ಜಿಲ್ಲಾ ಸುದ್ದಿ

ಕಾನೂನು ಮೀರಿದ ನೆರವು ಸ್ಥಗಿತ, ನನ್ನ ಕೈವಾಡವಿಲ್ಲ: ರಮಾನಾಥ ರೈ

ಕೊಲ್ಲೂರು ದೇವಳದಿಂದ ನೀಡಲಾಗುತ್ತಿರುವ ಅನುದಾನವನ್ನು ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರ ಮತ್ತು ಪುಣಚ ಶ್ರೀದೇವಿ ವಿದ್ಯಾಸಂಸ್ಥೆಗೆ ರದ್ದುಗೊಳಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ಪ್ರತಿಕ್ರಿಯಿಸಿರುವ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ, ಕಾನೂನು ಮೀರಿ ನೆರವು ನೀಡಿದ್ದನ್ನು ಸ್ಥಗಿತಗೊಳಿಸಲಾಗಿದೆ ಎಂದಿದ್ದಾರೆ.

ಜಾಹೀರಾತು

ಇದು ನನ್ನ ಕೈವಾಡ ಅಲ್ಲ, ಮುಜರಾಯಿ ಇಲಾಖೆ ಮಾಡಿದ ಕೆಲಸ. ಕಲ್ಲಡ್ಕ ಘಟನೆ ಹಿಂದೆ ದ್ವೇಷದಿಂದ ಮಾಡಿದ್ದಾರೆ ಎಂದು ಅಪಪ್ರಚಾರ ಮಾಡಲಾಗುತ್ತಿದೆ ಆದರೆ ಇದು ಸರಿಯಲ್ಲ. ಈ ಪ್ರಕ್ರಿಯೆಯನ್ನು ಧಾರ್ಮಿಕ ಪರಿಷತ್ ಆರಂಭಿಸಿ ವರ್ಷವಾಯಿತು. ಈಗ ಜಾರಿಯಾಗಿದೆ ಅಷ್ಟೇ. ಈ ವಿಚಾರವಾಗಿ ವಿನಾ ಕಾರಣ ನನ್ನ ಹೆಸರನ್ನು ಎಳೆದುತರುವುದು ಸರಿಯಲ್ಲ ಎಂದು ಸುದ್ದಿಗೋಷ್ಠಿಯಲ್ಲಿ ರೈ ಹೇಳಿದರು.

ಕಲ್ಲಡ್ಕ ಶಾಲೆಗೆ ಸಾಕಷ್ಟು ಸಂಖ್ಯೆಯಲ್ಲಿ ಹಣ ಸಂಗ್ರಹವಾಗುತ್ತಿದೆ. ಆದರೂ ದೇವಸ್ಥಾನದ ಹುಂಡಿಯಲ್ಲಿ ಸಂಗ್ರಹವಾದ ಹಣದಿಂದ ಮಕ್ಕಳಿಗೆ ಊಟ ನೀಡಲಾಗುತ್ತಿದೆ ಎಂದು ಆರೋಪಿಸಲಾಗುತ್ತಿದೆ ಮಕ್ಕಳ ಹೊಟ್ಟೆಗೆ ಕಲ್ಲು ಹಾಕಿದ್ದು ರಮಾನಾಥ ರೈ ಅಲ್ಲ ಎಂದು ರೈ ಹೇಳಿದರು. ಪೋಷಕರು ಮಕ್ಕಳನ್ನು ಸರಕಾರಿ ಶಾಲೆಗೆ ಸೇರಿಸಲಿ ಎಂದು ಸಲಹೆ ನೀಡಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ