ಪುಂಜಾಲಕಟ್ಟೆ

ಎನ್ನೆಸ್ಸೆಸ್, ವಿದ್ಯಾರ್ಥಿ ಸಂಘ ಉದ್ಘಾಟನೆ

ತಾಲೂಕಿನ ಕಕ್ಯಪದವು ಉಳಿ ಎಂಬಲ್ಲಿ ಎಲ್.ಸಿ.ಆರ್. ಇಂಡಿಯನ್ ಪದವಿಪೂರ್ವ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಮತ್ತು ವಿದ್ಯಾರ್ಥಿ ಸಂಘದ ಉದ್ಘಾಟನೆ ನಡೆಯಿತು.
ವಾಮದಪದವು ಸರಕಾರಿ ಪದವಿಪೂರ್ವ ಕಾಲೇಜಿನ ಇತಿಹಾಸ ಉಪನ್ಯಾಸಕ ಸುಧಾಕರ ಪ್ರಭು ಕಾರ್ಯಕ್ರಮ ಉದ್ಘಾಟಿಸಿದರು. ಈ ಸಂದರ್ಭ ಮಾತನಾಡಿದ ಅವರು ಎನ್ನೆಸ್ಸೆಸ್ ವ್ಯಕ್ತಿಯ ಜೀವನದಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಸರ್ವಧರ್ಮಗಳು ಒಂದೇ, ನಾವೆಲ್ಲರೂ ಒಂದಾಗಿ ಬಾಳಿ ಶಿಸ್ತು, ಸಂಯಮ, ಹೊಂದಾಣಿಕೆ, ಸಮಯಪಾಲನೆ, ಸೇವಾಮನೋಭಾವನೆಯನ್ನು ನಮ್ಮಲ್ಲಿ ಬೆಳೆಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಎಲ್.ಸಿ.ಆರ್ ವಿದ್ಯಾ ಸಂಸ್ಥೆಯ ಪ್ರಾಂಶುಪಾಲ ಪ್ರವೀಣ್ ಎ. ಅಧ್ಯಕ್ಷತೆ ವಹಿಸಿ ಮಾತನಾಡಿ ರಾಷ್ಟ್ರೀಯ ಸೇವಾ ಯೋಜನಾ ಘಟಕದ ನಿಯಮಗಳಿಗೆ ಬದ್ಧರಾಗಿ ಅದನ್ನು ಜೀವನದಲ್ಲಿ ಅನುಸರಿಸಕೊಳ್ಳಬೇಕು ಎಂದರು.
ರಾಷ್ಟ್ರೀಯ ಸೇವಾ ಯೋಜನಾ ಘಟಕz ಯೋಜನಾಧಿಕಾರಿ ಹಾಗೂ ವಾಣಿಜ್ಯ ವಿಭಾಗದ ಮುಖ್ಯಸ್ಥ ಶಿವರಾಜ್ ಗಟ್ಟಿ, ಕಲಾ ವಿಭಾಗದ ಮುಖ್ಯಸ್ಥೆ ವಿಂದ್ಯಾಶ್ರೀ, ವಿದ್ಯಾರ್ಥಿ ಸಂಘದ ನಾಯಕ ಪ್ರೀತಮ್, ನಾಯಕಿ ದಿಲ್‌ಶಾದ್ ಬಾನು, ರಾಷ್ಟ್ರೀಯ ಸೇವಾ ಯೋಜನಾ ಘಟಕದ ನಾಯಕ ಮಿಥುನ್ ಕುಮಾರ್, ನಾಯಕಿ ರೋಶಲ್ ಸವಿತಾ ಕೊರ್ಡೆರೊ ಉಪಸ್ಥಿತರಿದ್ದರು.
ಘಟಕದ ನಾಯಕ ಮಿಥುನ್ ಕುಮಾರ್ ಸ್ವಾಗತಿಸಿ, ಯೋಜನಾಧಿಕಾರಿ ಶಿವರಾಜ್ ಗಟ್ಟಿ ಪ್ರಾಸ್ತವಿಕ ಮಾತನಾಡಿ, ನಾಯಕಿ ದಿಲ್‌ಶಾದ್ ಬಾನು ವಾರ್ಷಿಕ ವರದಿ ವಾಚಿಸಿದರು. ನಾಯಕಿ ರೋಶಲ್ ಸವಿತಾ ಕೊರ್ಡೆರೊ ವಂದಿಸಿದರು. ಪಯಾಜ್ ಮತ್ತು ಸುಜೀತ್ ದ್ವಿತೀಯಾ ವಾಣಿಜ್ಯ ವಿಭಾU ಕಾರ್ಯಕ್ರಮ ನಿರೂಪಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ