ಬಂಟ್ವಾಳ

ಬಂಟ್ವಾಳದಲ್ಲಿ ಮತ್ತೆ ಅಪಘಾತ

ಬೈಪಾಸು ರಸ್ತೆಯಿಂದ ಮೂಡುಬಿದರೆಗೆ ತೆರಳುವ ಮಾರ್ಗದಲ್ಲಿರುವ ವೈದ್ಯನಾಥ ದೇವಸ್ಥಾನದ ಬಳಿ ಇರುವ ಅಪಾಯಕಾರಿ ತಿರುವಿನ ಬಳಿ ಮತ್ತೊಂದು ಅಪಘಾತ ಸೋಮವಾರ ಬೆಳಗ್ಗೆ ಸಂಭವಿಸಿದೆ.

ಜಾಹೀರಾತು

ಹುಂಡೈ ಇಯಾನ್ ಕಾರೊಂದು ಬೆಳಗ್ಗೆ ಚಾಲಕನ ನಿಯಂತ್ರಣ ತಪ್ಪಿ ಹೊಂಡಕ್ಕೆ ಬಿದ್ದಿದೆ. ಕಾರಿನಲ್ಲಿ ಇಬ್ಬರು ಪ್ರಯಾಣಿಕರಿದ್ದು, ಅವರನ್ನು ಅದೇ ದಾರಿಯಲ್ಲಿ ಆಗಮಿಸುತ್ತಿದ್ದ ಗೇರು ಅಭಿವೃದ್ಧಿ ನಿಗಮ ಸದಸ್ಯ ಜಗದೀಶ ಕೊಯ್ಲ ತುಂಬೆ ಆಸ್ಪತ್ರೆಗೆ ಸಾಗಿಸಲು ನೆರವಾದರು.

ಇದೇ ಜಾಗದ ಸಮೀಪ ಕಳೆದ ಆರು ತಿಂಗಳ ಅವಧಿಯಲ್ಲಿ ಸಂಭವಿಸಿದ ಎರಡನೇ ಅಪಘಾತವಿದು. ಒಟ್ಟಾರೆಯಾಗಿ ಇಲ್ಲಿ ಇತ್ತೀಚಿನ ವರ್ಷಗಳಲ್ಲಿ ನಾಲ್ಕು ಅಪಘಾತಗಳು ಸಂಭವಿಸಿವೆ.

ಕೆಲ ತಿಂಗಳ ಹಿಂದೆ ಇದೇ ಜಾಗದಲ್ಲಿ ವಿಟ್ಲದ ಅರ್ಚಕ ಕಾರು ಅಪಘಾತಕ್ಕೆ ಬಲಿಯಾಗಿದ್ದರು. ಅಪಾಯಕಾರಿ ತಿರುವಿನಲ್ಲಿ ಎಚ್ಚರಿಕೆ ಫಲಕಗಳನ್ನು ಚಾಲಕರಿಗೆ ಕಾಣಿಸುವಂತೆ ಹಾಕುವುದು ಹಾಗೂ ಅಪಘಾತ ತಡೆಗೆ ಕ್ರಮ ಕೈಗೊಳ್ಳುವುದನ್ನು ಇಲ್ಲಿ ಮಾಡಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ