ಬಂಟ್ವಾಳ ಉಪವಿಭಾಗದ ನೂತನ ಎಎಸ್ಪಿಯಾಗಿ ಡಾ.ಕೆ. ಅರುಣ್ ಅವರು ಗುರುವಾರ ಸಂಜೆ ಅಧಿಕಾರ ಸ್ವೀಕರಿಸಿದರು.
ಕಳೆದ ಒಂದೂವರೆ ತಿಂಗಳಿನಿಂದ ತಾಲೂಕಿನಾದ್ಯಂತ ನಡೆಯುತ್ತಿರುವ ಕೋಮು ಸಂಘರ್ಷ,ಎರಡು ಕೊಲೆ ಪ್ರಕರಣ ಸಹಿತ ಅಹಿತಕರ ಘಟನೆ ಹಿನ್ನಲೆಯಲ್ಲಿ ಬಂಟ್ವಾಳ ಡಿವೈಎಸ್ಪಿ ರವೀಶ್ ಸಿ.ಆರ್, ಸಿಐ, ನಗರ ಠಾಣಾ ಎಸ್ ಐ ಅವರನ್ನು ವರ್ಗಾವಣೆಗೊಳಿಸಿ ಸರಕಾರ ಆದೇಶಿಸಿತ್ತು.
ಡಿವೈಎಸ್ಪಿ ರವೀಶ್ ಅವರಿಂದ ಅಧಿಕಾರ ಸ್ವೀಕರಿಸಿದ ಬಳಿಕ ಡಾ. ಅರುಣ್, ಕಲ್ಲಡ್ಕ ಸಹಿತ ಹಲವು ಭಾಗಗಳಿಗೆ ಭೇಟಿ ನೀಡಿದರು.