ವಿಟ್ಲ

ಸೂರಿಲ್ಲದ ನಿಲ್ದಾಣಕ್ಕೆ ಬೇಕು ಕಾಯಕಲ್ಪ

before

now

ಸಾಲೆತ್ತೂರು ಸಮೀಪ ಕೊಡಂಗೆ ಎಂಬಲ್ಲಿ ಪಂಚಾಯತ್ ಬಸ್ ನಿಲ್ದಾಣವೊಂದು ಶಿಥಿಲವಾಗಿದ್ದು, ದುರಸ್ತಿಯ ನಿರೀಕ್ಷೆಯಲ್ಲಿದೆ. ಮಂಗಳೂರು, ವಿಟ್ಲ ಸಹಿತ ನಾನಾ ಪ್ರದೇಶಗಳಿಗೆ ತೆರಳುವ ಬಸ್ಸುಗಳನ್ನು ಕಾಯುವ ಪ್ರಯಾಣಿಕರು ಇದೇ ಬಸ್ ನಿಲ್ದಾಣದಲ್ಲಿ ನಿಲ್ಲಬೇಕಿದೆ. ಕಳೆದ ಹಲವು ವರ್ಷಗಳಿಂದ ಹಂಚು ಹಾಸಿ ಗಟ್ಟಿಮುಟ್ಟಾಗಿದ್ದ ಬಸ್ ನಿಲ್ದಾಣ, ಕ್ರಮೇಣ ತನ್ನ ಸ್ವರೂಪವನ್ನು ಕಳೆದುಕೊಳ್ಳತೊಡಗಿತು. ಕುರಿತು ಸ್ಥಳೀಯ ಗ್ರಾಮ ಪಂಚಾಯತ್ ಗೆ ಹಲವು ಬಾರಿ ಮನವಿ ಮಾಡಲಾಗಿದ್ದು, ಹಲವು ತಿಂಗಳುಗಳಿಂದ ದುರಸ್ತಿಯ ನಿರೀಕ್ಷೆಯಲ್ಲಿ ಚಾತಕಪಕ್ಷಿಗಳಂತೆ ಸ್ಥಳೀಯರು ಕಾಯುತ್ತಿದ್ದಾರೆ. ಪುಟ್ಟ ಮಕ್ಕಳ ಸಹಿತ ವೃದ್ಧರು, ಮಹಿಳೆಯರು ನಿಲ್ಲುವ ಬಸ್ ನಿಲ್ದಾಣದ ಸೂರು ಒಂದೊಂದಾಗಿಯೇ ಕಳಚಿಹೋಗಿ, ಈಗ ಬೋಳುಬೋಳಾಗಿ ನಿಂತಿದೆ. ಸ್ಥಳೀಯ ಗೆಳೆಯರ ಬಳಗ ಕೊಡುಗೆಯಾಗಿ ನೀಡಿರುವ ಬಸ್ ರೂಟ್ ಹಾಗೂ ವೇಳಾಪಟ್ಟಿಯ ನಾಮಫಲಕವೊಂದೇ ನಿಲ್ದಾಣದ ಗತವೈಭವಕ್ಕೆ ಸಾಕ್ಷಿಯಾಗಿ ಉಳಿದಿದೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ