ಸಮ್ಯಕ್ ಜ್ಞಾನ, ದರ್ಶನ, ಚಾರಿತ್ರ್ಯ ಪಾಲನೆ ಅಗತ್ಯ: ಮುನಿಶ್ರೀ ವೀರಸಾಗರ ಮಹಾರಾಜ್

ಸಮ್ಯಕ್ ಜ್ಞಾನ, ಸಮ್ಯಕ್ ದರ್ಶನ ಮತ್ತು ಸಮ್ಯಕ್ ಚಾರಿತ್ರ್ಯ ಪಾಲನೆ ಮಾಡುವುದು ಅಗತ್ಯ ಎಂದು ಪರಮಪೂಜ್ಯ 108 ಮುನಿಶ್ರೀ ವೀರಸಾಗರ ಮಹಾರಾಜರು ಹೇಳಿದರು.

ಜಾಹೀರಾತು

ಪಾಣೆಮಂಗಳೂರಿನಲ್ಲಿ ನಡೆಯುತ್ತಿರುವ ಚಾತುರ್ಮಾಸ – ಋಷಿಮಂಡಲ ಆರಾಧನೆ ಸಂಧರ್ಭ ಮಂಗಲ ಪ್ರವಚನ ನೀಡಿದ ಅವರು, ಜೀವನದಲ್ಲಿ ಧರ್ಮಾಚರಣೆಯ ಮಹತ್ವವನ್ನುಸಾರಿ ಹೇಳಿದರು. ಧರ್ಮಪಾಲನೆ, ಶಿಸ್ತು, ಸಂಯಮಗಳನ್ನು ಅಳವಡಿಸಿಕೊಂಡು ಜೀವನ ನಡೆಸಿದರೆ ಪುಣ್ಯಪ್ರಾಪ್ತಿಯಾಗುತ್ತದೆ ಎಂದು ಮುನಿಶ್ರೀ ಹೇಳಿದರು.

ಇದೇ ಸಂದರ್ಭ ಮುನಿಶ್ರೀಗಳ ಪಾವನ ಸಾನ್ನಿಧ್ಯದಲ್ಲಿ ಶ್ರೀ ಋಷಿ ಮಂಡಲ ಆರಾಧನೆಯನ್ನು ಮೂಡಬಿದಿರೆಯ ವೀರೇಂದ್ರ ಕುಮಾರ್ ಕುಟುಂಬ, ಸರ್ವ ಮಂಗಳ ಮಹಿಳಾ ಸಂಘ ಪ್ರಾಯೋಜಕತ್ವದಲ್ಲಿ, ಶ್ರಾವಕ ಬಂಧುಗಳ ಭಾಗವಹಿಸುವಿಕೆಯಲ್ಲಿ ನಡೆಸಲಾಯಿತು.

ಮಂಗಲ ಪ್ರವಚನದ ನಂತರ ಧರ್ಮ ಸಭೆಯಲ್ಲಿ ಶಂಕಾ-ಸಮಾಧಾನ ನಡೆಯಿತು. ಶ್ರಾವಕ ಬಂಧುಗಳ ಅನೇಕ ಧಾರ್ಮಿಕ ಪ್ರಶ್ನೆಗಳಿಗೆ ಮುನಿ ಮಹಾರಾಜರು ಉತ್ತರಿಸಿದರು. ಮುಂದಿನ ದಿನಗಳಲ್ಲಿ ಪ್ರತಿಯೊಬ್ಬ ಶ್ರಾವಕರೂ ಶಂಕಾ-ಸಮಾಧಾನಕಾರ್ಯಕ್ರಮದಲ್ಲಿ, ತಮ್ಮ ಪ್ರಶ್ನೆಗಳನ್ನು ಕೇಳಿ ತಮ್ಮ ಉತ್ತರ ಪಡೆದು, ಧರ್ಮದ ಅರಿವು ಹೆಚ್ಚಿಸಿಕೊಳ್ಳಬೇಕೆಂದು ಹೇಳಿದರು.

ಜಾಹೀರಾತು

ಸಾಮೂಹಿಕ ಆರಾಧನೆ ಕಾರ್ಯಕ್ರಮದಲ್ಲಿ ಮಂಗಳೂರು, ಮೂಡುಬಿದಿರೆ, ವೇಣೂರು, ಪುತ್ತೂರು, ಕಾರ್ಕಳ, ಕಳಸ, ಸಂಸೆ ಮುಂತಾದ ಕಡೆಗಳಿಂದ ಅನೇಕ ಶ್ರಾವಕ ಬಂಧುಗಳು ಪಾಲ್ಗೊಂಡಿದ್ದರು. ಮುಖ್ಯ ಅತಿಥಿಗಳಾಗಿ ಮೂಡಬಿದಿರೆಯ ಶಾಸಕ ಕೆ. ಅಭಯಚಂದ್ರ ಜೈನ್, ಮಂಜುಳಾ ಅಭಯಚಂದ್ರ ಜೈನ್, ವಿಜಯರಾಜ್ ಅಧಿಕಾರಿ ವೇಣೂರು , ಜಿನೇಂದ್ರ ಜೈನ್ ಮಂಗಳೂರು ಮುಂತಾದ ಗಣ್ಯರು ಉಪಸ್ಥಿತರಿದ್ದರು.

ಅಭಯಚಂದ್ರ ಜೈನ್ ಮಾತನಾಡುತ್ತಾ, ಧರ್ಮ ಮಾರ್ಗದಲ್ಲಿ ನಡೆಯುವುದು ಜೀವನದಲ್ಲಿ ತುಂಬಾ ಅತ್ಯಗತ್ಯ ಎಂದು ಅಭಿಪ್ರಾಯಪಟ್ಟರು.

ಚಾತುರ್ಮಾಸ ಸಮಿತಿಯ ರತ್ನಾಕರ್ ಜೈನ್ ಮಂಗಳೂರು, ಸುದರ್ಶನ್ ಜೈನ್, ಸಂಪತ್ ಕುಮಾರ್ ಶೆಟ್ಟಿ, ಧರಣೇಂದ್ರ ಇಂದ್ರ, ಸುಭಾಶ್ಚಂದ್ರ ಜೈನ್, ಭುವನೇಂದ್ರ ಇಂದ್ರ, ಹರ್ಷರಾಜ್ ಬಲ್ಲಾಳ್, ದೀಪಕ್ ಇಂದ್ರ, ಕೆ. ಪ್ರವೀಣ್ ಕುಮಾರ್, ಆದಿರಾಜ್ ಜೈನ್, ಭರತ್ ರಾಜ್ ಮುಂತಾದವರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಸಮ್ಯಕ್ ಜ್ಞಾನ, ದರ್ಶನ, ಚಾರಿತ್ರ್ಯ ಪಾಲನೆ ಅಗತ್ಯ: ಮುನಿಶ್ರೀ ವೀರಸಾಗರ ಮಹಾರಾಜ್"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*