ಮಾತೃ ಪೂರ್ಣ ಯೋಜನೆಯಿಂದ ಕರಾವಳಿ ಜಿಲ್ಲೆಗಳನ್ನು ಕೈಬಿಡುವಂತೆ ಮನವಿ


ರಾಜ್ಯ ಸರ್ಕಾರವು ಎಲ್ಲಾ ಅಂಗನವಾಡಿ ಕೇಂದ್ರಗಳಲ್ಲಿನ ವ್ಯಾಪ್ತಿಗೆ ಸಂಬಂಧಿಸಿದಂತೆ ಕೇಂದ್ರಗಳಲ್ಲಿ ದಾಖಲಾಗಿರುವ ಗರ್ಭಿಣಿಯರಿಗೆ, ಬಾಣಂತಿಯರಿಗೆ, ಕಿಶೋರಿಗಳಿಗೆ ಪೌಷ್ಠಿಕಾಂಶವುಳ್ಳ ಮಧ್ಯಾಹ್ನದ ಬಿಸಿ ಊಟವನ್ನು ಪ್ರತಿನಿತ್ಯ ಮಧ್ಯಾಹ್ನ ಅಂಗನವಾಡಿ ಕೇಂದ್ರಗಳಲ್ಲಿಯೇ ನೀಡಬೇಕು ಎನ್ನುವ ಸರಕಾರದ ಯೋಜನೆ ಶೀಘ್ರವೇ ಕಾರ್‍ಯಗತವಾಗಲಿರುವುದು ಸ್ವಾಗತಾರ್ಹ ಆದರೇ ಈ ಯೋಜನೆ ಅನುಷ್ಠಾನಗೊಳಿಸಲು ಕರಾವಳಿ ಜಿಲ್ಲೆಗಳಾದ ದಕ್ಷಿಣಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಕಷ್ಟ ಸಾಧ್ಯವಾಗಬಹುದು. ಅಂದರೆ ಹೆಚ್ಚಿನ ಅಂಗನವಾಡಿ ಕೇಂದ್ರಗಳಲ್ಲಿ ಮೂಲಭೂತ ಸೌಕರ್ಯದ ಸಮಸ್ಯೆ ಎದುರಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ಹೆಚ್ಚಿನ ಮಹಿಳೆಯರು ಬೇರೆ ಬೇರೆ ಕೆಲಸ ನಿಮಿತ್ತ ಮನೆಯಲ್ಲಿಯೇ ಅಡುಗೆ ಮಾಡಿ ಊಟ ಮಾಡುವುದು ವಾಡಿಕೆಯಾಗಿದ್ದು ತಮ್ಮ ದೈನಂದಿನ ಕೆಲಸದ ಒತ್ತಡದಿಂದ ಅಂಗನವಾಡಿ ಕೇಂದ್ರಗಳಿಗೆ ಬರಲು ಸಾಧ್ಯವಾಗಲಿಕ್ಕಿಲ್ಲ. ಕೇಂದ್ರದಲ್ಲಿ ಸ್ಥಳಾವಕಾಶವೂ ಕಡಿಮೆಯಾಗಿದ್ದು ಕಾರ್‍ಯಕರ್ತೆಯರು ಸಹ ಬೇರೆ ಬೇರೆ ಸಂಧರ್ಭಗಲ್ಲಿ ಅಂದರೆ ಚುನಾವಣಾ ಆಯೋಗದ ಕೆಲಸ ಕಾರ್‍ಯಗಳು, ಫಲ್ಸ್ ಪೋಲಿಯೋ, ಇನ್ನಿತರ ಇಲಾಖಾ ಸಂಬಂಧಿಸಿದಂತೆ ಸಭೆಗಳಲ್ಲಿ ಭಾಗವಹಿಸುವಾಗ ಅಂಗನವಾಡಿ ಸಹಾಯಕಿಯರೇ ಎಲ್ಲಾ ಜವಾಬ್ದಾರಿಯೊಂದಿಗೆ ಪುಟ್ಟ ಮಕ್ಕಳನ್ನು ತನ್ನ ನಿಗದಲ್ಲಿರಿಸಿ ಅವರಿಗೆ ಕಾಲಕಾಲಕ್ಕೆ ತಿಂಡಿ ತಿನಿಸುವುದು, ಊಟ ಬಡಿಸಿ ಅವರ ಆರೈಕೆ ಮಾಡುವುದರಲ್ಲಿಯೇ ಕಾಲ ಕಳೆಯಬೇಕಾಗುತ್ತದೆ. ಇದರ ಜೊತೆಯಲ್ಲಿ ಬಾಣಂತಿಯರಿಗೆ, ಗರ್ಭಿಣಿಯರಿಗೆ, ಕಿಶೋರಿಯರಿಗೆ ಪ್ರತ್ಯೇಕವಾಗಿ ಬಿಸಿ ಊಟ ತಯಾರಿಸಿ ಒದಗಿಸಲು ಸಾಧ್ಯವಾಗದ ಮಾತು.
ಆದುದರಿಂದ ಸದ್ಯದಲ್ಲಿ ಜಾರಿಗೆ ತರಲು ಉದ್ದೇಶಿಸಿರುವ “ಮಾತೃ ಪೂರ್ಣ” ಯೋಜನೆಯಿಂದ ದಕ್ಷಿಣಕನ್ನಡ ಮತ್ತು ಉಡುಪಿ ಜಿಲ್ಲೆಗಳನ್ನು ಕೈಬಿಟ್ಟು ಈ ಹಿಂದಿನಂತೆ ಪೌಷ್ಠಕ ಆಹಾರ ಮನೆಗೆ ಕೊಡುವ ವ್ಯವಸ್ಥೆ ಜಾರಿಗೆ ತರಬೇಕು ಎಂದು ತಾಲೂಕು ಪಂಚಾಯತ್ ಸದಸ್ಯ ಪ್ರಭಾಕರ ಪ್ರಭು ವಿನಂತಿಸಿದ್ದಾರೆ.

 

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಮಾತೃ ಪೂರ್ಣ ಯೋಜನೆಯಿಂದ ಕರಾವಳಿ ಜಿಲ್ಲೆಗಳನ್ನು ಕೈಬಿಡುವಂತೆ ಮನವಿ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*