ವಾಮದಪದವು

ವಾಮದಪದವಿನಲ್ಲಿ ಉಜ್ವಲ ಯೋಜನೆ ಅಡುಗೆ ಅನಿಲ ವಿತರಣೆ

ಪ್ರಧಾನ ಮಂತ್ರಿ ನರೇಂದ್ರ ಮೋಧಿಯ  ಉಜ್ವಲ ಯೋಜನೆ ಪ್ರತಿ ಗ್ರಾಮೀಣ ಮಹಿಳೆಯ ಕಣ್ಣೀರೊರೆಸುವ ಅದ್ಬುತವಾತ ಕಾರ್‍ಯಕ್ರಮ , ಕಡುಬಡತನದಲ್ಲಿರುವ ಮಹಿಳೆಯರು ಉಜ್ವಲ ಯೋಜನೆಯಡಿ ಉಚಿತ ಗ್ಯಾಸ್ ಸಂಪರ್ಕವನ್ನು ಪಡೆಯಬೇಕು, ಆ ಮೂಲಕ ದೇಶದ ಪ್ರತಿಯೊಂದು ಮನೆಯು ಹೊಗೆ ಮುಕ್ತವಾಗಬೇಕು ಎನ್ನುವ ಕನಸು ನಿಜಕ್ಕೂ ಶ್ಲಾಘನೀಯ ಎಂದು ಬಿಜೆಪಿ ನಾಯಕ ಉಳಿಪ್ಪಾಡಿಗುತ್ತು ರಾಜೇಶ್ ನಾಯಕ್ ಹೇಳಿದರು. ಅವರು ಬಂಟ್ವಾಳ ತಾಲೂಕಿನ ವಾಮದಪದವು ಗಣೇಶ್ ಮಂದಿರದಲ್ಲಿ  ನಡೆದ ಚೆನ್ನೈತ್ತೋಡಿ ಗ್ರಾ.ಪಂ.ವ್ಯಾಪ್ತಿಯ  ಫಲಾನುಭವಿಗಳಿಗೆ  ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿ ಉಚಿತ ಗ್ಯಾಸ್ ವಿತರಣೆ ಕಾರ್‍ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕೇಂದ್ರ ಸರಕಾರದ ಯೋಜನೆಯನ್ನು ಪ್ರತಿ ಗ್ರಾಮದ ಮೂಲೆ ಮೂಲೆಗೆ ಮುಟ್ಟಿಸುವುದು ನನ್ನ ಧರ್ಮ ಮತ್ತು ಕರ್ತವ್ಯ , ಇನ್ನು ಮುಂದೆಯೂ ಸರಕಾರದ ಉತ್ತಮ ಯೋಜನೆಗಳನ್ನು ಬಂಟ್ವಾಳ ಕ್ಷೇತ್ರದ ಮನೆ ಮನೆಗೆ ಮುಟ್ಟಿಸುವ ಕೆಲಸವನ್ನು ನಿರಂತರವಾಗಿ ಮಾಡುತ್ತೇನೆ ಎನ್ನುವ ಭರವಸೆಯನ್ನು ನೀಡುತ್ತೇನೆ ಎಂದರು.

ಜಾಹೀರಾತು

ಕೇಂದ್ರ ಸರಕಾರದ  ಮೋದಿಯವರ ಜನಪರ ಯೋಜನೆಗಳನ್ನು ಪ್ರತಿಯೊಬ್ಬರಿಗೂ ತಲುಪಿಸುವ ಜವಬ್ದಾರಿ ನಮ್ಮ ಎಲ್ಲಾ ಕಾರ್‍ಯಕರ್ತರಿಗಿದೆ ಎಂದರು.   ರಾಜ್ಯ ಸಹ ವಕ್ತಾರೆ ಸುಲೋಚನಾ ಜಿಕೆ ಭಟ್ , ವಾಮದಪದವು ಹಾಲು ಉದ್ಪಾದಕರ ಸಂಘದ ಅಧ್ಯಕ್ಷ  ಗೋಪಾಲಕೃಷ್ಣ ಚೌಟ, ವಾಮದಪದವು ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಯಶೋದರ ಶೆಟ್ಟಿ, ಗ್ರಾ.ಪಂ.ಸದಸ್ಯ ಮೋಹನದಾಸ ಗಟ್ಟಿ, ಮಂಗಳೂರು ಎಪಿಎಂಸಿ ಸದಸ್ಯ ಪುರುಷೋತ್ತಮ ಶೆಟ್ಟಿ, ಹಾಪ್ ಕಾಮ್ಸ್ ನಿರ್ದೇಶಕ ವಿಜಯ ರೈ, ಮತ್ತು ವೆಂಕಟೇಶ್ ಭಟ್ ಉಪಸಿತರಿಸದ್ದರು. ಗ್ಯಾಸ್ ಏಜೆನ್ಸಿ ಮಾಲಕ ಪ್ರಬಾಕರ ಶೆಟ್ಟಿ ಸ್ವಾಗತಿಸಿ ಸಂತೋಷ್ ಜೈನ್ ವಂದಿಸಿದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ