ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಸೂರಿಕುಮೇರುವಿನಿಂದ ಕಲ್ಲಡ್ಕ ತನಕ ರಸ್ತೆ ಬದಿಯ ಮರಗಳನ್ನು ತೆರವುಗೊಳಿಸುವ ಕಾರ್ಯವನ್ನು ಗುತ್ತಿಗೆದಾರರು ಹಮ್ಮಿಕೊಂಡಿರುವುದರಿಂದ ಕಾಮಗಾರಿ ಮುಗಿಯುವ ತನಕ ಪ್ರತಿ ಸೋಮವಾರ, ಬುಧವಾರ ಹಾಗೂ ಶುಕ್ರವಾರದಂದು ಬಾಳ್ತಿಲ, ಗೋಳ್ತಮಜಲು ಹಾಗೂ ಮಾಣಿ ಗ್ರಾಮದ ಪ್ರದೇಶಗಳಲ್ಲಿ ಬೆಳಿಗ್ಗೆ 9 ರಿಂದ ಸಂಜೆ 6ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.