ಬಂಟ್ವಾಳ

ನಡೆಯುತ್ತಿದೆ ತನಿಖೆ, ಬರಲಿದ್ದಾರೆ ಹೊಸ ಮುಖಗಳು

ನಿಷೇಧಾಜ್ಞೆ ವಿಸ್ತರಣೆ ಆಗಿದೆ. ಜನರಿಗೆ ಸಾಕಪ್ಪಾ ಸಾಕು ಎಂಬ ಭಾವನೆ ಮೂಡಿದರೂ ಮೇಲ್ನೋಟಕ್ಕೆ ಇದು ಅನಿವಾರ್ಯವೂ ಹೌದು ಎಂದೆನಸಿದೆ. ಏಕೆಂದರೆ ಹದಿನೈದು ದಿನ ಯಾವ ಘಟನೆ ನಡೆದೇ ಇಲ್ಲದ ಸಂದರ್ಭವೂ ನಿಷೇಧಾಜ್ಞೆ ವಿಸ್ತರಣೆಯಾದಾಗ ಯಾಕೆ ಬೇಕಿತ್ತಾ, ಎಂಬ ಪ್ರಶ್ನೆಗಳು ಎಲ್ಲರಲ್ಲೂ ಮೂಡಿತ್ತು. ಆದರೆ ಮತ್ತೆ ಅಹಿತಕರ ಘಟನೆಗಳು ಸಾಲು ಸಾಲಾಗಿ ನಡೆದಿರುವಾಗ ಸೆ.144 ಜಾರಿಯಲ್ಲಿರುವುದು ಸಮಾಜದ ಸ್ವಾಸ್ಥ್ಯ ಕಾಪಾಡಲು ಅನಿವಾರ್ಯವೂ ಹೌದು. ಹೀಗಾಗಿ ಜುಲೈ 21ರವರೆಗೆ ಸಾರ್ವಜನಿಕರೂ ಇದಕ್ಕೆ ಸ್ಪಂದಿಸುವುದು ಅನಿವಾರ್ಯವೂ ಆಗಿದೆ.

ಜಾಹೀರಾತು

ಇದೇ ವೇಳೆ ಪೊಲೀಸರು ಹಲವು ಮನೆಗಳಿಗೆ ದಾಳಿ ಮಾಡಿ ವಶಕ್ಕೆ ತೆಗೆದುಕೊಳ್ಳುವ ಕಾರ್ಯವವನ್ನು ವಿವಿಧ ಪ್ರಕರಣಗಳಡಿ ಮಾಡುತ್ತಾ ಬಂದಿದ್ದಾರೆ. ಈ ಕಾರ್ಯಾಚರಣೆ ಕುರಿತು ಸುದ್ದಿಗಾರರಿಗೂ ಈ ಕುರಿತು ಸ್ಪಷ್ಟ ಮಾಹಿತಿ ನೀಡಲು ಪೊಲೀಸರು ಕಳೆದ ಎರಡು ದಿನಗಳಿಂದ ನಿರಾಕರಿಸುತ್ತಿದ್ದಾರೆ.

ವರ್ಗಾವರ್ಗಿ:

ಕಲ್ಲಡ್ಕ ಘಟನೆ ಬಳಿಕ ಪೊಲೀಸರ ವರ್ಗಾವರ್ಗಿ ನಡೆಯುತ್ತಿದೆ. ವಿಶೇಷವೆಂದರೆ ಇಲ್ಲಿಗೆ ಆಗಮಿಸುವವರ ಹೆಸರು ಬದಲಾಗುತ್ತಲೇ ಇದೆ. ಈ ಹಿಂದೆ ಸರ್ಕಲ್ ಇನ್ಸ್‌ಪೆಕ್ಟರ್ ಬಿ.ಕೆ.ಮಂಜಯ್ಯ ಅವರನ್ನು ವರ್ಗಾಯಿಸಿ ಆದೇಶ ಹೊರಡಿಸಲಾಗಿತ್ತು. ಅವರ ಬದಲಿಗೆ ಸಂದೇಶ್ ಅವರನ್ನು ನಿಯುಕ್ತಿಗೊಳಿಸಿರುವ ಕುರಿತು ಮಾಹಿತಿ ನೀಡಲಾಗಿತ್ತು. ಆದರೆ ದಿಢೀರನೆ ಸಂದೇಶ್ ಬದಲಿಗೆ ಮತ್ತೊಬ್ಬರನ್ನು ಸರ್ಕಲ್ ಇನ್ಸ್‌ಪೆಕ್ಟರ್ ಆಗಿ ನಿಯುಕ್ತಿಗೊಳಿಸಿ ಸರಕಾರ ಸೂಚನೆ ಹೊರಡಿಸಿದೆ. ಚಿಕ್ಕಮಗಳೂರು ಜಿಲ್ಲೆಯ ಎಸಿಬಿಯಲ್ಲಿರುವ ಬ್ರಿಜೇಶ್ ಮ್ಯಾಥ್ಯೂ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸಾರ್ವಜನಿಕ ಹಿತದೃಷ್ಟಿಯಿಂದ ಹಾಗೂ ಆಡಳಿತಾತ್ಮಕ ಕಾರಣಗಳಿಗಾಗಿ ಬಂಟ್ವಾಳ ವೃತ್ತದಲ್ಲಿ ಖಾಲಿ ಇರುವ ಸಿಪಿಐ ಹುದ್ದೆಗೆ ವರ್ಗಾಯಿಸಿ ಆದೇಶ ಹೊರಡಿಸಲಾಗಿದೆ.  ಹೊಳೆನರಸೀಪುರ ಉಪವಿಭಾಗ ಎಎಸ್ಪಿ ಡಾ.ಅರುಣ್ ಕೆ. ಅವರನ್ನು ಬಂಟ್ವಾಳಕ್ಕೆ ನೇಮಿಸಿ ಆದೇಶ ಹೊರಡಿಸಲಾಗಿದೆ ಎಂದು ಸುದ್ದಿಮಾಧ್ಯಮಗಳು ವರದಿ ಮಾಡಿವೆ. ರಾಜಕೀಯವಾಗಿ ತಿರುವು ಪಡೆದುಕೊಂಡಿರುವ ಕಲ್ಲೆಸೆತ ಪ್ರಕರಣದ ತನಿಖೆಯ ಸುದ್ದಿಯೇ ಈಗ ಕೇಳಿಬರುತ್ತಿರುವ ಕಾರಣ, ಶರತ್ ಹತ್ಯೆ ಪ್ರಕರಣದ ತನಿಖಾ ಪ್ರಗತಿ ಕುರಿತು ಪೊಲೀಸರು ಮಾಧ್ಯಮದವರ ಪ್ರಶ್ನೆಗೆ ಮೌನ ಕಾಪಾಡಿಕೊಂಡಿದ್ದಾರೆ.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts

ಮಂಗಳೂರು ಕಡಲ ತೀರ ʼಕಡಲ ಪವನ ಶಕ್ತಿ ಉತ್ಪಾದನಾ ವಲಯʼವಾಗಿ ಅಭಿವೃದ್ಧಿಪಡಿಸಲು ಕೇಂದ್ರಕ್ಕೆ ಮನವಿ

ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)

1 hour ago