ಪಾಣೆಮಂಗಳೂರು ಚಾತುರ್ಮಾಸ- ಭಕ್ತಾಮರ ಆರಾಧನೆ, ಮಂಗಲ ಪ್ರವಚನ

ಪರಮ ಪೂಜ್ಯ 108 ಮುನಿ ಶ್ರೀ ವೀರ ಸಾಗರ ಮಹಾರಾಜರು ಪಾಣೆಮಂಗಳೂರು ಶ್ರೀಅನಂತ ನಾಥ ಸ್ವಾಮೀ ಜಿನ ಚೈತ್ಯಾಲಯದಲ್ಲಿ ಭವ್ಯ ಮಂಗಲ ವರ್ಷಾಯೋಗ – ಚಾತುರ್ಮಾಸವನ್ನು ಆಚರಿಸುತ್ತಿದ್ದಾರೆ. ಆ ಪ್ರಯುಕ್ತ ದಿನಾಂಕ 16.07.2017 ಆದಿತ್ಯವಾರ ಮುನಿಶ್ರೀಗಳ ಪಾವನ ಸಾನ್ನಿಧ್ಯದಲ್ಲಿ, ಮಂಗಳೂರಿನ ಶ್ರೀಮತಿ ಇಂದಿರಾ ದೇವಿಯಮ್ಮ ಮತ್ತು ಮಕ್ಕಳು, ರಾಜಗೃಹ ಇವರ ವತಿಯಿಂದ ಶ್ರೀ ಭಕ್ತಾಮರ ಆರಾಧನೆಯು ಅತ್ಯಂತ ಹೆಚ್ಚಿನ ಸಂಖ್ಯೆಯಲ್ಲಿ ಶ್ರಾವಕ ಬಂಧುಗಳ ಭಾಗವಹಿಸುವಿಕೆಯಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ಮುನಿಶ್ರೀಗಳ ಮಂಗಲ ಪ್ರವಚನ ಕಾರ್ಯಕ್ರಮ ನಡೆಯಿತು.
ರತ್ನತ್ರಯಗಳಾದ ಸಮ್ಯಕ್ ದರ್ಶನ, ಸಮ್ಯಕ್ ಜ್ಞಾನ ಮತ್ತು ಸಮ್ಯಕ್ ಚಾರಿತ್ರ್ಯಗಳನ್ನು ನಿಷ್ಠೆಯಿಂದ ಪಾಲನೆ ಮಾಡಿದಲ್ಲಿ, ಪ್ರತಿಯೊಬ್ಬ ಶ್ರಾವಕನೂ ಮಿತ್ಯಾತ್ವ ಹಾದಿ ತೊರೆದು, ಧರ್ಮ ಸಂಸ್ಕಾರ ಪಡೆದು ಮೋಕ್ಷ ಮಾರ್ಗದಲ್ಲಿ ಸಾಗಬಹುದು ಎಂದು ಮುನಿ ಶ್ರೀ ವೀರ ಸಾಗರ ಮಹಾರಾಜರು ತಮ್ಮ ಮಂಗಲ ಪ್ರವಚನದಲ್ಲಿ ತಿಳಿಸಿದರು.
ಮಂಗಲ ಪ್ರವಚನದ ನಂತರ ಧರ್ಮ ಸಭೆಯಲ್ಲಿ ಶ್ರಾವಕ ಬಂಧುಗಳ ಧಾರ್ಮಿಕ ಪ್ರಶ್ನೆಗಳಿಗೆ ಪೂಜ್ಯ ಮುನಿ ಮಹಾರಾಜರು ಉತ್ತರಿಸಿದರು.
ಆರಾಧನೆ ಕಾರ್ಯಕ್ರಮದಲ್ಲಿ ಮಂಗಳೂರು, ಮೂಡುಬಿದಿರೆ,ವೇಣೂರು, ಪುತ್ತೂರು, ಕಾರ್ಕಳ, ಕಳಸ, ಸಂಸೆ ಮುಂತಾದ ಕಡೆಗಳಿಂದ ಅನೇಕ ಶ್ರಾವಕ ಬಂಧುಗಳು ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ  ಡಿ. ಸುರೇಂದ್ರ ಕುಮಾರ್,  ಅನಿತಾ ಸುರೇಂದ್ರ ಕುಮಾರ್,  ಡಿ. ರಾಜೇಂದ್ರ ಕುಮಾರ್ ಮತ್ತು ಡಾ|ನೀತಾ ರಾಜೇಂದ್ರ ಕುಮಾರ್,ಮಂಜುಳಾ ಅಭಯಚಂದ್ರ ಜೈನ್ ಮುಂತಾದ ಗಣ್ಯರು ಉಪಸ್ಥಿತರಿದ್ದರು.
ಚಾತುರ್ಮಾಸ ಸಮಿತಿಯ ರತ್ನಾಕರ್ ಜೈನ್ ಮಂಗಳೂರು, ಸುದರ್ಶನ್ ಜೈನ್,  ಸಂಪತ್ ಕುಮಾರ್ ಶೆಟ್ಟಿ,  ಧರಣೇಂದ್ರ ಇಂದ್ರ,  ಸುಭಾಶ್ಚಂದ್ರ ಜೈನ್,  ಭುವನೇಂದ್ರ ಇಂದ್ರ, ಹರ್ಷರಾಜ್ ಬಲ್ಲಾಳ್,  ದೀಪಕ್ ಇಂದ್ರ, ಆದಿರಾಜ್ ಜೈನ್, ಭರತ್ ರಾಜ್ ಜೈನ್ ಮುಂತಾದವರು ಉಪಸ್ಥಿತರಿದ್ದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಪಾಣೆಮಂಗಳೂರು ಚಾತುರ್ಮಾಸ- ಭಕ್ತಾಮರ ಆರಾಧನೆ, ಮಂಗಲ ಪ್ರವಚನ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*