ಯುವವಾಹಿನಿ ಬಂಟ್ವಾಳ ತಾಲೂಕು ಘಟಕ ಪದಗ್ರಹಣ

ಸಂಘಟನೆಗಳು  ಒಕ್ಕೂಟ ವ್ಯವಸ್ಥೆ ಗೆ ಬಲವನ್ನು ತುಂಬುವ ಕೆಲಸವನ್ನು ನಿರ್ವಹಿಸುತ್ತದೆ. ಎಲ್ಲರಿಗೂ ನಾಯಕರಾಗುವ ಅವಕಾಶ ತನ್ನಿಂದ ತಾನೇ ಲಭ್ಯವಾಗುವುದಿಲ್ಲ. ಸಂಘಟನೆಗಳಲ್ಲಿ ಕ್ರಿಯಾಶೀಲವಾಗಿ ತೊಡಗಿಸಿಕೊಂಡಾಗ ಅವಕಾಶಗಳು ಒಲಿದು ಬರುತ್ತದೆ. ತಮಗೆ ಸಿಗುವ ಅವಕಾಶವನ್ನು ಯೋಗ್ಯ ರೀತಿಯಲ್ಲಿ ನಿರ್ವಹಿಸಿದಾಗ ಮಾತ್ರ ಸಂಘಟನೆಗೂ ಸಮಾಜಕ್ಕೂ ಕೀರ್ತಿ ಲಭ್ಯವಾಗುತ್ತದೆ. ನಾಯಕತ್ವ ವಹಿಸುವುದು ಜವಾಬ್ದಾರಿ ಯ ಕೆಲಸ. ನಾಯಕನಾದವನು ತನ್ನ ಬಳಗವನ್ನು ವ್ಯವಸ್ಥಿತವಾಗಿ ಕಾರ್ಯನಿರ್ವಹಿಸುವಂತೆ ನೋಡಿಕೊಳ್ಳಬೇಕು. ಯುವ ಮನಸ್ಸುಗಳಿಗೆ ಜೀವ ತುಂಬುವ ಕೆಲಸ ನಡೆಯಬೇಕು ಎಂದು ಯುವವಾಹಿನಿ ಕೇಂದ್ರ ಸಮಿತಿಯ ಉಪಾಧ್ಯಕ್ಷ ಶ್ರೀ ಯಶವಂತ ಪೂಜಾರಿ ಅಭಿಪ್ರಾಯ ಪಟ್ಟರು.

ಜಾಹೀರಾತು

ಬಿ.ಸಿ.ರೋಡಿನ ಸ್ಪರ್ಶ ಕಲಾ ಮಂದಿರದಲ್ಲಿ ಯುವವಾಹಿನಿ ಬಂಟ್ವಾಳ ತಾಲೂಕು ಘಟಕದ ೨೦೧೭-೧೮ನೇ ಸಾಲಿನ ಪದಗ್ರಹಣ ಸಮಾರಂಭದಲ್ಲಿ ಪ್ರತಿಜ್ಞಾ ವಿಧಿ ಬೋಧಿಸಿ ಮಾತನಾಡಿದರು.

ಬದುಕು ಕ್ರಿಯಾಶೀಲವಾಗಿರಬೇಕು , ಸ್ವಯಂಪ್ರೇರಿತ ಸೇವಾ ಮನೋಭಾವ ಹೊಂದಿರಬೇಕು ,ಧರ್ಮ ಸಂಸ್ಕತಿ ಬದುಕನ್ನು ರೂಪಿಸುತ್ತದೆ, ಬಡವರಿಗೆ ಮನೆ ನಿರ್ಮಾಣ ಮಾಡಿದ ಯುವವಾಹಿನಿಯ ಸೇವಾ ಕಾರ್ಯ ಶ್ಲಾಘನೀಯ ಎಂದು ಕಾರ್ಯಕ್ರಮ ಉದ್ಘಾಟಿಸಿದ ಉದ್ಯಮಿ ಜಗದೀಪ್ ಡಿ.ಸುವರ್ಣ ತಿಳಿಸಿದರು.

ಬಂಟ್ವಾಳ ಜೆಸಿಐ ಮಾಜಿ ಅಧ್ಯಕ್ಷರಾದ ಲೋಕೇಶ್ ಸುವರ್ಣ, ಪುರೋಹಿತರಾದ ಕೇಶವ ಶಾಂತಿ ನಾಟಿ, ಬಿರುವೆರ್ ಕುಡ್ಲದ ಅಧ್ಯಕ್ಷರಾದ ರಾಕೇಶ್ ಪೂಜಾರಿ, ಸಂಸ್ಥಾಪಕರಾದ ಅಭಿಶೇಕ್ ಅಮೀನ್, ಮುಖ್ಯ ಅತಿಥಿಯಾಗಿ ಭಾಗವಹಿಸಿ ಶುಭ ಹಾರೈಕೆ ಮಾಡಿದರು.ಯುವವಾಹಿನಿ ಬಂಟ್ವಾಳ ತಾಲೂಕು ಘಟಕದ ಅಧ್ಯಕ್ಷರಾದ ಅರುಣ್ ಕುಮಾರ್  ಸಭೆಯ ಅಧ್ಯಕ್ಷತೆ ವಹಿಸಿದ್ದರು.ಯುವವಾಹಿನಿ ಮಾಜಿ ಅಧ್ಯಕ್ಷರಾದ ರಾಜೇಶ್ ಸುವರ್ಣ ನೂತನ ಪದಾಧಿಕಾರಿಗಳನ್ನು ಪರಿಚಯಿಸಿದರು.ನೂತನ ಅಧ್ಯಕ್ಷರಾದ ಲೋಕೇಶ್ ಸುವರ್ಣ ಅಲೆತ್ತೂರು ಎಲ್ಲರ ಸಲಹೆ ಸೂಚನೆ ಮಾರ್ಗದರ್ಶನ ಪಡೆದು ಸಂಘಟನೆಯನ್ನು ಸಮರ್ಥವಾಗಿ ಮುನ್ನಡೆಸುವುದಾಗಿ ತಿಳಿಸಿದರು.ಆಟಿ ತಿಂಗಳ ವೈವಿಧ್ಯಮಯ ತಿಂಡಿ ತಿನಿಸುಗಳ ಊಟೋಪಚಾರ ಎಲ್ಲರ ಮನಸೂರೆಗೊಂಡಿತು. ಕೋಶಾಧಿಕಾರಿ ಸತೀಶ್ ಪೂಜಾರಿ ಬಾಯಿಲ ವೇದಿಕೆಯಲ್ಲಿ ಉಪಸ್ಥಿತರಿದ್ದರು.ಸಂಚಾಲಕರಾದ ಹರೀಶ್ ಕೋಟ್ಯಾನ್ ಕುದನೆ ಸ್ವಾಗತಿಸಿದರು, ನೂತನ ಉಪಾಧ್ಯಕ್ಷ ಗಣೇಶ್ ಪೂಂಜರೆಕೋಡಿ ಪ್ರಾಸ್ತಾವಿಕ ಮಾತನಾಡಿದರು, ನೂತನ ಕಾರ್ಯದರ್ಶಿ ದಿನೇಶ್ ಸುವರ್ಣ ರಾಯಿ ಹಾಗೂ ಉಪನ್ಯಾಸಕ ಚೇತನ್ ಮುಂಡಾಜೆ ಕಾರ್ಯಕ್ರಮ ನಿರೂಪಿಸಿದರು

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಯುವವಾಹಿನಿ ಬಂಟ್ವಾಳ ತಾಲೂಕು ಘಟಕ ಪದಗ್ರಹಣ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*