ಮಾಣಿ ಪೆರಾಜೆ ಗ್ರಾಮ ಸಹಾಯಕರಿಗೆ ಇಬ್ಬರು ನಿಂದಿಸಿ, ಜೀವ ಬೆದರಿಕೆ ಒಡ್ಡಿದ ಪ್ರಕರಣವನ್ನು ಬಂಟ್ವಾಳ ತಾಲೂಕು ಗ್ರಾಮ ಸಹಾಯಕರ ಸಂಘ ಖಂಡಿಸಿದೆ. ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ನಿಯೋಗವೊಂದು ಬಂಟ್ವಾಳ ತಹಶೀಲ್ದಾರ್ ಪುರಂದರ ಹೆಗ್ಡೆ ಅವರನ್ನು ಭೇಟಿ ಮಾಡಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿತು.
ದ.ಕ. ಜಿಲ್ಲಾ ಕಂದಾಯ ಇಲಾಖೆ ನೌಕರರ ಸಂಘದ ಉಪಾಧ್ಯಕ್ಷ ಜನಾರ್ದನ, ತಾಲೂಕು ಆಡಳಿತ ಶಾಖೆಯ ಸೀತಾರಾಮ ಕಮ್ಮಾಜೆ, ಸಿಬ್ಬಂದಿಗಳಾದ ಮಲ್ಲೇಶ್, ಮಹೇಂದ್ರ, ಗ್ರಾಮ ಕರಣಿಕರಾದ ಪ್ರಕಾಶ್, ಶಿವಾನಂದ ನಾಟೇಕರ್, ಪರೀಕ್ಷಿತ್ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿದರು.
ಈ ಕುರಿತು ಗ್ರಾಮ ಸಹಾಯಕ ವಿಟ್ಲ ಪೊಲೀಸರಿಗೆ ದೂರು ನೀಡಿದ್ದಾರೆ.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…