ಎ.ಸಿ.ಭಂಡಾರಿ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ

ನಂದಾವರ ಶ್ರೀ ವಿನಾಯಕ ಶಂಕರನಾರಾಯಣ ದುರ್ಗಾಂಬಾ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ, ಜಾನಪದ, ಸಾಹಿತ್ಯಸಂಘಟಕ, ಹಿರಿಯ ಕಾಂಗ್ರೆಸ್ ಮುಖಂಡ 74ರ ಹರೆಯದ ಎ.ಸಿ.ಭಂಡಾರಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾಗಿ ನೇಮಕಗೊಂಡಿದ್ದಾರೆ.
ಅಖಿಲ ಭಾರತ ತುಳು ಒಕ್ಕೂಟದ ಗೌರವಾಧ್ಯಕ್ಷ, ಬದಿಯಡ್ಕದಲ್ಲಿ ನಡೆದ ವಿಶ್ವ ತುಳುವೆರೆ ಆಯನೊ ದ.ಕ. ಜಿಲ್ಲಾ ಸಮಿತಿ ಅಧ್ಯಕ್ಷ, ಸಾಹಿತ್ಯ ಸಂಘಟಕ ಎ.ಸಿ.ಭಂಡಾರಿ ಜಾನಪದ, ರಾಜಕೀಯ, ಧಾರ್ಮಿಕ, ಸಾಹಿತ್ಯಸಂಘಟನೆ ಸಹಿತ ಹಲವು ಸಾಮಾಜಿಕ ಕ್ಷೇತ್ರಗಳಲ್ಲಿ ಕಳೆದ ೫೦ ವರ್ಷಗಳಿಂದ ತೊಡಗಿಸಿಕೊಂಡಿದ್ದಾರೆ.
ಮಂಗಳೂರು ತುಳುಕೂಟ (ಕುಡ್ಲ)ದ ಸ್ಥಾಪನೆಯಲ್ಲಿ ಪ್ರಮುಖ ಪಾತ್ರ ವಹಿಸಿದವರು. ತುಳುಕೂಟದ ಅಧ್ಯಕ್ಷರಾಗಿ, ವಿಶ್ವ ತುಳುವೆರೆ ಪರ್ಬದ ಸಂಯೋಜಕರಾಗಿ, ಸಂವಿಧಾನದ ಎಂಟನೇ ಪರಿಚ್ಛೇದಕ್ಕೆ ತುಳು ಭಾಷೆಯ ಸೇರ್ಪಡೆ ಕುರಿತು ಸರಕಾರಕ್ಕೆ ಒತ್ತಡ ಹೇರಲು ವಿಶ್ವ ತುಳುವೆರೆ ಪರ್ಬದ ವತಿಯಿಂದ ನೇಮಿಸಲಾದ ಸಮಿತಿ ಸಂಚಾಲಕರಾಗಿದ್ದ ಭಂಡಾರಿ, ದಕ್ಷಿಣ ಕನ್ನಡ ಜಿಲ್ಲಾ ಕಾಂಗೆಸ್ ಅಧ್ಯಕ್ಷ, ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಿಸಾನ್ ವಿಭಾಗ ಸಹ ಅಧ್ಯಕ್ಷರಾಗಿ ಕಾಂಗ್ರೆಸ್ ಪಕ್ಷದ ನಾನಾ ಹುದ್ದೆಗಳಲ್ಲಿ ದುಡಿದ ಅವರು ಕುರ್ನಾಡು ಜಿಲ್ಲಾ ಪಂಚಾಯತ್ ಸದಸ್ಯರಾಗಿದ್ದವರು. ಧಾರ್ಮಿಕ ಕ್ಷೇತ್ರದಲ್ಲಿ ಬಹುಕಾಲ ತೊಡಗಿಸಿಕೊಂಡ ಅವರು ನಂದಾವರ ಶ್ರೀ ವಿನಾಯಕ ಶಂಕರನಾರಾಯಣ ದುರ್ಗಾಂಬಾ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಿದವರು.

ಜಾಹೀರಾತು

ತುಳು ಸಾಹಿತ್ಯ ಅಕಾಡೆಮಿ ಸದಸ್ಯರ ಸಂಖ್ಯೆ 12ಕ್ಕೆ ಏರಿಕೆ

ತುಳು ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಬಂಟ್ವಾಳ ತಾಲೂಕಿನ ಹಿರಿಯ ಸಾಮಾಜಿಕ ಕಾರ್ಯಕರ್ತ ಎ.ಸಿ.ಭಂಡಾರಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾಗಿ ನೇಮಕಗೊಂಡಿದ್ದಾರೆ. ಇದರೊಂದಿಗೆ 12 ಸದಸ್ಯರ ಪಟ್ಟಿಯನ್ನೂ ಸರಕಾರ ಬಿಡುಗಡೆಗೊಳಿಸಿದೆ. ಈ ಬಾರಿ 10 ಸದಸ್ಯರ ಸಂಖ್ಯೆಯನ್ನು 12ಕ್ಕೆ ಏರಿಸಲಾಗಿದ್ದು ವಿಶೇಷ.
ನೂತನ ಸದಸ್ಯರು ಇವರು: ಸುಧಾ ನಾಗೇಶ್, ವಿಜಯ ಶೆಟ್ಟಿ, ತಾರಾನಾಥ ಗಟ್ಟಿ ಕಾಪಿಕಾಡು, ಎ.ಗೋಪಾಲ ಅಂಚನ್, ವಿದ್ಯಾಶ್ರೀ ಎನ್, ದುರ್ಗಾ ಮೆನನ್, ಶಿವಾನಂದ ಕರ್ಕೇರ, ಬೆನೆಟ್ ಅಮ್ಮಣ್ಣ, ಚಂದ್ರಶೇಖರ ಗಟ್ಟಿ ಬೋಳೂರು, ಡಾ.ವಾಸುದೇವ ಬೆಳ್ಳೆ, ನಿರಂಜನ ರೈ ಮಠಂದಬೆಟ್ಟು, ಡಾ.ವೈ.ಎನ್. ಶೆಟ್ಟಿ.
ಇವರಲ್ಲಿ ಡಾ. ವೈ.ಎನ್. ಶೆಟ್ಟಿ ಉಡುಪಿ ಜಿಲ್ಲೆಗೆ ಸೇರಿದರೆ ಉಳಿದವರೆಲ್ಲರೂ ದಕ್ಷಿಣ ಕನ್ನಡ ಜಿಲ್ಲೆಯವರು.

 

ಜಾಹೀರಾತು

 

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಎ.ಸಿ.ಭಂಡಾರಿ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*