ಕಲ್ಲಡ್ಕ

ಕೆಟ್ಟು ನಿಂತ ಲಾರಿ, ಸಾಲುಗಟ್ಟಿದ ವಾಹನಗಳು, ಮೇಲ್ಕಾರ್ ಟ್ರಾಫಿಕ್ ಜಾಮ್

ಸಾಂದರ್ಭಿಕ ಚಿತ್ರ

ಮೇಲ್ಕಾರ್‌ನಿಂದ ಕಲ್ಲಡ್ಕಕ್ಕೆ ತೆರಳುವ ರಾಷ್ಟ್ರೀಯ ಹೆದ್ದಾರಿಯ ಹಾದಿಯಲ್ಲಿ ಲಾರಿಯೊಂದು ಕೆಟ್ಟು ನಿಂತು ಶನಿವಾರ ರಾತ್ರಿ ಸುದೀರ್ಘ ಟ್ರಾಫಿಕ್ ಜಾಮ್ ಕಂಡುಬಂತು.

ಕೆ.ಸಿ.ರೋಡ್ ತಿರುವಿನ ಮುಂಭಾಗದಿಂದ ಪಾಣೆಮಂಗಳೂರಿನವರೆಗೂ ಸರತಿ ಸಾಲಿನಲ್ಲಿ ವಾಹನಗಳು ನಿಂತವು. ಎರಡೂ ಕಡೆಯಿಂದ ಬರುವ ವಾಹನಗಳಲ್ಲಿ ಕೆಲವರು ಓವರ್‌ಟೇಕ್ ಮಾಡುವುದು ಹಾಗೂ ಟ್ರಾಫಿಕ್ ನಿಯಮಗಳನ್ನು ಉಲ್ಲಂಘಿಸುವುದನ್ನು ನಡೆಸಿದ ಕಾರಣ ಬಂಟ್ವಾಳ ಟ್ರಾಫಿಕ್ ಠಾಣಾ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಿಸಲು ಹರಸಾಹಸಪಟ್ಟರು. ಇದೇ ಸಂದರ್ಭ ಮಳೆಯೂ ಆಗಮಿಸಿದ್ದು, ಮತ್ತಷ್ಟು ಸಮಸ್ಯೆಗಳಿಗೆ ಕಾರಣವಾಯಿತು. ಕೊನೆಗೂ ಲಾರಿಯನ್ನು ಪಕ್ಕಕ್ಕೆ ಸರಿಸಿ ಸುಗಮ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು. ಇದೇ ವೇಳೆ ವಿಟ್ಲ ಸಹಿತ ಹಲವು ಪ್ರದೇಶಗಳಿಂದ ಬಿ.ಸಿ.ರೋಡಿನ ರೈಲ್ವೆ ನಿಲ್ದಾಣಕ್ಕೆ ತೆರಳುವ ಪ್ರಯಾಣಿಕರು ಆತಂಕದ ಕ್ಷಣಗಳನ್ನು ಎದುರಿಸಬೇಕಾಯಿತು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ