ಮಣ್ಣಲ್ಲಿ ಆಡುವುದೆಂದರೆ ಅದು ತಾಯಿಯ ಮಡಿಲಲ್ಲಿ ಆಡಿದಂತೆ. ರೀತಿಯ ಸಂಬಂಧ ನಮಗೆ ಮತ್ತು ಭೂಮಿಗೆ ಇದೆ. ಮಣ್ಣಿಗೆ ನಮ್ಮ ಮೈ ಮನಸ್ಸಿನ ಕೊಳೆ ತೊಳೆಯುವ ಶಕ್ತಿ ಇದೆ ಎಂದು ಉದ್ಯಮಿ ಚಂದ್ರಹಾಸ ರೈ ಬಾಲಾಜಿ ಬೈಲು ಅಭಿಪ್ರಾಯ ಪಟ್ಟರು.

ಜಾಹೀರಾತು

ಕಲ್ಲಡ್ಕ ಶ್ರೀರಾಮ ಪದವಿ ಕಾಲೇಜಿನ ಪ್ರಭಾಸ ಕ್ರೀಡಾ ಸಂಘದ ಉದ್ಘಾಟನೆಯ ಅಂಗವಾಗಿ ಕೆಸರ್ಡೊಂಜಿ ದಿನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ನೆಲ, ಜಲ, ಸಂಸ್ಕೃತಿ ಹಾಗೂ ಆಚರಣೆಗಳು ಕೇವಲ ಆಚರಣೆಗಾಗಿ ಮಾತ್ರ ಇದೆ. ಅವುಗಳಲ್ಲಿ ವೈಜ್ಞಾನಿಕ ಹಿನ್ನೆಲೆಗಳಿವೆ ಎಂಬ ಸತ್ಯ ನಮಗೆ ತಿಳಿದಿರಬೇಕು. ನೆಲ ನಮಗೆ ಕೇವಲ ಮಣ್ಣಲ್ಲ ಇದನ್ನು ತಾಯಿ ಎಂದು ಕಂಡು ಆರಾಸಿದವರು ನಾವು ಎಂದು ಅವರು ಹೇಳಿದರು.

ಅಧ್ಯಕ್ಷತೆಯನ್ನು ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯ ಸುಧಾಕರ ರೈವಹಿಸಿ  ಕೆಸರುಗದ್ದೆ ಪಂದ್ಯಾಟಕ್ಕೆ ಚಾಲನೆ ಇತ್ತರುವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ| ಪ್ರಭಾಕರ ಭಟ್ ಕಲ್ಲಡ್ಕ ಗದ್ದೆಗೆ ಹಾಲು ಎರೆಯುವ ಮೂಲಕ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಗೋಪಾಲ ಶೆಣೈ, ಆನಂದ ಶೆಟ್ಟಿ, ಸಂಯೋಜಕರಾದ ಅರವಿಂದ ಪ್ರಸಾದ್, ಪ್ರಾಚಾರ್ಯ ಕೃಷ್ಣಪ್ರಸಾದ ಕಾಯರ್ ಕಟ್ಟೆ ಉಪಸ್ಥಿತರಿದ್ದರು

ವಿದ್ಯಾರ್ಥಿಗಳಿಗೆ ಹಗ್ಗಜಗ್ಗಾಟ, ರಗ್ಬಿ, ಹಿಮ್ಮುಖ ಓಟ, ಕಾಲ್ನಡಿಗೆ, ರಿಲೆ, ಮುಂತಾದ ಕ್ರೀಡೆಗಳನ್ನು ಆಯೋಜಿಸಲಾಗಿತ್ತು. ಪ್ರಭೋಧ ವಾಣಿಜ್ಯ ಸಂಘ ಮತ್ತು ಕದಿಕೆ ತುಳು ಸಂಘದಿಂದ ವಿವಿಧ ಖಾದ್ಯಗಳ ಮಳಿಗೆಗಳನ್ನು ತೆರೆದಿದ್ದರು. ವಿದ್ಯಾರ್ಥಿ ವರದರಾಜ್ ಕಾರ್ಯಕ್ರಮವನ್ನು ನಿರೂಪಿಸಿ, ಸ್ವಾಗತಿಸಿದರು.

ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.