ಬಂಟ್ವಾಳ

ಒಡ್ಡೂರು ಫಾರ್ಮ ಹೌಸ್ ನಲ್ಲಿ ತುಳುನಾಡ ಗೊಬ್ಬಲು

ವೃತ್ತಿಯ ಜೊತೆಗೆ ಪ್ರವೃತ್ತಿಯನ್ನು ಮೈಗೂಡಿಸಿಕೊಂಡ ಛಾಯಾಚಿತ್ರಗಾಹಕರ ಸಂಘ ಕ್ರೀಡೆಯ ಮೂಲಕ ಸಂಸ್ಕೃತಿಯನ್ನು ಬೆಳೆಸುವ ಮಹತ್ಕಾರ್ಯವನ್ನು ಮಾಡುತ್ತಿದೆ, ಅಳಿವಿನಂಚಿನಲ್ಲಿರುವ ಗ್ರಾಮೀಣ ಕ್ರೀಡೆಗಳನ್ನು ಉಳಿಸುವ ಕೆಲಸ ಛಾಯಾಚಿತ್ರಗಾಹಕರ ಸಂಘದ ಸದಸ್ಯರಿಂದ ನಡೆಯುತ್ತದೆ ಎಂದರೆ ನಿಜಕ್ಕೂ ಶ್ಲಾಘನೀಯ ಕೆಲಸ ಎಂದು ಉಳಿಪ್ಪಾಡಿಗುತ್ತು ರಾಜೇಶ್ ನಾಯಕ್ ಉಳಿಪ್ಪಾಡಿಗುತ್ತು ಹೇಳಿದರು.
ಅವರು ಸೌತ್ ಕೆನರಾ ಪೊಟೋಗ್ರಾಫ್‌ರ್‍ಸ್ ಅಸೋಸಿಯೇಶನ್ (ರಿ). ದ.ಕ-ಉಡುಪಿ ಜಿಲ್ಲೆ ಇದರ ಬಂಟ್ವಾಳ ವಲಯದ ವತಿಯಿಂದ ಒಡ್ಡೂರು ಫಾರ್ಮ ಹೌಸ್ ನಲ್ಲಿ ತುಳುನಾಡ ಗೊಬ್ಬಲು ಎನ್ನುವ ಗ್ರಾಮೀಣ ಕ್ರೀಡೆಯನ್ನು ತೆಂಗಿನ ಕುಟ್ಟುವ ಮೂಲಕ ಕಾರ್‍ಯಕ್ರಮವನ್ನು ಉದ್ಘಾಟಿಸಿ ಬಳಿಕ ನಡೆದ ಸಭಾ ಕಾರ್‍ಯಕ್ರಮದಲ್ಲಿ ಮಾತನಾಡಿದರು.
ವೃತ್ತಿಯ ಜೊತೆಜೊತೆಯಲ್ಲಿ ಸಮಾಜ ಸೇವೆಯ ಮೂಲಕ ಗುರುತಿಸಿಕೊಂಡ ಸಂಘ ಸಾಮಾಜಿಕ ಕಳಕಳಿಯನ್ನು ಹೊಂದಿದೆ ಎನ್ನುವುದಕ್ಕೆ ಇಂತಹ ಕಾರ್‍ಯಕ್ರಮಗಳೇ ಸಾಕ್ಷಿಯಾಗಿವೆ ಎಂದರು . ಕ್ರೀಡೆಯಿಂದ ಮಾನಸಿಕ , ಬೌದ್ದಿಕ ಬೆಳವಣಿಗೆ ಮಾತ್ರವಲ್ಲದೆ ಸಾಮಾಜಿಕ ಪರಿವರ್ತನೆ ಕೂಡಾ ಸಾಧ್ಯವಾಗುತ್ತದೆ ಎಂದರು .
ಬಹುಮಾನಕ್ಕೆ ಮಾತ್ರ ಸ್ಪರ್ದೆ ಎನ್ನುವ ಆಲೋಚನೆಯನ್ನು ದೂರ ಮಾಡಿ ಕ್ರೀಡೆಯಲ್ಲಿ ಸ್ಪರ್ದಿಸಿ ವಿನಾಶದ ಅಂಚಿನಲ್ಲಿರುವ ಅದೆಷ್ಟೋ ತುಳುನಾಡಿನ ಕ್ರೀಡೆಗಳನ್ನು ಮುಂದಿನ ಪೀಳಿಗೆಗೆ ಉಳಿಸುವ ಕೆಲಸ ಎಂದು ಭಾಗವಹಿಸಿ ಎಂದರು .
ಈ ಸಂದರ್ಭ ಬಂಟ್ವಾಳ ಪುರಸಭಾ ಸದಸ್ಯ ದೇವದಾಸ ಶೆಟ್ಟಿ , ಮಂಗಳೂರು ಸಂಘದ ಜಿಲ್ಲಾಧ್ಯಕ್ಷ ಜಗನ್ನಾಥ ಶೆಟ್ಟಿ , ಜಿಲ್ಲಾ ಗೌರವಾಧ್ಯಕ್ಷ ಆನಂದ , ಕಾರ್ಯದರ್ಶಿ ಮಧು ಮಂಗಳೂರು, ಜಿಲ್ಲಾ ಕ್ರೀಡಾಕಾರ್‍ಯದರ್ಶಿ ಪ್ರವೀಣ ಕೊರೆಯ, ಜಿಲ್ಲಾ ಉಪಾಧ್ಯಕ್ಷ ವಿಲ್ಸನ್ ಗೊನ್ಸಾಲಿಸ್,ಜಿಲ್ಲಾ ಕೋಶಾಧಿಕಾರಿ ದಯಾನಂದ, ಬಂಟ್ವಾಳ ವಲಯ ಅಧ್ಯಕ್ಷ ಸುಕುಮಾರ್, ವಲಯ ಕಾರ್‍ಯದರ್ಶಿ ಹರೀಶ್ ಕುಂದರ್ , ಕ್ರೀಡಾ ಕಾರ್‍ಯದರ್ಶಿಗಳಾದ ಹರೀಶ್ ನಾಟಿ, ಬಾಸ್ಕರ್ ಬಂಟ್ವಾಳ, ವಲಯ ಕೋಶಾಧಿಕಾರಿ ರವಿ ಕಲ್ಪನೆ ಮತ್ತು ಸದಸ್ಯರು ಉಪಸ್ಥಿತರಿದ್ದರು

ಜಾಹೀರಾತು

 

ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.