ಅನುದಾನ ರದ್ದು ವಿರೋಧಿಸಿ ಪೋಷಕರು, ವಿದ್ಯಾರ್ಥಿಗಳ ಪ್ರತಿಭಟನೆ

ಕೊಲ್ಲೂರು ಮುಕಾಂಬಿಕ ದೇವಾಲಯದಿಂದ ದತ್ತು ಯೋಜನೆಯಡಿ ಕಲ್ಲಡ್ಕ ಶ್ರೀ ರಾಮ ವಿದ್ಯಾ ಕೇಂದ್ರ ಮತ್ತು ಪುಣಚ ಶ್ರೀದೇವಿ ಶಾಲೆಗಳಿಗೆ ಕಳೆದ ಹತ್ತು ವರ್ಷದಿಂದ ಪ್ರಸಾದ ರೂಪದಲ್ಲಿ ನೀಡಲಾಗುತ್ತಿದ್ದ ಅನುದಾನವನ್ನು ರದ್ದುಗೊಳಿಸಿದ ಸರಕಾರದ ಕ್ರಮದ ವಿರುದ್ದ ವಿದ್ಯಾರ್ಥಿಗಳ ಪೋಷಕರು ಶುಕ್ರವಾರ ಬೆಳಿಗ್ಗೆ ಬಿ.ಸಿ.ರೋಡಿನಲ್ಲಿ ಪ್ರತಿಭಟನೆ ನಡೆಸಲಿದ್ದಾರೆ.

ಜಾಹೀರಾತು

ಬಂಟ್ವಾಳ ತಾಲೂಕು ಕಚೇರಿ ಮುಂಭಾಗ ಅನುದಾನ ರದ್ದುಗೊಂಡ ಎರಡು ಶಾಲೆಗಳ ವಿದ್ಯಾರ್ಥಿಗಳು ಹಾಗೂ ಅವರ ಪೋಷಕರು  ಪ್ರತಿಭಟನೆ ನಡೆಸಲಿದ್ದೆವೆ ಎಂದು ಪೋಷಕರಾದ ಶೋಭಾ, ನಳಿನಿ, ರಾಜೀವಿ, ಅಬ್ದುಲ್ ಹಕೀಂ ಗುರುವಾರ ಬಿ.ಸಿ.ರೋಡಿನಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಈ ವಿದ್ಯಾ ಸಂಸ್ಥೆಗಳಲ್ಲಿ ಶೇ94 ರಷ್ಟು ವಿದ್ಯಾರ್ಥಿಗಳು ಬಡ,ಹಿಂದುಳಿದ,ಪ.ಜಾ.ಪಂ.ಕ್ಕೆ ಸೇರಿದ ಅಹಿಂದ ವಿದ್ಯಾರ್ಥಿಗಳೇ ವಿದ್ಯಾರ್ಜನೆ ಮಾಡುತ್ತಿದ್ದಾರೆ. ರಾಜ್ಯದ 52 ಶಾಲೆಗಳಿಗೆ ಈ ರೀತಿಯಾಗಿ ಅನುದಾನ ನೀಡಲಾಗುತ್ತದ್ದು ಇದೀಗ ರಾಜಕೀಯ ದ್ವೇಷಕ್ಕಾಗಿ ಈ ಎರಡು ಶಾಲೆಗೆ ಬರುತ್ತಿದ್ದ ಅನುದಾನವನ್ನು ಮಾತ್ರ ರದ್ದುಗೊಳಿಸಿರುವುದು ಕನ್ನಡ ಶಾಲೆಯ ಮೇಲಿನ ದೌರ್ಜಜನ್ಯವಾಗಿದೆಯಲ್ಲದೆ ಸರಕಾರದ ಈ ಅಮಾನವೀಯ ಕ್ರಮ ಮಕ್ಕಳ ಶಿಕ್ಷಣ ಹಕ್ಕಿನ ಉಲ್ಲಂಘನೆಯಾಗಿದೆ ಎಂದು ಅವರು ತಿಳಿಸಿದರು. ಸುದ್ದಿಗೋಷ್ಟಿಯಲ್ಲಿ ವಿದ್ಯಾರ್ಥಿಗಳಾದ ಅಖಿಲಾ, ಭವ್ಯಶ್ರೀ ಮೊದಲಾದವರಿದ್ದರು.

ನೆರವು ಹಿಂದೆಗೆದದ್ದು ಸೇಡಿನ ರಾಜಕಾರಣ: ಡಾ.ಪ್ರಭಾಕರ ಭಟ್

ಜಾಹೀರಾತು

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಅನುದಾನ ರದ್ದು ವಿರೋಧಿಸಿ ಪೋಷಕರು, ವಿದ್ಯಾರ್ಥಿಗಳ ಪ್ರತಿಭಟನೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*