ಒಳ್ಳೆಯದನ್ನು ಯೋಚಿಸಿದಾಗ ಜಗತ್ತು ಒಳ್ಳೆಯದಾಗಿರುವುದು – ಮಾಣಿಲಶ್ರೀ

ನಾವು ಒಳ್ಳೆಯದನ್ನೇ ಯೋಚಿಸಿದಾಗ ಜಗತ್ತು ನಮಗೆ ಒಳ್ಳೆಯದೇ ಆಗಿ ಕಾಣುವುದು. ನಮ್ಮ ಮನಸ್ಸಿನ ಯೋಚನೆಗಳಲ್ಲಿ ಎಲ್ಲವೂ ಅಡಗಿದೆ ಎಂದು ಮಾಣಿಲ ಶ್ರೀಧಾಮ ಶ್ರೀಮಹಾಲಕ್ಷ್ಮೀ ಕ್ಷೇತ್ರದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಹೇಳಿದರು.

ಜಾಹೀರಾತು

ಮಾಣಿಲ ಶ್ರೀಧಾಮ ಶ್ರೀ ಮಹಾಲಕ್ಷ್ಮೀ ಕ್ಷೇತ್ರದಲ್ಲಿ ಭಾನುವಾರ 48 ದಿನಗಳ ಸಾಮೂಹಿಕ ಲಕ್ಷ್ಮೀ ಪೂಜೆಯ ಅಂಗವಾಗಿ ನಾನಾ ವೈದಿಕ, ಧಾರ್ಮಿಕ ಕಾರ್‍ಯಕ್ರಗಳ ಬಳಿಕ ನಡೆದ ಧಾರ್ಮಿಕ ಸಭೆಯಲ್ಲಿ ಆಶೀರ್ವಚನ ನೀಡಿದರು. ಮಕ್ಕಳು ಪ್ರತಿಯೊಬ್ಬ ತಂದೆತಾಯಂದಿರ ಅಮೂಲ್ಯ ಸಂಪತ್ತಾಗಿದ್ದು, ಆ ಸಂಪತ್ತು ದೇಶದ ಸಂಪತ್ತಾಗಿ ಪರಿವರ್ತನೆಗೊಳಿಸುವ ಮಹತ್ತರ ಜವಾಬ್ದಾರಿ ಹೆತ್ತವರ ಮೇಲಿದೆ ಎಂದು ತಿಳಿಸಿದರು.

ಧಾರ್ಮಿಕ ಉಪನ್ಯಾಸ ನೀಡಿದ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್‍ಯಕರ್ತ, ಶ್ರೀ ಕ್ಷೇತ್ರದ ವೈದಿಕ ಬೋಳುಬೈಲು ಸುಬ್ರಹ್ಮಣ್ಯ ಭಟ್ ಭೋಗದೃಷ್ಟಿಯನ್ನಿಡದೇ ತ್ಯಾ ದೃಷ್ಟಿಯ ಜೀವನದಲ್ಲಿ ಸುಖಸಂತೋಷವಿದೆ ಎಂದು ತಿಳಿಸಿದರು.

ಸಮಾರಂಭದಲ್ಲಿ ಬೆಂಗಳೂರು ಶ್ರೀಧಾಮ ಸೇವಾ ಸಮಿತಿಯ ಪದಾಧಿಕಾರಿ ಪುರುಷೋತ್ತಮ ಚೇಂಡ್ಲಾ, ಉದ್ಯಮಿಗಳಾದ ರವಿ ಬೆಂಗಳೂರು, ಸಂತೋಷ್ ಬೆಂಗಳೂರು, ಜನಾರ್ದನ ಸಾಲ್ಯಾನ್ ನಾಸಿಕ್, ಶ್ರೀ ಕ್ಷೇತ್ರದ ಟ್ರಸ್ಟಿ ಚಂದ್ರಶೇಖರ್ ತುಂಬೆ, ಶ್ರೀಧಾಮ ಮಿತ್ರವೃಂದದ ಅಧ್ಯಕ್ಷ ಅಧ್ಯಕ್ಷ ಯೋಗೀಶ್ ಬಾಳೆಕಾನ ಇನ್ನಿತರರು ಉಪಸ್ಥಿತರಿದ್ದರು.

ಜಾಹೀರಾತು

ಶ್ರೀಧಾಮ ಮಹಿಳಾ ಸೇವಾ ಸಮಿತಿಯ ಅಧ್ಯಕ್ಷೆ ವನಿತಾ ವಿ. ಶೆಟ್ಟಿ, ಸ್ವಾಗತಿಸಿದರು. ಶ್ರೀಧಾಮ ಮಹಿಳಾ ಸೇವಾ ಸಮಿತಿಯ ಕಾರ್‍ಯದರ್ಶಿ ಗೀತಾ ಪುರುಷೋತ್ತಮ್ ವಂದಿಸಿದರು.

ಶ್ರೀ ಕ್ಷೇತ್ರದಲ್ಲಿ ವೇ.ಮೂ.ನಯನಕೃಷ್ಣ ಜಾಲ್ಸೂರು ಅವರ ವೈದಿಕತ್ವದಲ್ಲಿ ಗಣಪತಿ ಹೋಮ, ಪಂಚಾಮೃತ ಅಭಿಷೇಕ, ಕಲ್ಪೋಕ್ತ ಲಕ್ಷ್ಮೀ ಪೂಜೆ, ಶ್ರೀಗುರುಪೂಜೆ, ಶ್ರೀ ನಾಗದೇವರಿಗೆ ಕ್ಷೀರಾಭಿಷೇಕ, ಗೋಮಾತಾ ಪೂಜೆ, ಬಾಲಭೋಜನ, ಸಾಮೂಹಿಕ ಕುಂಕುಮರ್ಚನೆ, ವಿಷ್ಣು ಸಹಸ್ರ ನಾಮ ಪಠಣ, ಕನಕಧಾರ ಯಾಗ, ಶ್ರೀ ವಿಠೋಭ ರುಕ್ಮಯಿ ಧ್ಯಾನ ಮಂದಿರದಲ್ಲಿ ಭಜನಾ ಸಂಕೀರ್ತನೆ, ಶ್ರೀ ದುರ್ಗಾ ಪೂಜೆ, ಆಶ್ಲೇಷಾ ಬಲಿ, ಶ್ರೀ ಲಕ್ಷ್ಮೀ ಪೂಜೆ ನಡೆದವು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಒಳ್ಳೆಯದನ್ನು ಯೋಚಿಸಿದಾಗ ಜಗತ್ತು ಒಳ್ಳೆಯದಾಗಿರುವುದು – ಮಾಣಿಲಶ್ರೀ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*