ಪಾಣೆಮಂಗಳೂರು ಚಾತುರ್ಮಾಸ- ರತ್ನತ್ರಯ ಆರಾಧನೆ, ಮಂಗಲ ಪ್ರವಚನ

ಪರಮ ಪೂಜ್ಯ 108 ಮುನಿ ಶ್ರೀ ವೀರ ಸಾಗರ ಮಹಾರಾಜರು ಪಾಣೆಮಂಗಳೂರು ಶ್ರೀಅನಂತ ನಾಥ ಸ್ವಾಮೀ ಜಿನ ಚೈತ್ಯಾಲಯದಲ್ಲಿ ಭವ್ಯ ಮಂಗಲ ವರ್ಷಾಯೋಗ – ಚಾತುರ್ಮಾಸವನ್ನು ಆಚರಿಸುತ್ತಿದ್ದಾರೆ. ಆ ಪ್ರಯುಕ್ತ ಆದಿತ್ಯವಾರ ಮುನಿಶ್ರೀಗಳ ಪಾವನ ಸಾನ್ನಿಧ್ಯದಲ್ಲಿ “ರತ್ನತ್ರಯ ಆರಾಧನೆ”ಯನ್ನು ಕಾರ್ಕಳ ಶ್ರೀ ನೇಮಿರಾಜ ಆರಿಗರವರ ನೇತೃತ್ವದ ಕರ್ನಾಟಕ ಜೈನ ಸ್ವಯಂ ಸೇವಕರ ತಂಡ ಮತ್ತು ಸ್ವಸಹಾಯ ಸಂಘಗಳು, ಇವರ ಪ್ರಾಯೋಜಕತ್ವದಲ್ಲಿ, ಲಿ ಶ್ರಾವಕ ಬಂಧುಗಳ ಭಾಗವಹಿಸುವಿಕೆಯಲ್ಲಿ ನಡೆಯಿತು.
ಪೂರ್ವಾಹ್ನ ಮುನಿ ಶ್ರೀಗಳ ಆಹಾರ ಚರ್ಯೆಯಲ್ಲಿ ಅನೇಕ ಶ್ರಾವಕ ಬಂಧುಗಳು ಪಾಲ್ಗೊಂಡಿದ್ದರು.
ಪರಮ ಪೂಜ್ಯ 108 ಮುನಿ ಶ್ರೀ ವೀರ ಸಾಗರ ಮಹಾರಾಜರು ಸಾಮೂಹಿಕ ರತ್ನತ್ರಯ ಆರಾಧನೆಯ ವಿಧಿ- ವಿಧಾನಗಳನ್ನು ಮತ್ತು ಪ್ರತೀ ಪೂಜೆಗಳ ಫಲಗಳನ್ನು ವಿವರವಾಗಿ ತಿಳಿಯಪಡಿಸಿದರು. ಅಪರಾಹ್ನ ಪರಮ ಪೂಜ್ಯ 108 ಮುನಿ ಶ್ರೀ ವೀರ ಸಾಗರ ಮಹಾರಾಜರು ಧರ್ಮ ಸಭೆಯಲ್ಲಿ ಮಂಗಲ ಪ್ರವಚನ ನೀಡಿದರು.
“ಬದುಕು ಹಾಗೂ ಬದುಕಲು ಬಿಡು” ಎಂದು ಸಾರಿದ ಮಹಾವೀರರ ವಾಣಿಯನ್ನು ಜೀವನದಲ್ಲಿ ಆಚರಣೆಗೆ ತಂದಲ್ಲಿ ಮೋಕ್ಷ ಮಾರ್ಗ ಸಾಧ್ಯ, ಅಲ್ಲದೇ ಎಲ್ಲಾ ಧರ್ಮಗಳು ಜೀವನದಲ್ಲಿ ಉತ್ತಮ ಬದುಕನ್ನು ಸಾಗಿಸಲು ಮಾರ್ಗದರ್ಶನ ನೀಡಿದರೆ, ಜೈನ ಧರ್ಮ ಉತ್ತಮ ಸಮಾಧಿ ಪಡೆಯಲು ಮಾರ್ಗದರ್ಶನ ನೀಡುತ್ತದೆ ಎಂದು ಮುನಿ ಶ್ರೀ ವೀರ ಸಾಗರ ಮಹಾರಾಜರು ತಮ್ಮ ಮಂಗಲ ಪ್ರವಚನದಲ್ಲಿ ತಿಳಿಸಿದರು.
ಮಂಗಲ ಪ್ರವಚನದ ನಂತರ ಧರ್ಮ ಸಭೆಯಲ್ಲಿ “ಶಂಕಾ-ಸಮಾಧಾನ”ಕಾರ್ಯಕ್ರಮ ನಡೆಯಿತು.ಅನೇಕ ಶ್ರಾವಕ ಬಂಧುಗಳ  ಧಾರ್ಮಿಕ ಪ್ರಶ್ನೆಗಳಿಗೆ ಮುನಿ ಮಹಾರಾಜರು ಉತ್ತರಿಸಿ ಶ್ರಾವಕರ ಶಂಕೆಗಳಿಗೆ ಶಾಸ್ತ್ರಗಳ ಆಧಾರಿತ ಉತ್ತರಗಳನ್ನು ಪ್ರತಿಯೊಬ್ಬರ ಮನಮುಟ್ಟುವಂತೆ ತಿಳಿಯಪಡಿಸಿದರು. ಮುಂದಿನ ದಿನಗಳಲ್ಲಿ ಪ್ರತಿಯೊಬ್ಬ ಶ್ರಾವಕರೂ “ಶಂಕಾ-ಸಮಾಧಾನ”ಕಾರ್ಯಕ್ರಮದಲ್ಲಿ, ತಮ್ಮ ಪ್ರಶ್ನೆಗಳನ್ನು ಕೇಳಿ ತಮ್ಮ ಉತ್ತರ ಪಡೆದು, ಧರ್ಮದ ಅರಿವು ಹೆಚ್ಚಿಸಿಕೊಳ್ಳಬೇಕೆಂದು ಹೇಳಿದರು.
ಸಾಮೂಹಿಕ ಆರಾಧನೆ ಕಾರ್ಯಕ್ರಮದಲ್ಲಿ ಮಂಗಳೂರು, ಮೂಡುಬಿದಿರೆ,ವೇಣೂರು, ಧರ್ಮಸ್ಥಳ, ಕಾರ್ಕಳ, ಹಾಸನ ಮುಂತಾದ ಕಡೆಗಳಿಂದ ಅನೇಕ ಶ್ರಾವಕ ಬಂಧುಗಳು ಪಾಲ್ಗೊಂಡಿದ್ದರು.
ದಿನಾಂಕ 15.ಮಂಗಳವಾರ, ಉಡುಪಿ ಜೈನ್ ಮಿಲನ್ ಮತ್ತು ಉಡುಪಿಯ ಸಮಸ್ತ ಜೈನ ಸಮಾಜ ಬಾಂಧವರ ಪ್ರಾಯೋಜಕತ್ವದಲ್ಲಿ ಸಾಮೂಹಿಕ “ಕಲ್ಯಾಣ ಮಂದಿರ ಆರಾಧನೆ “ ನಡೆಯಲಿದೆ. ಈ ಆರಾಧನೆಯಲ್ಲಿ ಅತ್ಯಂತ ಹೆಚ್ಚಿನ ಸಂಖ್ಯೆಯಲ್ಲಿ ಶ್ರಾವಕ ಬಂಧುಗಳು ಭಾಗವಹಿಸಿ ಪುಣ್ಯಭಾಗಿಗಳಾಗಬೇಕೆಂದು ಸಮಿತಿಯ ಕಾರ್ಯಾಧ್ಯಕ್ಷ  ಸುದರ್ಶನ್ ಜೈನ್ ವಿನಂತಿಸಿದರು.
ಚಾತುರ್ಮಾಸ ಸಮಿತಿಯ ರತ್ನಾಕರ್ ಜೈನ್ ಮಂಗಳೂರು,  ಸುದರ್ಶನ್ ಜೈನ್,  ಸಂಪತ್ ಕುಮಾರ್ ಶೆಟ್ಟಿ,  ಧರಣೇಂದ್ರ ಇಂದ್ರ,  ಸುಭಾಶ್ಚಂದ್ರ ಜೈನ್,  ಭುವನೇಂದ್ರ ಇಂದ್ರ, ಹರ್ಷರಾಜ್ ಬಲ್ಲಾಳ್,  ದೀಪಕ್ ಇಂದ್ರ,  ಕೆ. ಪ್ರವೀಣ್ ಕುಮಾರ್,  ಆದಿರಾಜ್ ಜೈನ್,  ಭರತ್ ರಾಜ್ ಮುಂತಾದವರು ಉಪಸ್ಥಿತರಿದ್ದರು.

 

 

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಪಾಣೆಮಂಗಳೂರು ಚಾತುರ್ಮಾಸ- ರತ್ನತ್ರಯ ಆರಾಧನೆ, ಮಂಗಲ ಪ್ರವಚನ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*