ಬಂಟ್ವಾಳ

ಡಿಜಿಟಲ್ ಕ್ರಾಂತಿಯಿಂದ ಜನರಿಗೆ ಲಾಭ: ನಳಿನ್

ದೇಶದಲ್ಲಿ ಡಿಜಿಟಲ್ ಕ್ರಾಂತಿಯಾದ ಮೇಲೆ ಪಾರದರ್ಶಕ ವ್ಯವಹಾರ ನಡೆಯಲು ಆರಂಭವಾಗಿದ್ದು, ಜನರಿಗೆ ಲಾಭವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲೂ 60 ಗ್ರಾಮಗಳು ಸಂಪೂರ್ಣ ಡಿಜಿಟಲೀಕರಣವಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲೆ ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದರು.

ಜಾಹೀರಾತು

ಶನಿವಾರ ಬಂಟ್ವಾಳ ತಾಲೂಕಿನ ಕಲ್ಲಡ್ಕ ಸಮೀಪ ಬಾಳ್ತಿಲ ಎಂಬಲ್ಲಿ ದ.ಕ. ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಸಹಯೋಗದೊಂದಿಗೆ ಕಲ್ಲಡ್ಕ ರೈತರ ಸೇವಾ ಸಹಕಾರ ಸಂಘ ಆಶ್ರಯದಲ್ಲಿ ಬಾಳ್ತಿಲ ಗ್ರಾಮ ವ್ಯಾಪ್ತಿಯ ಸಂಘದ ಸದಸ್ಯರಿಗೆ ಮತ್ತು ಗ್ರಾಹಕರಿಗೆ ಕೇಂದ್ರ ಸರಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ನಗದುರಹಿತ ವಹಿವಾಟಿನ ಬಗ್ಗೆ ಕಾರ್ಯಾಗಾರ ಮತ್ತು ಮಾಹಿತಿ ಶಿಬಿರ ಉದ್ಘಾಟಿಸಿ ಮಾತನಾಡಿದರು.

ಸಭಾಧ್ಯಕ್ಷತೆ ವಹಿಸಿ, ರೈತ ಸದಸ್ಯರಿಗೆ ರೂಪೇ ಕಾರ್ಡ್ ವಿತರಿಸಿ ಮಾತನಾಡಿದ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರಕುಮಾರ್ ಮಾತನಾಡಿ, ನಗದುರಹಿತ ವ್ಯವಹಾರ ಪರಿಕಲ್ಪನೆಯನ್ನು ಡಿಸಿಸಿ ಬ್ಯಾಂಕ್ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೂರು ವರ್ಷಗಳ ಹಿಂದೆಯೇ ಮಾಡಿ ತೋರಿಸಿ ಮಾದರಿಯಾಗಿತ್ತು. ರಾಷ್ಟ್ರೀಕೃತ ಬ್ಯಾಂಕುಗಳಿಗಿಂತಲೂ ಸಹಕಾರಿ ಬ್ಯಾಂಕುಗಳು ಜನರ ನಡುವೆ ತೆರಳಿ ಸೇವಾಕಾರ್ಯ ಕೈಗೊಳ್ಳುವ ಕಾರಣ ಹಳ್ಳಿಯ ಕಟ್ಟಕಡೆಯ ಮನುಷ್ಯನ ಪ್ರೀತಿ ವಿಶ್ವಾಸ ಗಳಿಸಿಕೊಂಡಿದೆ ಎಂದರು.

ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದ ಕಲ್ಲಡ್ಕ ರೈತರ ಸೇವಾ ಸಹಕಾರ ಸಂಘದ ಅಧ್ಯಕ್ಷ, ಮಾಜಿ ಶಾಸಕ ಕೆ.ಪದ್ಮನಾಭ ಕೊಟ್ಟಾರಿ, ಬ್ಯಾಂಕಿನ ಸೇವಾಚಟುವಟಿಕೆಗಳನ್ನು ವಿವರಿಸಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಡಿಸಿಸಿ ಬ್ಯಾಂಕ್ ನಿರ್ದೇಶಕ ಟಿ.ಜಿ.ರಾಜಾರಾಮ ಭಟ್, ಮಾಜಿ ಶಾಸಕ ಎ.ರುಕ್ಮಯ ಪೂಜಾರಿ, ಬಾಳ್ತಿಲ ಗ್ರಾಮ ಪಂಚಾಯತ್ ಅಧ್ಯಕ್ಷ ವಿಠಲ ನಾಯ್ಕ್, ಸಡ್ಸ್ ಅಧ್ಯಕ್ಷ ರವೀಂದ್ರ ಕಂಬಳಿ ಶುಭ ಹಾರೈಸಿದರು.

ಈ ಸಂದರ್ಭ ಸಂಪನ್ಮೂಲ ವ್ಯಕ್ತಿ ಜಯಂತ್ ಶೆಟ್ಟಿ, ಉಷಾ ಕಾಮತ್, ವಲಯ ಮೇಲ್ವಿಚಾರಕ ಕೇಶವ ಕಿಣಿ ಎಚ್, ಮುಖ್ಯ ಕಾರ್ಯನಿರ್ವಹಣಾಕಾರಿ ಸುರೇಶ ಕೆ, ಗ್ರಾಪಂ ಉಪಾಧ್ಯಕ್ಷೆ ಪೂರ್ಣಿಮಾ, ಸೇವಾ ಸಂಘ ಉಪಾಧ್ಯಕ್ಷ ಸುಧಾಕರ ರೈ, ಗಿರಿಯಪ್ಪ ಗೌಡ, ಜಯರಾಮ ರೈ, ಗೋಪಾಲಕೃಷ್ಣ ಭಟ್, ಮೃಣಾಲಿನಿ ನಾಯಕ್ ಸಹಿತ ಸಂಘದ ನಿರ್ದೇಶಕರು ವೇದಿಕೆಯಲ್ಲಿದ್ದರು. ರಾಜೇಶ್ ಕೊಟ್ಟಾರಿ ಗೋಳ್ತಮಜಲು ಕಾರ್ಯಕ್ರಮ ನಿರೂಪಿಸಿದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts

ಮಂಗಳೂರು ಕಡಲ ತೀರ ʼಕಡಲ ಪವನ ಶಕ್ತಿ ಉತ್ಪಾದನಾ ವಲಯʼವಾಗಿ ಅಭಿವೃದ್ಧಿಪಡಿಸಲು ಕೇಂದ್ರಕ್ಕೆ ಮನವಿ

ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)

1 hour ago