ಗಜಮುಖನೆ ಸಿದ್ಧಿವಿನಾಯಕನೆ ನಿನಗೆ ಶರಣು

ಗುರುವಾರ ಗೌರಿಪೂಜೆಯಾದರೆ, ಶುಕ್ರವಾರ ಗಣಪನ ಹಬ್ಬ. ಬೆಳಗ್ಗಿನಿಂದಲೇ ಬಿ.ಸಿ.ರೋಡ್, ಬಂಟ್ವಾಳ ಸಹಿತ ತಾಲೂಕಿನ ಪ್ರಮುಖ ಪ್ರದೇಶಗಳಲ್ಲಿ ಸಾರ್ವಜನಿಕ ಗಣೇಶೋತ್ಸವಗಳು ಆರಂಭಗೊಂಡರೆ, ಮಾರುಕಟ್ಟೆಯಲ್ಲಿ ಕಬ್ಬು ಸಹಿತ ನಾನಾ ಪೂಜೆಯ ವಸ್ತುಗಳಿಗೆ ಬೇಡಿಕೆ ಇದ್ದವು.

ಹಿಂದೂ ಧಾರ್ಮಿಕ ಸೇವಾ ಸಮಿತಿ ಬಿಸಿರೋಡು ಆಶ್ರಯದಲ್ಲಿ ಬಿ.ಸಿ.ರೋಡು ರಕ್ತೇಶ್ವರೀವಠಾರದಲ್ಲಿ ಪೂಜಿಲ್ಪಟ್ಟ 38ನೇ ವರ್ಷದ ಗಣಪ   ಚಿತ್ರ: ಕಿಶೋರ್ ಪೆರಾಜೆ

 

ಜಾಹೀರಾತು

ಫರಂಗಿಪೇಟೆಯಲ್ಲಿ ಪೂಜಿಸಲಾಗುತ್ತಿರುವ ಗಣಪತಿ – ಚಿತ್ರ: ಕಾರ್ತಿಕ್ ಸ್ಟುಡಿಯೋ, ಬಿ.ಸಿ.ರೋಡ್

ಬಿ.ಸಿ.ರೋಡಿನಲ್ಲಿ ಹಿಂದು ಧಾರ್ಮಿಕ ಸೇವಾ ಸಮಿತಿ ಆಶ್ರಯದಲ್ಲಿ ರಕ್ತೇಶ್ವರಿ ದೇವಿ ದೇವಸ್ಥಾನ ವಠಾರದಲ್ಲಿ 38ನೇ ವರ್ಷದ ಗಣೇಶೋತ್ಸವಕ್ಕೆ ಊರ, ಪರವೂರ ಭಕ್ತರು ಆಗಮಿಸಿ ಸಂಭ್ರಮಿಸಿದರೆ, ಬಂಟ್ವಾಳ ಜಕ್ರಿಬೆಟ್ಟಿನಲ್ಲಿ ಸಚಿವ ಬಿ.ರಮಾನಾಥ ರೈ ಮಾರ್ಗದರ್ಶನದಲ್ಲಿ ಸಾರ್ವಜನಿಕ ಗಣೇಶೋತ್ಸವವೂ ಆರಂಭಗೊಂಡವು.

ಬಂಟ್ವಾಳ ಜಕ್ರಿಬೆಟ್ಟುವಿನಲ್ಲಿ ಪೂಜಿಸಲಾದ ಗಣಪತಿ: ಚಿತ್ರ: ಕಿಶೋರ್ ಪೆರಾಜೆ

ಸಜೀಪ ಮೂನ್ನೂರು ಯುವಕ ಸಂಘದ ವತಿಯಿಂದ 44ನೇ ವರ್ಷದ ಗಣೇಶೋತ್ಸವ, ನರಿಕೊಂಬು ನವಜೀವನ ವ್ಯಾಯಾಮ ಶಾಲೆ ವತಿಯಿಂದ ಸತ್ಯದೇವತಾ ಮಂದಿರದಲ್ಲಿ 35ನೇ ವರ್ಷದ ಗಣೇಶೋತ್ಸವ, ಶಂಭೂರು ರಾಮಾಂಜನೇಯ ವ್ಯಾಯಾಮ ಶಾಲೆಯಲ್ಲಿ 4ನೇ ವರ್ಷದ ಗಣೇಶೋತ್ಸವ, ಯುವ ಸಂಗಮ ಸೇವಾ ಟ್ರಸ್ಟ್ ವತಿಯಿಂದ ಯುವ ಸಂಗಮ ಸಮುದಾಯ ಭವನದಲ್ಲಿ 24ನೇ ವರ್ಷದ ಗಣೇಶೋತ್ಸವ, ಬಿ.ಸಿ.ರೋಡಿನಲ್ಲಿ ಹಿಂದೂ ಧಾರ್ಮಿಕ ಸೇವಾ ಸಮಿತಿ ಬಿಸಿರೋಡು ಇದರ ಆಶ್ರಯದಲ್ಲಿ ಬಿಸಿರೋಡು ರಕ್ತೇಶ್ವರೀ ದೇವಿ ದೇಸ್ಥಾನದ ವಠಾರದಲ್ಲಿ 38ನೇ ವರ್ಷದ ಗಣೇಶೋತ್ಸವ ಹಾಗೂ ಸಾರ್ವಜನಿಕ ಗಣೇಶೋತ್ಸವ  ಆಚರಣಾ ಸಮಿತಿ ವತಿಯಿಂದ ಜಕ್ರಿಬೆಟ್ಟು ದಾಸ ರೈ ಮೈದಾನದಲ್ಲಿ 14ನೇ ವರ್ಷದ ಗಣೇಶೋತ್ಸವ, ಫರಂಗಿಪೇಟೆ ಹಿಂದು ಧಾರ್ಮಿಕ ಸೇವಾ ಸಮಿತಿಯ ಗಣೇಶೋತ್ಸವಕ್ಕೆ ಭಕ್ತರು ಆಗಮಿಸಿದರು.

ಪಾಣೆಮಂಗಳೂರು ಸಮೀಪ ನರಿಕೊಂಬಿನ ನವಜೀವನ ವ್ಯಾಯಮ ಶಾಲೆ ವತಿಯಿಂದ ಸತ್ಯ ದೇವತಾ ರಂಗಮಂದಿರದಲ್ಲಿ ಪೂಜಿಸಲ್ಪಟ್ಟ 35ನೇ ವರ್ಷದ ಗಣಪತಿ

ಸಜೀಪ ಮೂನ್ನೂರು ಯುವಕ ಸಂಘದ ವತಿಯಿಂದ ಪೂಜಿಲ್ಪಟ್ಟ 44 ನೇ ವರ್ಷದ ವಿಘ್ನನಿವಾರಕ

ಶಂಭೂರು ಶ್ರೀ ರಾಮಾಂಜನೇಯ ವ್ಯಾಯಮ ಶಾಲೆಯಲ್ಲಿ ಪೂಜಿಸಲ್ಪಟ್ಟ 14ನೇ ವರ್ಷದ ವಿನಾಯಕ

ಶೇಡಿಗುರಿ ಯುವ ಸಂಗಮ ಸೇವಾ ಟ್ರಸ್ಟ್  ವತಿಯಿಂದ ಯುವ ಸಂಗಮ ಸಮುದಾಯ ಭವನದಲ್ಲಿ ಪೂಜಿಸಲ್ಪಟ್ಟ 24ನೇ ವರ್ಷದ ಗಣಪ.

ಗೋಳ್ತಮಜಲು ಗಣೇಶನಗರದಲ್ಲಿ ಪೂಜಿಸಲಾದ 26ನೇ ವರ್ಷದ ಗಣಪತಿ ಚಿತ್ರ: ಲಕ್ಷಣ್, ಪೂಜಾ ಸ್ಟುಡಿಯೋ, ಮೇಲ್ಕಾರ್

 

ಜಾಹೀರಾತು

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಗಜಮುಖನೆ ಸಿದ್ಧಿವಿನಾಯಕನೆ ನಿನಗೆ ಶರಣು"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*