ಬಂಟ್ವಾಳ

ಬಂಟ್ವಾಳದಾದ್ಯಂತ ವರಮಹಾಲಕ್ಷ್ಮೀ ಪೂಜಾ ಸಂಭ್ರಮ

ಬಂಟ್ವಾಳ ತಾಲೂಕಿನ ಹಲವೆಡೆ ನಾನಾ ಸಂಘಟನೆಗಳು ವರಮಹಾಲಕ್ಷ್ಮೀ ಪೂಜೆಯನ್ನು ನಡೆಸಿದವು.

ಬಿ.ಸಿ.ರೋಡಿನ ಗಾಣದಪಡ್ಪಿನಲ್ಲಿರುವ ಶ್ರೀ ಗುರುನಾರಾಯಣ ಮಂದಿರ, ಶ್ರೀ ರಕ್ತೇಶ್ವರಿ ದೇವಿ ದೇವಸ್ಥಾನಗಳಲ್ಲಿ ಪೂಜೆ ಸಲ್ಲಿಸಲು ಸಾಕಷ್ಟು ಸಂಖ್ಯೆಯಲ್ಲಿ ಮಹಿಳೆಯರು ಆಗಮಿಸಿದ್ದರು.

ಜಾಹೀರಾತು

ಬಿ.ಸಿ.ರೋಡ್ ಚಂಡಿಕೇಶ್ವರಿ ದೇವಿ ದೇವಸ್ಥಾನದಲ್ಲಿ ಸಾರ್ವಜನಿಕ ವರಮಹಾಲಕ್ಷ್ಮಿ ಪೂಜೆ ನಡೆಯಿತು.

ಮಾಣಿ ಕುಲಾಲ ಸಂಘದ ವತಿಯಿಂದ ಮಾಣಿ ಕುಲಾಲ ಭವನದಲ್ಲಿ ಸಾಮೂಹಿಕ ವರಮಹಾಲಕ್ಮೀ ಪೂಜೆ ಕಶೆಕೋಡಿ ಸೂರ್ಯ ನಾರಾಯಣ ಭಟ್ ಅವರ ನೇತೃವದಲ್ಲಿ ನಡೆಯಿತು. ಈ ಸಂದರ್ಭ ನಡೆದ  ಸಭಾ ಕಾರ್‍ಯಕ್ರಮಕ್ಕೆ ಆಗಮಿಸಿ ಮಾತನಾಡಿದ ಬಿಜೆಪಿ ಮುಖಂಡ ರಾಜೇಶ್ ನಾಯಕ್ ಉಳಿಪ್ಪಾಡಿ ಗುತ್ತು  ಯಾವುದೇ ಪೂಜೆಗಳನ್ನು ಸಾಮೂಹಿಕವಾಗಿ ಮಾಡಿದಾಗ ಅದರಿಂದ ಹೆಚ್ಚು ಫಲ ಪ್ರಾಪ್ತಿಯಾಗುತ್ತದೆ. ಸಾಮೂಹಿಕ ಪೂಜೆಗಳು ಸಮಾಜವನ್ನು ಒಟ್ಟುಗೂಡಿಸುತ್ತದೆ. ಸಂಘಟನಾತ್ಮಕವಾಗಿ ಯಾವುದೇ ಸಮುದಾಯ ಮುಂದೆ ಬಂದಾಗ ಸಮಾಜದಲ್ಲಿ ಗೌರವ ಸಿಗುತ್ತದೆ ಎಂದು ಅವರು ಹೇಳಿದರು.  ವೇದಿಕೆಯಲ್ಲಿ ಸಂಘದ ಅಧ್ಯಕ್ಷ ರಾಮಚಂದ್ರ ಮಾಸ್ತರ್,   ಹಿರಿಯರಾದ ಬಿ.ಎಸ್.ಕುಲಾಲ್ ಪುತ್ತೂರು, ಕಾರ್‍ಯದರ್ಶಿ ನಾರಾಯಣ ಕುಲಾಲ್ ಬರಿಮಾರು, ಮಹಿಳಾ ಘಟಕದ ಅಧ್ಯಕ್ಷೆ ಸುಶೀಲಾ , ಗೌರವಾಧ್ಯಕ್ಷ ವೆಂಕಪ್ಪ ಕುಲಾಲ್ ಉಪಸ್ಥಿತರಿದ್ದರು.

ಬಿ.ಸಿ.ರೋಡಿನ ಗಾಣದಪಡ್ಪಿನಲ್ಲಿರುವ ಶ್ರೀ ಗುರುನಾರಾಯಣ ಮಂದಿರಲ್ಲಿ ಪೂಜೆ ಸಲ್ಲಿಸಲು ಸಾಕಷ್ಟು ಸಂಖ್ಯೆಯಲ್ಲಿ ಮಹಿಳೆಯರು ಆಗಮಿಸಿದ್ದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.