ಪ್ರಕೃತಿ ನಿರ್ಲಕ್ಷ್ಯ ದೊಡ್ಡ ದುರಂತ: ರಾಮ್‌ಕಿಶೋರ್ ಮಂಚಿ

ಮಾನವ ತನ್ನ ಅಪೇಕ್ಷೆಗಳನ್ನು ಪೂರೈಸಲು ಪ್ರಕೃತಿಯನ್ನು ನಿರ್ಲಕ್ಷಿಸಿದ್ದು ದುರಂತ ಎಂದು ಪ್ರಗತಿಪರ ಕೃಷಿಕ ರಾಮ್ ಕಿಶೋರ್ ಮಂಚಿ ಹೇಳಿದರು.
ಕಲ್ಲಡ್ಕ ಶ್ರೀರಾಮ ಕಾಲೇಜಿನಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆ ಮತ್ತು ಕೋಟಿ ವೃಕ್ಷ ಆಂದೋಲನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು.
ಕರಾವಳಿಯಲ್ಲಿ ಸರಾಸರಿ ೧೧೦ಸೆ.ಮೀ ಮಳೆ ಬೀಳಬೇಕಾದ ಸ್ಥಾನದಲ್ಲಿ ಇನ್ನೂ ೪೦ಸೆ.ಮೀ ಕೂಡ ಬಂದಿಲ್ಲ. ನೀರು ಸಂಗ್ರಹಣೆಯ ಅಣೆಕಟ್ಟು ತುಂಬಿಲ್ಲ. ಕೆರೆಗಳನ್ನು ಮುಚ್ಚಿ ಬರಿದಾಗಿಸಿದ್ದೇವೆ. ಪ್ರಕೃತಿಯೇ ಮುಖ್ಯ. ಮನುಷ್ಯ ಪ್ರಕೃತಿಯ ಅಂಗ ಮಾತ್ರ. ಆದರೆ ಮನುಷ್ಯರು ಅವರ ಸುಖವೇ ಮುಖ್ಯವೆಂದು ಭಾವಿಸುತ್ತಿದ್ದೇವೆ. ಪ್ರಕೃತಿಯನ್ನು ಹಾಳುಗೆಡವದೆ ಮಾನವನ ಬಯಕೆಗಳನ್ನು ತೀರಿಸಬೇಕು ಎಂದು ಅವರು ಅಭಿಪ್ರಾಯಪಟ್ಟರು.
ನಾವು ನಮಗೋಸ್ಕರ ಬದುಕುವುದಕ್ಕಿಂತ ಪರರಿಗೋಸ್ಕರ ಬಾಳುವುದು ಉತ್ತಮ. ಇದೇ ವೃಕ್ಷವು ಸಾರುವ ಸಂದೇಶ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀರಾಮ ವಿದ್ಯಾಕೇಂದ್ರದ ಸಂಚಾಲಕ ವಸಂತ ಮಾಧವ ವಹಿಸಿ ಜಾಗೃತಿಯೇ ಸ್ವಾತಂತ್ರ್ಯದ ನಿಜವಾದ ರಕ್ಷಕ. ಸ್ವಾತಂತ್ರ್ಯವೆಂದರೆ ಧ್ವಜ ಹಾರಿಸುವುದು, ಗೀತೆ ಹಾಡುವುದು, ಹೋರಾಟಗಾರರ ಸ್ಮರಣೆ ಮತ್ತು ಪತ್ರಿಕೆಗಳಲ್ಲಿ ವರದಿ, ಶುಭಾಶಯ ಕೋರುವುದು ಅಷ್ಟೇ ಅಲ್ಲ. ಅದಕ್ಕೆ ತೆತ್ತ ಬೆಲೆ, ಕೊಟ್ಟ ಪ್ರಾಣ, ಕಳಕೊಂಡ ಭೂಮಿ ಎಷ್ಟು ಎಂಬ ಪರಿಜ್ಞಾನವನ್ನು ನೆನಪಿಸುವ ಸಂದರ್ಭವಾಗಿದೆ. ಸ್ವಾತಂತ್ರ್ಯ ಎಂಬ ಸಂಪತ್ತಿನ ರಕ್ಷಣೆಯೊಂದಿಗೆ ವನ, ಪ್ರಕೃತಿಯ ಸಂರಕ್ಷಣೆಯೂ ಅಷ್ಟೇ ಪ್ರಮುಖ ಎಂದರು.
ಶ್ರೀರಾಮ ಪದವಿ ಕಾಲೇಜಿನ ಪ್ರಾಚಾರ್ಯ ಕೃಷ್ಣ ಪ್ರಸಾದ್ ಕಾಯರ್‌ಕಟ್ಟೆ, ಶ್ರೀರಾಮ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ವಸಂತ ಬಲ್ಲಾಳ್ ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ವಿದ್ಯಾರ್ಥಿ ಸುಖೇಶ್ ಸ್ವಾಗತಿಸಿ, ಶರಣ್ಯ ನಿರೂಪಿಸಿ ವಾತ್ಸಲ್ಯ ವಂದಿಸಿದರು,

ಜಾಹೀರಾತು

 

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಪ್ರಕೃತಿ ನಿರ್ಲಕ್ಷ್ಯ ದೊಡ್ಡ ದುರಂತ: ರಾಮ್‌ಕಿಶೋರ್ ಮಂಚಿ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*