ಬಂಟ್ವಾಳ

ವಿಹಿಂಪ, ಬಜರಂಗದಳದಿಂದ ವಾಹನ ಜಾಥ

ವಿಶ್ವ ಹಿಂದೂ ಪರಿಷತ್ , ಬಜರಂಗದಳ ಬಂಟ್ವಾಳ ಇದರ ವತಿಯಿಂದ ಅಖಂಡ ಭಾರತ ಸಂಕಲ್ಪ ದಿನಾಚರಣೆಯ ಅಂಗವಾಗಿ ಬಿಸಿರೋಡು ರಕ್ತೇಶ್ವರೀ ದೇವಸ್ಥಾನದ ವಠಾರದಿಂದ ಪನೋಲಿಬೈಲು ಕಲ್ಲುರ್ಟಿ ದೈವಸ್ಥಾನದವರೆಗೆ ದ್ವಿಚಕ್ರ ವಾಹನ ಜಾಥ ನಡೆಯಿತು.

ಜಾಹೀರಾತು

ಬಿಸಿರೋಡು ರಕ್ತೇಶ್ವರೀ ದೇವಸ್ಥಾನದ ವಠಾರದಲ್ಲಿ ಜಾಥವನ್ನು ಬಿಜೆಪಿ ಮುಖಂಡ ರಾಜೇಶ್ ನಾಯಕ್ ಉಳಿಪ್ಪಾಡಿ ಗುತ್ತು ತೆಂಗಿನಕಾಯಿ ಒಡೆಯುವ ಮೂಲಕ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ದೇಶದ ಅಚಾರ ವಿಚಾರಗಳ ಬದಲಾವಣೆಯ ಕಾಲಗಟ್ಟದಲ್ಲಿ ಯುವಕರ ಚಿಂತನೆ ಕೂಡಾ ಬದಲಾಗುತ್ತಿದೆ, ದೇಶವನ್ನು ಬಲಿಷ್ಠಗೊಳಿಸುವಲ್ಲಿ ಯುವಕರ ಪಾತ್ರ ಹಿರಿದು ಎಂದರು.

ಜಿಲ್ಲಾ ಸಂಚಾಲಕ ಬಾಸ್ಕರ ಧರ್ಮಸ್ಥಳ, ಜಿಲ್ಲಾ ಸಹ ಪ್ರಮುಖ್ ಗುರುರಾಜ್ ಬಂಟ್ವಾಳ್, ಪ್ರಮುಖರಾದ ಪ್ರಕಾಶ್ ಬೆಳ್ಳೂರು, ಸುರೇಶ್ ಬೆಂಜನಪದವು, ಜಿತೇಂದ್ರ ಕೊಟ್ಯಾನ್ ಅಜ್ಜಿಬೆಟ್ಟು, ಸಚಿನ್ ಅಮ್ಮುಂಜೆ, ಧಕ್ಷಣ್ ಸಜೀಪ ಲೋಹಿತ್ ಪನೋಲಿಬೈಲು ಮತ್ತಿತರರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ