ವಿಟ್ಲ

ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ

ಆರ್ಥಿಕ ಅಡಚಣೆಗೆ ಮನನೊಂದು ಮನೆಯಿಂದ ನಾಪತ್ತೆಯಾಗಿದ್ದ ಯುವಕನೊಬ್ಬನ ಮೃತದೇಹ ವಿಟ್ಲ ಮುಡ್ನೂರು ಗ್ರಾಮದ ಕುಂಡಡ್ಕ ಸಮೀಪದ ಕುಕ್ಕುದಡ್ಕ ಎಂಬಲ್ಲಿ ಗುಡ್ಡೆಯಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಜಾಹೀರಾತು

ಕುಕ್ಕುದಡ್ಕ ನಿವಾಸಿ ತಿಮ್ಮಪ್ಪ ಪೂಜಾರಿ ಅವರ ಪುತ್ರ ಗಣೇಶ(27) ಮೃತ ವ್ಯಕ್ತಿಯಾಗಿದ್ದಾರೆ. ಆಗಸ್ಟ್ 14  ರಂದು  ಸಹೋದರನ ಜತೆ ದಾಸಕೋಡಿಯಲ್ಲಿರುವ ತಮ್ಮ ಸಂಬಂಧಿಕರ ಮನೆಗೆಂದು ತೆರಳಿದ್ದರು. ಅಲ್ಲಿಂದ ಹಿಂತಿರುವ ವೇಳೆ ಗಣೇಶ ಅರ್ಧದಾರಿಯಲ್ಲಿ ಇಳಿದಿದ್ದ. ಅದಾದ ಬಳಿಕ ಈತ ನಾಪತ್ತೆಯಾಗಿದ್ದು, ಮನೆಯವರು ಎಲ್ಲೆಡೆ ಹುಡುಕಾಟ ಕೂಡ ನಡೆಸಿದ್ದರು. ಕುಕ್ಕುತ್ತಡ್ಕ ಸಮೀಪದ ಗುಡ್ಡೆಯಲ್ಲಿ ಮರಕ್ಕೆ ನೇಣು ಹಾಕಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಶವ ಕೊಳೆತ ಸ್ಥಿತಿಯಲ್ಲಿದ್ದು, ಮೂರು ದಿನ ಹಿಂದೆ ಘಟನೆ ನಡೆದಿದೆನ್ನಲಾಗಿದೆ. ಸ್ಥಳದಲ್ಲಿ ಮೂರು ಮೊಬೈಲ್ ಪತ್ತೆಯಾಗಿದ್ದು, ಅದನ್ನು ವಶಕ್ಕೆ ಪಡೆದ ವಿಟ್ಲ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

 

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ