ಕಲ್ಲಡ್ಕ

ರಾಷ್ಟ್ರಕಾರ್ಯದಲ್ಲಿ ತೊಡಗಿಸಲು ಗಣೇಶೋತ್ಸವ ಪ್ರೇರಣೆ

ಗಣೇಶೋತ್ಸವ ಮೂಲಕ ಭೇದರಹಿತವಾಗಿ ಎಲ್ಲರೂ ಒಗ್ಗೂಡಿ ರಾಷ್ಟ್ರಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕು ಎಂದು ಉಪನ್ಯಾಸಕ ಶ್ರೀಕೃಷ್ಣ ಉಪಾಧ್ಯಾಯ ಹೇಳಿದರು.
ಪೆರಾಜೆ ಶ್ರೀ ಗುಡ್ಡ ಚಾಮುಂಡೇಶ್ವರಿ ಸೇವಾ ಟ್ರಸ್ಟ್ ಪೆರಾಜೆ ವತಿಯಿಂದ ಪೆರಾಜೆ ದ.ಕ.ಜಿ.ಪಂ.ಹಿ.ಪ್ರಾ. ಶಾಲಾ ವಠಾರದಲ್ಲಿ ಏರ್ಪಡಿಸಲಾದ ೮ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದರು.
ಜಿಲ್ಲಾ ಬಿಜೆಪಿ ವಕ್ತಾರ, ಉದ್ಯಮಿ ಜಿತೇಂದ್ರ ಕೊಟ್ಟಾರಿ ಅಧ್ಯಕ್ಷತೆ ವಹಿಸಿದ್ದರು. ಸಮಾಜದ ಎಲ್ಲಾ ಬಂಧುಗಳನ್ನು ಒಟ್ಟು ಸೇರಿಸಿ ಗಣೇಶೋತ್ಸವ ಆಚರಿಸುವ ಮೂಲಕ ನಮ್ಮಲ್ಲಿರುವ ಭೇದ ಭಾವಗಳನ್ನು ಹೋಗಲಾಡಿಸಬೇಕು. ಸಮಾಜದ ಅನಿಷ್ಟಗಳನ್ನು ದೂರ ಮಾಡಬೇಕು ಎಂದರು.
ಮುಖ್ಯ ಅತಿಥಿಯಾಗಿ ಉದ್ಯಮಿ ರವಿ ಕಕ್ಯಪದವು ಮಾತನಾಡಿ ದೇವರ ಅನುಗ್ರಹದಿಂದ ಶ್ರಮ ಪಟ್ಟು ದುಡಿದರೆ ಯಾವುದೇ ಸಾಧನೆ ಮಾಡಲು ಸಾಧ್ಯ ಎಂದರು.
ಸಮಿತಿ ಗೌರವಾಧ್ಯಕ್ಷ ಡಾ. ಶ್ರೀನಾಥ್ ಆಳ್ವ , ಟ್ರಸ್ಟ್ ಅಧ್ಯಕ್ಷ ಶ್ರೀನಿವಾಸ ಪೂಜಾರಿ ಸ್ಥಾಪಕಾಧ್ಯಕ್ಷ ಹರೀಶ ರೈ ಪಾನೂರು, ಕೋಶಾಧಿಕಾರಿ ರಾಘವ ಗೌಡ, ಯುವ ವೇದಿಕೆಯ ಅಜಿತ್ ಗೌಡ ಉಪಸ್ಥಿತರಿದ್ದರು. ಗಣೇಶೋತ್ಸವ ಸಮಿತಿ ಅಧ್ಯಕ್ಷ ರಾಜಾರಾಮ ಕಾಡೂರು ಸ್ವಾಗತಿಸಿ ಪ್ರಸ್ತಾವನೆಗೈದರು. ಯತಿರಾಜ ನಿರೂಪಿಸಿ, ದಿವಾಕರ ಶಾಂತಿಲ ವಂದಿಸಿದರು. ಕಡೇಶ್ವಾಲ್ಯ ವೇ.ಮೂ. ಹರಿಭಟ್ ನೇತೃತ್ವದಲ್ಲಿ ವಿನಾಯಕನ ಮೂರ್ತಿ ಪ್ರತಿಷ್ಠೆ ಸಂಜೀವ ಪೂಜಾರಿ ಮಾಣಿ ಧ್ವಜಾರೋಹಣ ನೆರವೇರಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ