ಪೆರಾಜೆಯಲ್ಲಿ ಭಜನಾ ಮಂದಿರ ಉದ್ಘಾಟನೆ

ಪೆರಾಜೆ ಗ್ರಾಮದ ಮಿತ್ತಪೆರಾಜೆ ಬೊಳ್ಳುಕಲ್ಲು ಎಂಬಲ್ಲಿ ಗುಡ್ಡಚಾಮುಂಡೇಶ್ವರಿ ಸೇವಾ ಟ್ರಸ್ಟ್ ಇದರ ವತಿಯಿಂದ  ನೂತನವಾಗಿ ನಿರ್ಮಾಣವಾಗಿರುವ ಶ್ರೀದೇವಿ ಭಜನಾ ಮಂದಿರವನ್ನು ಕಡೇಶ್ವಾಲ್ಯ ಅರ್ಚಕ ವೇದಮೂರ್ತಿ ಶ್ರೀಹರಿ ಭಟ್ ಕಡೆಶ್ವಾಲ್ಯ ದೀಪ ಬೆಳಗಿಸಿ ಉದ್ಘಾಟಿಸಿದರು. ಪೂರ್ವಾಹ್ನ ವಾಸ್ತು ಪೂಜೆ, ಗಣಹೋಮ ಬಳಿಕ ಶ್ರೀದೇವಿ ಪ್ರತಿಷ್ಟಾಪನೆ ಹಾಗೂ ಪ್ರಾರ್ಥನಾ ಸಂಕಲ್ಪವನ್ನು ನೆರವೇರಿಸಿದರು.

ಜಾಹೀರಾತು

ವಿವಿಧ ಭಜನಾ ಮಂಡಳಿಗಳಿಂದ ಭಜನಾ ಸೇವೆ ನೆರವೇರಿತು. ವನಿತಾ ಸಮಾಜ ಉಪ್ಪಿನಂಗಡಿ , ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ ನೇರಳೆಕಟ್ಟೆ, ಶ್ರೀರಾಮ ಭಜನಾ ಮಂಡಳಿ ಕಲ್ಲಡ್ಕ, ದುರ್ಗಾಪರಮೇಶ್ವರಿ ಭಜನಾ ಮಂಡಳಿ ಕರಿಂಕ, ಶ್ರೀ ಶಾರದಾಂಬ ಭಜನಾ ಮಂಡಳಿ ಮಾಣಿ, ವಿನಾಯಕ ಭಜನಾ ಮಂಡಳಿ ನಂದಾವರ, ವಿಷ್ಣಮೂರ್ತಿ ಭಜನಾ ಮಂಡಳಿ ಪೆರಾಜೆ ಇವರು ಭಜನಾ ಸೇವೆಯನ್ನು ನೆರವೇರಿಸಿಕೊಟ್ಟರು.

ಈ ಸಂದರ್ಭದಲ್ಲಿ ಪೆರಾಜೆಗುತ್ತು ಶ್ರೀಕಾಂತ ಆಳ್ವ , ಜಯರಾಮ ರೈ, ಅಪ್ರಾಯ ಪೈ ಬುಡೋಳಿ, ಜಯಾನಂದ ಪೆರಾಜೆ , ತಾ.ಪಂ. ಸದಸ್ಯೆ ಮಂಜುಳ ಕುಶಾಲ ಪೆರಾಜೆ, ಗ್ರಾಮ ಪಂಚಾಯತ್ ಅಧ್ಯಕ್ಷೆ ಪುಷ್ಪಾ, ಉಪಾಧ್ಯಕ್ಷೆ ಗುಲಾಬಿ, ಸದಸ್ಯ ಉಮೇಶ್ ಎಸ್.ಪಿ, ಶ್ರೀನಿವಾಸ ಪೂಜಾರಿ, ಮಾಜಿ ಸದಸ್ಯ ಲಿಂಗಪ್ಪ ಮೂಲ್ಯ , ನಾರಾಯಣ ಎಮ್.ಪಿ ಪಾಳ್ಯ, ಕಾಡೂರು ಶಿವರಾಮ ಭಟ್ , ರಾಜರಾಮ ಕಾಡೂರು, ಬಿ.ಟಿ.ನಾರಾಯಣ ಭಟ್ , ಚಂದ್ರಹಾಸ ಶೆಟ್ಟಿ ಬುಡೋಳಿ ಗುತ್ತು, ರಾಜಾರಾಮ ಕಾಡೂರು,  ನಾರಾಯಣ ಭಟ್, ಮುರಗಜೆ ಕೃಷ್ಣ ಭಟ್,ಭಾರತಿ ಜೆ.ಪಿ. ,ಪುಷ್ಪರಾಜ ಚೌಟ ಮಾಣಿ, ದೂಮಣ್ಣ ಗೌಡ, ಉಪಸ್ಥಿತರಿದ್ದರು.  ಸ್ಥಳ ದಾನದ ಮಾಡಿದ ಮೈಂದಗುರಿ ನಾರಾಯಣ ಮೂಲ್ಯ ಮತ್ತು ಮಿತ್ತ ಪೆರಾಜೆ ನಾರಾಯಣ ಮೂಲ್ಯ ಇವರನ್ನು ಅಭಿನಂದಿಸಲಾಯಿತು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಪೆರಾಜೆಯಲ್ಲಿ ಭಜನಾ ಮಂದಿರ ಉದ್ಘಾಟನೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*