ಯಕ್ಷಗಾನ

ಗಣೇಶ್ ಕೊಲೆಕಾಡಿ ಅವರಿಗೆ ಭ್ರಾಮರೀ ಯಕ್ಷಮಣಿ ಪ್ರಶಸ್ತಿ ಪ್ರದಾನ

ಭ್ರಾಮರಿ ಯಕ್ಷಮಿತ್ರರು ಮಂಗಳೂರು ಆಶ್ರಯದಲ್ಲಿ ಪುರಭವನದಲ್ಲಿ ಶನಿವಾರ ರಾತ್ರಿ ಆಯೋಜಿಸಲಾದ ದ್ವಿತೀಯ ವರ್ಷದ ಯಕ್ಷವೈಭವ ಹಾಗೂ ಭ್ರಾಮರಿ ಯಕ್ಷಮಣಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಯಕ್ಷಗಾನ ಪ್ರಸಂಗಕರ್ತರಾದ ಗಣೇಶ್ ಕೊಲೆಕಾಡಿ ಅವರಿಗೆ ‘ಭ್ರಾಮರಿ ಯಕ್ಷಮಣಿ’ ಪ್ರಶಸ್ತಿ ಪ್ರದಾನ, ಯಕ್ಷಗಾನದಲ್ಲಿ ಸೇವೆ ಸಲ್ಲಿಸಿದ ಶಿವಣ್ಣ ಸರಪಾಡಿ ಹಾಗೂ ರಾಮಚಂದ್ರ ಶೆಟ್ಟಿ ಅವರನ್ನು ಗೌರವಿಸಲಾಯಿತು. ಕರಾವಳಿ ಶಿಕ್ಷಣ ಸಮೂಹ ಸಂಸ್ಥೆಗಳ ಸ್ಥಾಪಕಾಧ್ಯಕ್ಷ ಎಸ್.ಗಣೇಶ್ ರಾವ್ ಉದ್ಘಾಟಿಸಿದರು.

ಜಾಹೀರಾತು

ಸಾಮಾಜಿಕ ಜಾಲತಾಣಗಳಲ್ಲಿ ದ್ವೇಷ ಹುಟ್ಟಿಸುವ ಕೆಲಸ ನಡೆಯುತ್ತಿರುತ್ತದೆ ಎಂಬ ಅಪವಾದ ಸಹಜವಾಗಿ ಪ್ರಸ್ತುತ ಕೇಳಿ ಬರುತ್ತಿದೆ. ಆದರೆ ಇದಕ್ಕೆ ವ್ಯತಿರಿಕ್ತವಾಗಿ ಸಾಮಾಜಿಕ ಜಾಲತಾಣಗಳ ಮೂಲಕವಾಗಿ ಮನಸ್ಸು ಕಟ್ಟುವ, ಸಾಂಸ್ಕೃತಿಕ ಚಟುವಟಿಕೆಗಳ ಮೂಲಕ ಸರ್ವರನ್ನು ಜತೆಯಾಗಿಸುವ ವಿಭಿನ್ನ ಹಾಗೂ ಆದರ್ಶ ಪ್ರಯೋಗವನ್ನು ಭ್ರಾಮರಿ ಯಕ್ಷಮಿತ್ರರು ಬಳಗ ನಡೆಸಿರುವುದು ಅಭಿನಂದನೀಯ ಎಂದರು.

ಮಂಗಳೂರು ಮೇಯರ್ ಕವಿತಾ ಸನಿಲ್ ಮಾತನಾಡಿ, ಯಕ್ಷಗಾನ ಸೇರಿದಂತೆ ಎಲ್ಲಾ ಕಲಾ ಪ್ರಕಾರಗಳಿಗೆ ಮೂಲ ನೆಲೆಯಾಗಿರುವ ಮಂಗಳೂರು ಪುರಭವನ ದುಬಾರಿ ಎಂಬ ಕಲಾವಿದರ ಬೇಸರವನ್ನು ಈ ಬಾರಿ ಶಮನ ಮಾಡಿ, ಅತ್ಯಂತ ಕಡಿಮೆ ಬೆಲೆಗೆ ಪುರಭವನ ದೊರಕುವಂತೆ ಮಂಗಳೂರು ಪಾಲಿಕೆ ಮಾಡಿದೆ ಎಂದರು.

ಶಾರದಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಪ್ರೊ|ಎಂ.ಬಿ.ಪುರಾಣಿಕ್ ಅಧ್ಯಕ್ಷತೆ ವಹಿಸಿದ್ದರು. ಕನ್ನಡ ಸಾಹಿತ್ಯ ಪರಿಷತ್‌ನ ಮಾಜಿ ರಾಜ್ಯಾಧ್ಯಕ್ಷ ಹರಿಕೃಷ್ಣ ಪುನರೂರು, ಎಸ್‌ಸಿಡಿಸಿಸಿ ಬ್ಯಾಂಕಿನ ನಿರ್ದೇಶಕ ಟಿ.ಜಿ.ರಾಜಾರಾಮ್ ಭಟ್, ಚಲನಚಿತ್ರ ನಟ, ನಿರ್ಮಾಪಕ ಡಾ| ರಾಜಶೇಖರ ಕೋಟ್ಯಾನ್, ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ನ ಅಧ್ಯಕ್ಷ ಎಸ್.ಪ್ರದೀಪ್ ಕುಮಾರ್ ಕಲ್ಕೂರ, ಕ್ರೈಡೈ ರಾಜ್ಯ ಉಪಾಧ್ಯಕ್ಷ ಪುಷ್ಪರಾಜ್ ಜೈನ್ ಉಪಸ್ಥಿತರಿದ್ದರು. ಭ್ರಾಮರಿ ಯಕ್ಷಮಿತ್ರರು ತಂಡದ ಅಧ್ಯಕ್ಷರಾದ ವಿನಯಕೃಷ್ಣ ಕುರ್ನಾಡ್ ಸ್ವಾಗತಿಸಿದರು. ಸತೀಶ್ ಮಂಜೇಶ್ವರ ಸಮ್ಮಾನ ಪತ್ರ ವಾಚಿಸಿದರು. ಸತೀಶ್ ಇರಾ ವಂದಿಸಿದರು. ದಿನೇಶ್ ಇರಾ ಕಾರ್ಯಕ್ರಮ ನಿರ್ವಹಿಸಿದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts