ವಿಟ್ಲ

ಕೆದಿಲ ಗ್ರಾಮಲೆಕ್ಕಾಧಿಕಾರಿ ವಿಶ್ವನಾಥರಿಗೆ ಶಾಸಕರಿಂದ ಪುರಸ್ಕಾರ

ಸರಕಾರಿ ಜಮೀನಿನಲ್ಲಿ ಅನಧಿಕೃತವಾಗಿ ಮನೆ ಕಟ್ಟಿ ವಾಸ್ತವ್ಯ ಹೊಂದಿದ ಸುಮಾರು 84 ಮಂದಿ ಬಡ ಅರ್ಹ ಕುಟುಂಬಗಳಿಗೆ 94ಅಡಿಯಲ್ಲಿ ಹಕ್ಕು ಪತ್ರ ವಿತರಣೆಗೆ ತಯಾರು ಮಾಡಿದ ಕೆದಿಲ ಗ್ರಾಮಲೆಕ್ಕಾಧಿಕಾರಿ ವಿಶ್ವನಾಥ್ ಅವರಿಗೆ ಪುತ್ತೂರು ಶಾಸಕಿ, ಮುಖ್ಯಮಂತ್ರಿಗಳ ಸಂಸದೀಯ ಕಾರ್ಯದರ್ಶಿ ಶಕುಂತಳಾ ಶೆಟ್ಟಿ ಅವರು ಪುರಸ್ಕಾರ ನೀಡಿ ಅಭಿನಂದಿಸಿದ್ದಾರೆ.
ಮನೆಯ ಅಡಿ ಸ್ಥಳದ ದಾಖಲೆ ಪತ್ರಕೋರಿ 94ಸಿಯಡಿ ಫಲಾನುಭವಿಗಳು ಸಲ್ಲಿಸಿದ ಅರ್ಜಿಗಳನ್ನು ಖುದ್ಧು ಪರಿಶೀಲನೆ ನಡೆಸಿದ ಗ್ರಾಮಲೆಕ್ಕಾಧಿಕಾರಿ ಅಲ್ಪಕಾಲ ಮಿತಿಯ ಸಮಯದಲ್ಲಿ ಅಳತೆ ಹಾಗೂ ಕಡತ ನಿರ್ವಹಣೆ ಇನ್ನಿತರ ಕಾರ್ಯ ಪೂರೈಸಿ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆಗೆ ಪಾತ್ರ ವಹಿಸಿದ ಗ್ರಾಮಲೆಕ್ಕಾಧಿಕಾರಿಯವರನ್ನು ಶಾಸಕರು ಅಭಿನಂದಿಸಿದರು. ಈ ಸಂದರ್ಭ ಫಲಪುಷ್ಪ, ಶಾಲು, ಸ್ಮರಣಿಕೆ ನೀಡಿ ಗೌರವಿಸಲಾಯಿತು. ತಾಲೂಕು ತಹಶೀಲ್ದಾರ್ ಪುರಂದರ ಹೆಗ್ಡೆ, ಕಂದಾಯ ನಿರೀಕ್ಷಕ ದಿವಾಕರ್ ಮುಗುಳಿಯ, ಗ್ರಾಮಕರಣಿಕರು ಹಾಗೂ ಗ್ರಾಮ ಸಹಾಯಕರು ಈ ಸಂದರ್ಭದಲ್ಲಿ ಹಾಜರಿದ್ದು, ಶುಭ ಹಾರೈಸಿದರು.

ಜಾಹೀರಾತು

 

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ