ಕಲ್ಲಡ್ಕ

ಮಕ್ಕಳ ಮನಗೆದ್ದ ಆಟಿದ ಕೂಟ

ನೂರು ವರ್ಷಕ್ಕೂ ಹಿಂದಿನ ಕಾಲದ ಕೃಷಿ, ಮನೆ ಸಾಮಾಗ್ರಿ, ತಾಮ್ರದ ಪಾತ್ರೆಗಳ ಪ್ರದರ್ಶನ, ವಿವಿಧ ಖಾದ್ಯಗಳ ತಯಾರಿಯ ಹಿನ್ನೆಲೆ ಮಾಹಿತಿ..

ಜಾಹೀರಾತು

ಕೃಷಿ ಚಟುವಟಿಕೆಗಳನ್ನು ನಡೆಸುವ ಮೂಲಕ ಜಿಲ್ಲೆಯ ಗಮನ ಸೆಳೆದ ಬಂಟ್ವಾಳ ತಾಲೂಕಿನ ಮಜಿ ವೀರಕಂಭ ಶಾಲೆಯಲ್ಲಿ ಗುರುವಾರ ನಡೆದ ಆಟಿಡೊಂಜಿ ಕೂಟ, ವಸ್ತು ಪ್ರದರ್ಶನ, ತುಳುನಾಡಿನ ಖಾದ್ಯಪ್ರದರ್ಶನ ಮತ್ತು ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಕಂಡುಬಂದ ಅಂಶಗಳು ಇವು.

ವೀರಕಂಬ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಒಡಿಯೂರು ಗ್ರಾಮವಿಕಾಸ ಯೋಜನೆ ವೀರಕಂಬ, ರೋಟರಿ ಕ್ಲಬ್ ಮಂಗಳೂರು ಹಾಗೂ ದಕ್ಷಿಣ ಕನ್ನಡ ಉಡುಪಿ ಫೋಟೋಗ್ರಾಫರ್ಸ್ ಅಸೋಶಿಯೇಶನ್ ಬಂಟ್ವಾಳ ಸಹಕಾರದಲ್ಲಿ ನಡೆದ ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯಿತಿ ಸದಸ್ಯೆ ಮಂಜುಳ ಮಾವೆ ಉದ್ಘಾಟಿಸಿದರು. ಎಸ್ಡಿಎಂಸಿ ಅಧ್ಯಕ್ಷ ಸಂಜೀವ ಅಧ್ಯಕ್ಷತೆ ವಹಿಸಿದ್ದರು.

ಜಾಹೀರಾತು

ತಾಲ್ಲೂಕು ಪಂಚಾಯಿತಿ ಸದಸ್ಯೆ ಗೀತಾ ಚಂದ್ರಶೇಖರ್, ಮಂಗಳೂರು ರೋಟರಿ ಕ್ಲಬ್ ಅಧ್ಯಕ್ಷ ರೇಮಂಡ್, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೃಷಿ ಅಧಿಕಾರಿ ನಾರಾಯಣ ಗೌಡ, ಒಡಿಯೂರು ಗ್ರಾಮವಿಕಾಸ ಯೋಜನೆಯ ವಿಸ್ತಣಾಕಾರಿ ಸದಾಶಿವ ಅಳಿಕೆ, ಪೋಟೋ ಗ್ರಾಫರ್ಸ್ ಅಸೋಶಿಯೇಶನ್ ಜಯರಾಮ ರೈ, ಬಂಟ್ವಾಳ ಒಕ್ಕೂಟ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅಧ್ಯಕ್ಷ ಸೋಮಶೇಖರ್ ಮೊದಲಾದವರು ಉಪಸ್ಥಿತರಿದ್ದರು.

ಯಾಸೀರ್ ಕಲ್ಲಡ್ಕ ಅವರ ನೇತೃತ್ವದಲ್ಲಿ ನೂರು ವರ್ಷಗಳ ಹಿಂದಿನ ಹಳೆಕಾಲದ ಕೃಷಿ ಮತ್ತು ಮನೆ ಸಾಮಾಗ್ರಿಗಳಾದ ಮರದ, ಮಣ್ಣಿನ, ತಾಮ್ರದ ಪಾತ್ರೆಗಳ ಪ್ರದರ್ಶನ, ಹಾಗೂ ನೂತನ  ನಾಣ್ಯಗಳ ಪ್ರದರ್ಶನವು ನಡೆಯಿತು. ಅದಲ್ಲದೇ ಮೊತ್ತ ಮೊದಲ ಹಂಚು ಗಮನ ಸೆಳೆಯಿತು.

ಜಾಹೀರಾತು

ಶಾಲಾ ವಿದ್ಯಾರ್ಥಿಗಳಿಂದ ಆಟಿ ತಿಂಗಳ ಕೆಲವು ನೃತ್ಯಗಳು ನಡೆಯಿತು. ಊರಿನ ಹಿರಿಯ ಮಹಿಳೆಯರು ತುಳುನಾಡಿನ ಕವಿತೆಗಳನ್ನು ಹಾಡಿ ಮನರಂಜಿಸಿದರು. ಶಾಲಾ ಮುಖ್ಯ ಶಿಕ್ಷಕ ನಾರಾಯಣ ಪೂಜಾರಿ ಸ್ವಾಗತಿಸಿದರು. ಸಂಗೀತ ಶರ್ಮ ನಿರೂಪಿಸಿದರು. ಸುನೀಲ್ ವಂದಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ