ಬಂಟ್ವಾಳ

ಬಂಟ್ವಾಳ ಯುವವಾಹಿನಿಯಿಂದ ಮನೆ ಹಸ್ತಾಂತರ

ಮಹಾ ಮಾನತಾವಾದದ ಮೇರು ಸಂದೇಶ ಜಗತ್ತಿಗೆ ಸಾರಿದ ಬ್ರಹ್ಮಶ್ರೀ ನಾರಾಯಣ ಗುರುಗಳು ಮಾನವ ಜನಾಂಗಕ್ಕೆ ಹೊಸ ದಾರಿ ತೋರಿದವರು.  ಸಮಾಜದ ಒಳಿತಿಗಾಗಿ ದುಡಿದವರು.  ಅವರ ಸಂದೇಶದ ಅನುಷ್ಟಾನ ಮಾಡುತ್ತಿರುವ ಯುವವಾಹಿನಿಯಂತಹ ಯುವಶಕ್ತಿ ಸಮಾಜದ ಆದರ್ಶ ಸಂಘಟನೆಯಾಗಿದೆ ಎಂದು ಪುರೋಹಿತರಾದ ಕೇಶವ ಶಾಂತಿ ನಾಟಿ ತಿಳಿಸಿದರು.

ಜಾಹೀರಾತು

ಯುವವಾಹಿನಿ (ರಿ) ಬಂಟ್ವಾಳ ತಾಲೂಕು ಘಟಕದ ಆಶ್ರಯದಲ್ಲಿ ಬಂಟ್ವಾಳ ತಾಲೂಕಿನ ಅಮ್ಟಾಡಿ ಗ್ರಾಮದ ಅಜೆಕಲದ ಅಕ್ಕಮ್ಮ ಎಂಬ ತೀರಾ ಬಡ ಕುಟುಂಬಕ್ಕೆ ೬೫೦ ಚ.ಅ.ಗಳ ಸುಮಾರು ರೂ. ೪.೫ ಲಕ್ಷ ವೆಚ್ಚದ ನೂತನ ಮನೆ ಹಸ್ತಾಂತರ ಮಾಡಿದ ಸಂದರ್ಭದಲ್ಲಿ ಮಾತನಾಡಿದರು.

ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ಕೆ. ಸೇಸಪ್ಪ ಕೋಟ್ಯಾನ್ ಬ್ರಹ್ಮಶ್ರೀ ನಾರಾಯಣ ಗುರುಗಳ ಭಾವಚಿತ್ರ ಹಸ್ತಾಂತರ ಮಾಡುವ ಮೂಲಕ ಸಾಂಕೇತಿಕವಾಗಿ ಮನೆ ಹಸ್ತಾಂತರ ಮಾಡಲಾಯಿತು.

ಉದ್ಯಮಿ ಜಗದೀಪ್ ಡಿ. ಸುವರ್ಣ ಬ್ರಹ್ಮಶ್ರೀ ನಿಲಯ ನಾಮ ಫಲಕ ಅನಾವರಣಗೊಳಿಸಿದರು.  ದ.ಕ. ಜಿಲ್ಲಾ ಮೂರ್ತೆದಾರರ ಮಹಾಮಂಡಲದ ಅಧ್ಯಕ್ಷ ಕೆ. ಸಂಜೀವ ಪೂಜಾರಿ ಬಿರ್ವ, ಯುವವಾಹಿನಿ (ರಿ) ಕೇಂದ್ರ ಸಮಿತಿಯ ನಿಯೋಜಿತ ಅಧ್ಯಕ್ಷ ಯುಶವಂತ ಪೂಜಾರಿ, ಬಂಟ್ವಾಳ ಜೆಸಿಐ ಮಾಜಿ ಅಧ್ಯಕ್ಷ ಲೋಕೇಶ ಸುವರ್ಣ ಬಂಟ್ವಾಳ, ಬಿರುವೆರ್ ಕುಡ್ಲ (ರಿ) ಇದರ ಸಂಸ್ಥಾಪಕರಾದ ಅಭಿಷೇಕ್ ಅಮೀನ್ ಹಾಗೂ ಬಿರುವೆರೆ ಕುಡ್ಲದ ಅಧ್ಯಕ್ಷ್ ರಾಕೇಶ್ ಪೂಜಾರಿ, ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಪ್ರಧಾನ ಕಾರ್ಯದರ್ಶಿ ಬೇಬಿ ಕುಂದರ್ ಯುವವಾಹಿನಿ (ರಿ) ಬಂಟ್ವಾಳ ತಾಲೂಕು ಘಟಕದ ಅಧ್ಯಕ್ಷರಾದ ಅರುಣ್ ಕುಮಾರ್, ನಿಯೋಜಿತ ಅಧ್ಯಕ್ಷರಾದ ಲೋಕೇಶ್ ಸುವರ್ಣ ಅಲೆತ್ತೂರು, ಹರೀಶ ಸಾಲ್ಯಾನ್ ಅಜೆಕಳ, ಮಾಜಿ ಅಧ್ಯಕ್ಷರಾದ ಭುವನೇಶ್ ಪಚ್ಚಿನಡ್ಕ ಸಲಹೆಗಾರರಾದ ಬಿ. ತಮ್ಮಯ, ಡಾ| ಸದಾನಂದ ಕುಂದರ್ ಮತ್ತಿತರರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ