ಮಣ್ಣಲ್ಲಿ ಆಡುವುದೆಂದರೆ ಅದು ತಾಯಿಯ ಮಡಿಲಲ್ಲಿ ಆಡಿದಂತೆ. ರೀತಿಯ ಸಂಬಂಧ ನಮಗೆ ಮತ್ತು ಭೂಮಿಗೆ ಇದೆ. ಮಣ್ಣಿಗೆ ನಮ್ಮ ಮೈ ಮನಸ್ಸಿನ ಕೊಳೆ ತೊಳೆಯುವ ಶಕ್ತಿ ಇದೆ ಎಂದು ಉದ್ಯಮಿ ಚಂದ್ರಹಾಸ ರೈ ಬಾಲಾಜಿ ಬೈಲು ಅಭಿಪ್ರಾಯ ಪಟ್ಟರು.

ಜಾಹೀರಾತು

ಕಲ್ಲಡ್ಕ ಶ್ರೀರಾಮ ಪದವಿ ಕಾಲೇಜಿನ ಪ್ರಭಾಸ ಕ್ರೀಡಾ ಸಂಘದ ಉದ್ಘಾಟನೆಯ ಅಂಗವಾಗಿ ಕೆಸರ್ಡೊಂಜಿ ದಿನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ನೆಲ, ಜಲ, ಸಂಸ್ಕೃತಿ ಹಾಗೂ ಆಚರಣೆಗಳು ಕೇವಲ ಆಚರಣೆಗಾಗಿ ಮಾತ್ರ ಇದೆ. ಅವುಗಳಲ್ಲಿ ವೈಜ್ಞಾನಿಕ ಹಿನ್ನೆಲೆಗಳಿವೆ ಎಂಬ ಸತ್ಯ ನಮಗೆ ತಿಳಿದಿರಬೇಕು. ನೆಲ ನಮಗೆ ಕೇವಲ ಮಣ್ಣಲ್ಲ ಇದನ್ನು ತಾಯಿ ಎಂದು ಕಂಡು ಆರಾಸಿದವರು ನಾವು ಎಂದು ಅವರು ಹೇಳಿದರು.

ಅಧ್ಯಕ್ಷತೆಯನ್ನು ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯ ಸುಧಾಕರ ರೈವಹಿಸಿ  ಕೆಸರುಗದ್ದೆ ಪಂದ್ಯಾಟಕ್ಕೆ ಚಾಲನೆ ಇತ್ತರುವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ| ಪ್ರಭಾಕರ ಭಟ್ ಕಲ್ಲಡ್ಕ ಗದ್ದೆಗೆ ಹಾಲು ಎರೆಯುವ ಮೂಲಕ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಗೋಪಾಲ ಶೆಣೈ, ಆನಂದ ಶೆಟ್ಟಿ, ಸಂಯೋಜಕರಾದ ಅರವಿಂದ ಪ್ರಸಾದ್, ಪ್ರಾಚಾರ್ಯ ಕೃಷ್ಣಪ್ರಸಾದ ಕಾಯರ್ ಕಟ್ಟೆ ಉಪಸ್ಥಿತರಿದ್ದರು

ಜಾಹೀರಾತು

ವಿದ್ಯಾರ್ಥಿಗಳಿಗೆ ಹಗ್ಗಜಗ್ಗಾಟ, ರಗ್ಬಿ, ಹಿಮ್ಮುಖ ಓಟ, ಕಾಲ್ನಡಿಗೆ, ರಿಲೆ, ಮುಂತಾದ ಕ್ರೀಡೆಗಳನ್ನು ಆಯೋಜಿಸಲಾಗಿತ್ತು. ಪ್ರಭೋಧ ವಾಣಿಜ್ಯ ಸಂಘ ಮತ್ತು ಕದಿಕೆ ತುಳು ಸಂಘದಿಂದ ವಿವಿಧ ಖಾದ್ಯಗಳ ಮಳಿಗೆಗಳನ್ನು ತೆರೆದಿದ್ದರು. ವಿದ್ಯಾರ್ಥಿ ವರದರಾಜ್ ಕಾರ್ಯಕ್ರಮವನ್ನು ನಿರೂಪಿಸಿ, ಸ್ವಾಗತಿಸಿದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ