ಕಲ್ಲಡ್ಕ

ಸಂಸಾರ ತಂಡದ ನೂತನ ಕಚೇರಿ ಉದ್ಘಾಟನೆ

ಸಂಘಟನೆ, ಸಾಹಿತ್ಯ, ರಂಗಭೂಮಿ ಕ್ಷೇತ್ರದಲ್ಲಿ  ತೊಡಗಿಸಿಕೊಂಡಿರುವ “ಸಂಸಾರ ಜೋಡುಮಾರ್ಗ” ತಂಡದ ನೂತನ ಕಚೇರಿ ತಾಲೂಕಿನ ಮಾಣಿ ಯಲ್ಲಿ ಭಾನುವಾರ ಉದ್ಘಾಟನೆಗೊಂಡಿತು. ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಂ.ಡಿ.ಶ್ಯಾಮರಾವ್ ದೀಪಬೆಳಗಿಸಿ, ಜಂಬೆ ಬಾರಿಸುವ ಮೂಲಕ ಕಛೇರಿಯನ್ನು ಉದ್ಘಾಟಿಸಿ, ಮಕ್ಕಳನ್ನು ಸಾಹಿತ್ಯ, ರಂಗಭೂಮಿಯ ಮೂಲಕ ಕ್ರಿಯಾಶೀಲರಾಗಿಸುವ ಕಾರ್ಯ ಮತ್ತಷ್ಟು ಉಲ್ಲಾಸಮಯವಾಗಿ ನಡೆಯಲಿ ಎಂದರು.  ತಂಡದ ಸಂಚಾಲಕ, ಬಂಟ್ವಾಳನ್ಯೂಸ್ ಅಂಕಣಕಾರ, ಮೌನೇಶ ವಿಶ್ವಕರ್ಮ ಮಾತನಾಡಿ, ಸಂಸಾರ ತಂಡ ಕಳೆದ 13 ವರ್ಷಗಳಿಂದ ಪುತ್ತೂರು ಹಾಗೂ ಬಂಟ್ವಾಳ ತಾಲೂಕನ್ನು ಕೇಂದ್ರವಾಗರಿಸಿಕೊಂಡು ಹಲವಾರು ಚಟುವಟಿಕೆಗಳನ್ನು ನಡೆಸುತ್ತಿದ್ದು, ಮುಂದಿನ ದಿನಗಳಲ್ಲಿ ಮಾಣಿಯಲ್ಲಿ ಕರಕುಶಲ ಹಾಗೂ ರಂಗಭೂಮಿ ತರಗತಿಗಳನ್ನು ನಡೆಸಲಾಗುವುದು ಎಂದರು.

ಜಾಹೀರಾತು

 ಪ್ರಮುಖರಾದ ಪ್ರಫುಲ್ಲ ರೈ, ಹೇಮಾವತಿ ಸಂಪ್ಯ, ಸುರೇಶ್ ಆಚಾರ್ಯ ಕಲ್ಲಡ್ಕ, ಕೊಡಾಜೆ ಸೀತಾರಾಮ ಆಚಾರ್ಯ, ಶಕುಂತಳಾ ಮೊದಲಾದವರು ಉದ್ಘಾಟನಾ ಕಾರ್ಯಕ್ರಮದ ಸಂದರ್ಭ ಉಪಸ್ಥಿತರಿದ್ದು ಶುಭಹಾರೈಸಿದರು. ಮೌನೇಶ ವಿಶ್ವಕರ್ಮ ಸ್ವಾಗತಿಸಿ, ವಂದಿಸಿದರು. ಜಯಶ್ರೀ ಕಾರ್ಯಕ್ರಮ ನಿರ್ವಹಿಸಿದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ