ವಿಟ್ಲ

ಮೂಲ್ಕಿ ಸುಂದರರಾಮ ಶೆಟ್ಟಿ ಹೆಸರು ರಸ್ತೆಗೆ ಇಡಲು ಒಡಿಯೂರು ಶ್ರೀ ಒತ್ತಾಯ

ಅವಿಭಜಿತ ದ.ಕ. ಜಿಲ್ಲೆಯಲ್ಲಿ ಬ್ಯಾಂಕಿಂಗ್ ವ್ಯವಸ್ಥೆ ಹುಟ್ಟುಹಾಕಿ, ಅದೆಷ್ಟೋ ಜನರಿಗೆ ಉದ್ಯೋಗ ಕಲ್ಪಿಸಿದ ಅಪೂರ್ವ ಸಾಮಾಜಿಕ ಸೇವೆಯ ಅನನ್ಯ ಸಾಧಕ ಮುಲ್ಕಿ ಸುಂದರರಾಮ ಶೆಟ್ಟಿ ಅವರ ಹೆಸರನ್ನು ಮಂಗಳೂರು ಬಾವುಟಗುಡ್ಡೆ ರಸ್ತೆಗೆ ನಾಮಕರಣ ಮಾಡಿ ಸರಕಾರ ಆದೇಶಿಸಿದ್ದು ಅತ್ಯಂತ ಔಚಿತ್ಯಪೂರ್ಣ, ಶಾಶ್ವತ ಗೌರವ. ಆದರೆ ಈ ಆದೇಶಕ್ಕೆ ಸರಕಾರವೇ ತಡೆಯಾಜ್ಞೆ ನೀಡಿ ಗೊಂದಲ ಸೃಷ್ಟಿಸಿದ್ದು ಬೇಸರದ ಸಂಗತಿ ಎಂದು ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ವಿಷಾದ ವ್ಯಕ್ತಪಡಿಸಿದ್ದಾರೆ.

ನಾಮಕರಣದ ಮುನ್ನ ಮಂಗಳೂರು ಪೋಲೀಸ್ ಆಯುಕ್ತರು ಮತ್ತು ದ.ಕ. ಜಿಲ್ಲಾಧಿಕಾರಿಗಳು ’ಮುಲ್ಕಿ ಸುಂದರರಾಮ್ ಶೆಟ್ಟಿ ರಸ್ತೆ’ ಎಂದು ನಾಮರಕಣಕ್ಕೆ ಯಾವುದೇ ಆಕ್ಷೇಪಣೆ ಇಲ್ಲ ಹಾಗೂ ಇದರಿಂದ ಕಾನೂನು ಸುವ್ಯವಸ್ಥೆಗೆ ಭಂಗ ಉಂಟಾಗುವುದಿಲ್ಲ ಎಂದು 03-07-2009ರಲ್ಲಿ ಶಿಫಾರಸ್ಸು ಮಾಡಿರುವುದು ಗಮನಾರ್ಹ. ಈ ಹಿನ್ನಲೆಯಲ್ಲಿ 24-05-2017ರಂದು ನಗರಾಭಿವೃದ್ಧಿ ಇಲಾಖೆ ಸರಕಾರದ ಅಧೀನ ಕಾರ್ಯದರ್ಶಿಯವರು ಈ ನಾಮಕರಣಕ್ಕೆ ಸರಕಾರದ ಅಧಿಕೃತ ಅನುಮೋದನೆ ಆದೇಶ ನೀಡಿದ್ದರು. ಇದೇ ಅಧಿಕಾರಿ 01-07-2017ರಲ್ಲಿ ಹಿಂದಿನ ಆದೇಶಕ್ಕೆ ತಡೆಯಾಜ್ಞೆ ನೀಡಿ ಯಥಾಸ್ಥಿತಿ ಕಾಪಾಡಿಕೊಳ್ಳುವಂತೆ ಆದೇಶಿಸಿರುವುದು ಖೇದಕರ.

ಜಾಹೀರಾತು

ಜಿಲ್ಲೆಗೆ ಕೀರ್ತಿ ತಂದ ಉನ್ನತ ವ್ಯಕ್ತಿತ್ವದ ಮುಲ್ಕಿ ಸುಂದರರಾಮ ಶೆಟ್ಟಿಯವರ ಹೆಸರನ್ನು ರಸ್ತೆಗೆ ನಾಮಕರಣ ಮಾಡುವ ಬಗ್ಗೆ ಜನಪ್ರತಿನಿಧಿಗಳು ಮತ್ತೊಮ್ಮೆ ಚಿಂತನೆ ಮಾಡಿ ತಡೆಯಾಜ್ಞೆಯನ್ನು ತೆರವುಗೊಳಿಸಿ, ಜಿಲ್ಲೆಯ ಸಾಮರಸ್ಯವನ್ನು ಉಳಿಸಿಕೊಳ್ಳಲು ಪ್ರಯತ್ನಿಸಬೇಕೆಂದು ಒಡಿಯೂರು ಶ್ರೀಗಳವರು ಕರೆನೀಡಿದ್ದಾರೆ.

ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.