ ಕುರಿತು ಮಾಹಿತಿ ನೀಡಲಾಗಿತ್ತು. ಆದರೆ ದಿಢೀರನೆ ಸಂದೇಶ್ ಬದಲಿಗೆ ಮತ್ತೊಬ್ಬರನ್ನು ಸರ್ಕಲ್ ಇನ್ಸ್‌ಪೆಕ್ಟರ್ ಆಗಿ ನಿಯುಕ್ತಿಗೊಳಿಸಿ ಸರಕಾರ ಸೂಚನೆ ಹೊರಡಿಸಿದೆ. ಚಿಕ್ಕಮಗಳೂರು ಜಿಲ್ಲೆಯ ಎಸಿಬಿಯಲ್ಲಿರುವ ಬ್ರಿಜೇಶ್ ಮ್ಯಾಥ್ಯೂ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸಾರ್ವಜನಿಕ ಹಿತದೃಷ್ಟಿಯಿಂದ ಹಾಗೂ ಆಡಳಿತಾತ್ಮಕ ಕಾರಣಗಳಿಗಾಗಿ ಬಂಟ್ವಾಳ ವೃತ್ತದಲ್ಲಿ ಖಾಲಿ ಇರುವ ಸಿಪಿಐ ಹುದ್ದೆಗೆ ವರ್ಗಾಯಿಸಿ ಆದೇಶ ಹೊರಡಿಸಲಾಗಿದೆ.  ಹೊಳೆನರಸೀಪುರ ಉಪವಿಭಾಗ ಎಎಸ್ಪಿ ಡಾ.ಅರುಣ್ ಕೆ. ಅವರನ್ನು ಬಂಟ್ವಾಳಕ್ಕೆ ನೇಮಿಸಿ ಆದೇಶ ಹೊರಡಿಸಲಾಗಿದೆ ಎಂದು ಸುದ್ದಿಮಾಧ್ಯಮಗಳು ವರದಿ ಮಾಡಿವೆ. ರಾಜಕೀಯವಾಗಿ ತಿರುವು ಪಡೆದುಕೊಂಡಿರುವ ಕಲ್ಲೆಸೆತ ಪ್ರಕರಣದ ತನಿಖೆಯ ಸುದ್ದಿಯೇ ಈಗ ಕೇಳಿಬರುತ್ತಿರುವ ಕಾರಣ, ಶರತ್ ಹತ್ಯೆ ಪ್ರಕರಣದ ತನಿಖಾ ಪ್ರಗತಿ ಕುರಿತು ಪೊಲೀಸರು ಮಾಧ್ಯಮದವರ ಪ್ರಶ್ನೆಗೆ ಮೌನ ಕಾಪಾಡಿಕೊಂಡಿದ್ದಾರೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ನಡೆಯುತ್ತಿದೆ ತನಿಖೆ, ಬರಲಿದ್ದಾರೆ ಹೊಸ ಮುಖಗಳು"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*