ಬಂಟ್ವಾಳ

ಅಡಿಗರ ಬಗ್ಗೆ ಪ್ರಬಂಧ ಸ್ಪರ್ಧೆ

ಹಿರಿಯ ಸಾಹಿತಿ ಡಾ. ಏರ್ಯ ಲಕ್ಷ್ಮೀನಾರಾಯಣ ಆಳ್ವರ ಅಧ್ಯಕ್ಷತೆಯಲ್ಲಿ ರಚಿತವಾದ ಗೋಪಾಲಕೃಷ್ಣ ಅಡಿಗ ಜನ್ಮಶತಮಾನೋತ್ಸವ ಸಮಿತಿಯು ಅಕ್ಟೋಬರ್ ೧ರಂದು ದಿನಪೂರ್ತಿ ಅಡಿಗರ ಸಾಹಿತ್ಯದ ಕುರಿತು ವಿಚಾರಸಂಕಿರಣವೊಂದನ್ನು ಬಂಟ್ವಾಳ ತಾಲೂಕು ಕೇಂದ್ರ ಬಿ.ಸಿ.ರೋಡಿನಲ್ಲಿ ಆಯೋಜಿಸಿರುತ್ತದೆ.
ಕನ್ನಡದ ಪ್ರಮುಖ ವಿಮರ್ಶಕರು ಭಾಗವಹಿಸುವ ಈ ವಿಚಾರಸಂಕಿರಣದ ಅಂಗವಾಗಿ ಅಡಿಗ: ಒಂದು ಜನಾಂಗದ ಕಣ್ಣು ತೆರೆಸಿದ ಕವಿ ಎಂಬ ವಿಷಯದ ಬಗ್ಗೆ ಕಾಲೇಜು ವಿದ್ಯಾರ್ಥಿಗಳಿಗಾಗಿ ಪ್ರಬಂಧ ಸ್ಪರ್ಧೆ ನಡೆಯಲಿದೆ. ವಿಜೇತ ಪ್ರಬಂಧಗಳಿಗೆ ರೂ. ೨೦೦೦, ೧೦೦೦ ಮತ್ತು ರೂ.೫೦೦ ನಗದು ಬಹುಮಾನ ನೀಡಲಾಗುವುದು. ಪದವಿಪೂರ್ವ, ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳು ಗರಿಷ್ಠ ಆರು ಪುಟಗಳ ಪ್ರಬಂಧವನ್ನು ತಮ್ಮ ದೂರವಾಣಿ ಸಂಖ್ಯೆ, ವಿಳಾಸ ಹಾಗೂ ಸಂಸ್ಥೆಯ ಮುಖ್ಯಸ್ಥರ ದೃಢೀಕರಣದೊಂದಿಗೆ ಸೆಪ್ಟೆಂಬರ್ ೧೫ರ ಒಳಗಾಗಿ ಈ ಮುಂದಿನ ವಿಳಾಸಕ್ಕೆ ಕಳುಹಿಸಬಹುದು. ಡಾ. ಅಜಕ್ಕಳ ಗಿರೀಶ ಭಟ್, ಮೊಡಂಕಾಪು, ಜೋಡುಮಾರ್ಗ, ದ.ಕ.-೫೭೪೨೧೯.

ಜಾಹೀರಾತು
ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.