ಬಂಟ್ವಾಳ

ಅಡಿಗರ ಬಗ್ಗೆ ಪ್ರಬಂಧ ಸ್ಪರ್ಧೆ

ಹಿರಿಯ ಸಾಹಿತಿ ಡಾ. ಏರ್ಯ ಲಕ್ಷ್ಮೀನಾರಾಯಣ ಆಳ್ವರ ಅಧ್ಯಕ್ಷತೆಯಲ್ಲಿ ರಚಿತವಾದ ಗೋಪಾಲಕೃಷ್ಣ ಅಡಿಗ ಜನ್ಮಶತಮಾನೋತ್ಸವ ಸಮಿತಿಯು ಅಕ್ಟೋಬರ್ ೧ರಂದು ದಿನಪೂರ್ತಿ ಅಡಿಗರ ಸಾಹಿತ್ಯದ ಕುರಿತು ವಿಚಾರಸಂಕಿರಣವೊಂದನ್ನು ಬಂಟ್ವಾಳ ತಾಲೂಕು ಕೇಂದ್ರ ಬಿ.ಸಿ.ರೋಡಿನಲ್ಲಿ ಆಯೋಜಿಸಿರುತ್ತದೆ.
ಕನ್ನಡದ ಪ್ರಮುಖ ವಿಮರ್ಶಕರು ಭಾಗವಹಿಸುವ ಈ ವಿಚಾರಸಂಕಿರಣದ ಅಂಗವಾಗಿ ಅಡಿಗ: ಒಂದು ಜನಾಂಗದ ಕಣ್ಣು ತೆರೆಸಿದ ಕವಿ ಎಂಬ ವಿಷಯದ ಬಗ್ಗೆ ಕಾಲೇಜು ವಿದ್ಯಾರ್ಥಿಗಳಿಗಾಗಿ ಪ್ರಬಂಧ ಸ್ಪರ್ಧೆ ನಡೆಯಲಿದೆ. ವಿಜೇತ ಪ್ರಬಂಧಗಳಿಗೆ ರೂ. ೨೦೦೦, ೧೦೦೦ ಮತ್ತು ರೂ.೫೦೦ ನಗದು ಬಹುಮಾನ ನೀಡಲಾಗುವುದು. ಪದವಿಪೂರ್ವ, ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳು ಗರಿಷ್ಠ ಆರು ಪುಟಗಳ ಪ್ರಬಂಧವನ್ನು ತಮ್ಮ ದೂರವಾಣಿ ಸಂಖ್ಯೆ, ವಿಳಾಸ ಹಾಗೂ ಸಂಸ್ಥೆಯ ಮುಖ್ಯಸ್ಥರ ದೃಢೀಕರಣದೊಂದಿಗೆ ಸೆಪ್ಟೆಂಬರ್ ೧೫ರ ಒಳಗಾಗಿ ಈ ಮುಂದಿನ ವಿಳಾಸಕ್ಕೆ ಕಳುಹಿಸಬಹುದು. ಡಾ. ಅಜಕ್ಕಳ ಗಿರೀಶ ಭಟ್, ಮೊಡಂಕಾಪು, ಜೋಡುಮಾರ್ಗ, ದ.ಕ.-೫೭೪೨೧೯.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ