ಮಾತೃ ಪೂರ್ಣ ಯೋಜನೆಯಿಂದ ಕರಾವಳಿ ಜಿಲ್ಲೆಗಳನ್ನು ಕೈಬಿಡುವಂತೆ ಮನವಿ


ರಾಜ್ಯ ಸರ್ಕಾರವು ಎಲ್ಲಾ ಅಂಗನವಾಡಿ ಕೇಂದ್ರಗಳಲ್ಲಿನ ವ್ಯಾಪ್ತಿಗೆ ಸಂಬಂಧಿಸಿದಂತೆ ಕೇಂದ್ರಗಳಲ್ಲಿ ದಾಖಲಾಗಿರುವ ಗರ್ಭಿಣಿಯರಿಗೆ, ಬಾಣಂತಿಯರಿಗೆ, ಕಿಶೋರಿಗಳಿಗೆ ಪೌಷ್ಠಿಕಾಂಶವುಳ್ಳ ಮಧ್ಯಾಹ್ನದ ಬಿಸಿ ಊಟವನ್ನು ಪ್ರತಿನಿತ್ಯ ಮಧ್ಯಾಹ್ನ ಅಂಗನವಾಡಿ ಕೇಂದ್ರಗಳಲ್ಲಿಯೇ ನೀಡಬೇಕು ಎನ್ನುವ ಸರಕಾರದ ಯೋಜನೆ ಶೀಘ್ರವೇ ಕಾರ್‍ಯಗತವಾಗಲಿರುವುದು ಸ್ವಾಗತಾರ್ಹ ಆದರೇ ಈ ಯೋಜನೆ ಅನುಷ್ಠಾನಗೊಳಿಸಲು ಕರಾವಳಿ ಜಿಲ್ಲೆಗಳಾದ ದಕ್ಷಿಣಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಕಷ್ಟ ಸಾಧ್ಯವಾಗಬಹುದು. ಅಂದರೆ ಹೆಚ್ಚಿನ ಅಂಗನವಾಡಿ ಕೇಂದ್ರಗಳಲ್ಲಿ ಮೂಲಭೂತ ಸೌಕರ್ಯದ ಸಮಸ್ಯೆ ಎದುರಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ಹೆಚ್ಚಿನ ಮಹಿಳೆಯರು ಬೇರೆ ಬೇರೆ ಕೆಲಸ ನಿಮಿತ್ತ ಮನೆಯಲ್ಲಿಯೇ ಅಡುಗೆ ಮಾಡಿ ಊಟ ಮಾಡುವುದು ವಾಡಿಕೆಯಾಗಿದ್ದು ತಮ್ಮ ದೈನಂದಿನ ಕೆಲಸದ ಒತ್ತಡದಿಂದ ಅಂಗನವಾಡಿ ಕೇಂದ್ರಗಳಿಗೆ ಬರಲು ಸಾಧ್ಯವಾಗಲಿಕ್ಕಿಲ್ಲ. ಕೇಂದ್ರದಲ್ಲಿ ಸ್ಥಳಾವಕಾಶವೂ ಕಡಿಮೆಯಾಗಿದ್ದು ಕಾರ್‍ಯಕರ್ತೆಯರು ಸಹ ಬೇರೆ ಬೇರೆ ಸಂಧರ್ಭಗಲ್ಲಿ ಅಂದರೆ ಚುನಾವಣಾ ಆಯೋಗದ ಕೆಲಸ ಕಾರ್‍ಯಗಳು, ಫಲ್ಸ್ ಪೋಲಿಯೋ, ಇನ್ನಿತರ ಇಲಾಖಾ ಸಂಬಂಧಿಸಿದಂತೆ ಸಭೆಗಳಲ್ಲಿ ಭಾಗವಹಿಸುವಾಗ ಅಂಗನವಾಡಿ ಸಹಾಯಕಿಯರೇ ಎಲ್ಲಾ ಜವಾಬ್ದಾರಿಯೊಂದಿಗೆ ಪುಟ್ಟ ಮಕ್ಕಳನ್ನು ತನ್ನ ನಿಗದಲ್ಲಿರಿಸಿ ಅವರಿಗೆ ಕಾಲಕಾಲಕ್ಕೆ ತಿಂಡಿ ತಿನಿಸುವುದು, ಊಟ ಬಡಿಸಿ ಅವರ ಆರೈಕೆ ಮಾಡುವುದರಲ್ಲಿಯೇ ಕಾಲ ಕಳೆಯಬೇಕಾಗುತ್ತದೆ. ಇದರ ಜೊತೆಯಲ್ಲಿ ಬಾಣಂತಿಯರಿಗೆ, ಗರ್ಭಿಣಿಯರಿಗೆ, ಕಿಶೋರಿಯರಿಗೆ ಪ್ರತ್ಯೇಕವಾಗಿ ಬಿಸಿ ಊಟ ತಯಾರಿಸಿ ಒದಗಿಸಲು ಸಾಧ್ಯವಾಗದ ಮಾತು.
ಆದುದರಿಂದ ಸದ್ಯದಲ್ಲಿ ಜಾರಿಗೆ ತರಲು ಉದ್ದೇಶಿಸಿರುವ “ಮಾತೃ ಪೂರ್ಣ” ಯೋಜನೆಯಿಂದ ದಕ್ಷಿಣಕನ್ನಡ ಮತ್ತು ಉಡುಪಿ ಜಿಲ್ಲೆಗಳನ್ನು ಕೈಬಿಟ್ಟು ಈ ಹಿಂದಿನಂತೆ ಪೌಷ್ಠಕ ಆಹಾರ ಮನೆಗೆ ಕೊಡುವ ವ್ಯವಸ್ಥೆ ಜಾರಿಗೆ ತರಬೇಕು ಎಂದು ತಾಲೂಕು ಪಂಚಾಯತ್ ಸದಸ್ಯ ಪ್ರಭಾಕರ ಪ್ರಭು ವಿನಂತಿಸಿದ್ದಾರೆ.

 

ಜಾಹೀರಾತು
ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಮಾತೃ ಪೂರ್ಣ ಯೋಜನೆಯಿಂದ ಕರಾವಳಿ ಜಿಲ್ಲೆಗಳನ್ನು ಕೈಬಿಡುವಂತೆ ಮನವಿ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*