ಬಂಟ್ವಾಳ

ಅನುದಾನ ರದ್ದು ವಿರೋಧಿಸಿ ಪೋಷಕರು, ವಿದ್ಯಾರ್ಥಿಗಳ ಪ್ರತಿಭಟನೆ

ಕೊಲ್ಲೂರು ಮುಕಾಂಬಿಕ ದೇವಾಲಯದಿಂದ ದತ್ತು ಯೋಜನೆಯಡಿ ಕಲ್ಲಡ್ಕ ಶ್ರೀ ರಾಮ ವಿದ್ಯಾ ಕೇಂದ್ರ ಮತ್ತು ಪುಣಚ ಶ್ರೀದೇವಿ ಶಾಲೆಗಳಿಗೆ ಕಳೆದ ಹತ್ತು ವರ್ಷದಿಂದ ಪ್ರಸಾದ ರೂಪದಲ್ಲಿ ನೀಡಲಾಗುತ್ತಿದ್ದ ಅನುದಾನವನ್ನು ರದ್ದುಗೊಳಿಸಿದ ಸರಕಾರದ ಕ್ರಮದ ವಿರುದ್ದ ವಿದ್ಯಾರ್ಥಿಗಳ ಪೋಷಕರು ಶುಕ್ರವಾರ ಬೆಳಿಗ್ಗೆ ಬಿ.ಸಿ.ರೋಡಿನಲ್ಲಿ ಪ್ರತಿಭಟನೆ ನಡೆಸಲಿದ್ದಾರೆ.

ಜಾಹೀರಾತು

ಬಂಟ್ವಾಳ ತಾಲೂಕು ಕಚೇರಿ ಮುಂಭಾಗ ಅನುದಾನ ರದ್ದುಗೊಂಡ ಎರಡು ಶಾಲೆಗಳ ವಿದ್ಯಾರ್ಥಿಗಳು ಹಾಗೂ ಅವರ ಪೋಷಕರು  ಪ್ರತಿಭಟನೆ ನಡೆಸಲಿದ್ದೆವೆ ಎಂದು ಪೋಷಕರಾದ ಶೋಭಾ, ನಳಿನಿ, ರಾಜೀವಿ, ಅಬ್ದುಲ್ ಹಕೀಂ ಗುರುವಾರ ಬಿ.ಸಿ.ರೋಡಿನಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಈ ವಿದ್ಯಾ ಸಂಸ್ಥೆಗಳಲ್ಲಿ ಶೇ94 ರಷ್ಟು ವಿದ್ಯಾರ್ಥಿಗಳು ಬಡ,ಹಿಂದುಳಿದ,ಪ.ಜಾ.ಪಂ.ಕ್ಕೆ ಸೇರಿದ ಅಹಿಂದ ವಿದ್ಯಾರ್ಥಿಗಳೇ ವಿದ್ಯಾರ್ಜನೆ ಮಾಡುತ್ತಿದ್ದಾರೆ. ರಾಜ್ಯದ 52 ಶಾಲೆಗಳಿಗೆ ಈ ರೀತಿಯಾಗಿ ಅನುದಾನ ನೀಡಲಾಗುತ್ತದ್ದು ಇದೀಗ ರಾಜಕೀಯ ದ್ವೇಷಕ್ಕಾಗಿ ಈ ಎರಡು ಶಾಲೆಗೆ ಬರುತ್ತಿದ್ದ ಅನುದಾನವನ್ನು ಮಾತ್ರ ರದ್ದುಗೊಳಿಸಿರುವುದು ಕನ್ನಡ ಶಾಲೆಯ ಮೇಲಿನ ದೌರ್ಜಜನ್ಯವಾಗಿದೆಯಲ್ಲದೆ ಸರಕಾರದ ಈ ಅಮಾನವೀಯ ಕ್ರಮ ಮಕ್ಕಳ ಶಿಕ್ಷಣ ಹಕ್ಕಿನ ಉಲ್ಲಂಘನೆಯಾಗಿದೆ ಎಂದು ಅವರು ತಿಳಿಸಿದರು. ಸುದ್ದಿಗೋಷ್ಟಿಯಲ್ಲಿ ವಿದ್ಯಾರ್ಥಿಗಳಾದ ಅಖಿಲಾ, ಭವ್ಯಶ್ರೀ ಮೊದಲಾದವರಿದ್ದರು.

ನೆರವು ಹಿಂದೆಗೆದದ್ದು ಸೇಡಿನ ರಾಜಕಾರಣ: ಡಾ.ಪ್ರಭಾಕರ ಭಟ್

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ