6ರಂದು ಸಜೀಪಮೂಡದಲ್ಲಿ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಆಚರಣೆ

ಸಜೀಪಮೂಡದ ಸುಭಾಷ್ ನಗರದ ಬ್ರಹ್ಮಶ್ರೀ ನಾರಾಯಣ ಗುರು ಜ್ಞಾನಮಂದಿರದಲ್ಲಿ ಬುಧವಾರ ಸೆ.೬ರಂದು ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಆಚರಿಸಲಾಗುವುದು.


ಬಂಟ್ವಾಳ ತಾಲೂಕು ಮಟ್ಟದ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಆಶ್ರಯದಲ್ಲಿ ನಡೆಯುವ ಈ ಕಾರ್ಯಕ್ರಮವನ್ನು ಅರಣ್ಯ ಸಚಿವ ಬಿ.ರಮಾನಾಥ ರೈ ಬೆಳಗ್ಗೆ ೧೦.೩೦ಕ್ಕೆ ಉದ್ಘಾಟಿಸುವರು.
ಆಹಾರ ಸಚಿವ ಯು.ಟಿ.ಖಾದರ್ ಅಧ್ಯಕ್ಷತೆ ವಹಿಸುವರು. ಸಂಸದ ನಳಿನ್ ಕುಮಾರ್ ಕಟೀಲ್,. ಶಾಸಕಿ ಶಕುಂತಳಾ ಶೆಟ್ಟಿ, ಪುರಸಭಾಧ್ಯಕ್ಷ ರಾಮಕೃಷ್ಣ ಆಳ್ವ, ತಾಪಂ ಅಧ್ಯಕ್ಷ ಚಂದ್ರಹಾಸ ಕರ್ಕೇರ, ಜಿಪಂ ಸದಸ್ಯ ಚಂದ್ರಪ್ರಕಾಶ ಶೆಟ್ಟಿ, ಬಂಟ್ವಾಳ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಸದಾಶಿವ ಬಂಗೇರ, ತಾಪಂ ಉಪಾಧ್ಯಕ್ಷ ಅಬ್ಬಾಸ್ ಆಲಿ, ಸ್ಥಾಯಿ ಸಮಿತಿ ಅಧ್ಯಕ್ಷೆ ಧನಲಕ್ಷ್ಮೀ ಬಂಗೇರ, ಬಂಟ್ವಾಳ ಪುರಸಭೆ ಉಪಾಧ್ಯಕ್ಷ ಮಹಮ್ಮದ್ ನಂದರಬೆಟ್ಟು, ಸಜೀಪಮೂಡ ಗ್ರಾಪಂ ಅಧ್ಯಕ್ಷ ಗಣಪತಿ ಭಟ್ ಮುಖ್ಯ ಅತಿಥಿಗಳಾಗಿರುವರು.
ಈ ಸಂದರ್ಭ ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘ ಅಧ್ಯಕ್ಷ ಸೇಸಪ್ಪ ಕೋಟ್ಯಾನ್, ಪ್ರಧಾನ ಕಾರ್ಯದರ್ಶಿ ಬೇಬಿ ಕುಂದರ್, ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಮಿತಿ ಅಧ್ಯಕ್ಷ ಸಂಜೀವ ಪೂಜಾರಿ, ತಾಲೂಕು ಯುವವಾಹಿನಿ ಅಧ್ಯಕ್ಷ ಲೋಕೇಶ ಸುವರ್ಣ ಗೌರವ ಉಪಸ್ಥಿತಿ ಇರಲಿದೆ.
ಕಾಸರಗೋಡು ಬ್ರಹ್ಮಶ್ರೀ ನಾರಾಯಣಗುರು ಯುವ ವೇದಿಕೆ ಅಧ್ಯಕ್ಷ ಕೃಷ್ಣಶಿವಕೃಪ ಕುಂಜತ್ತೂರು ಪ್ರಧಾನ ಭಾಷಣ ಮಾಡಲಿರುವರು ಎಂದು ಬಂಟ್ವಾಳ ತಹಶೀಲ್ದಾರ್ ಪುರಂದರ ಹೆಗ್ಡೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಾರ್ಯಕ್ರಮಕ್ಕೆ ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾಸಂಘ, ಬ್ರಹ್ಮಶ್ರೀ ನಾರಾಯಣಗುರು ಜ್ಞಾನಮಂದಿರ ಸುಭಾಷ್ ನಗರ, ತಾಲೂಕು ಯುವವಾಹಿನಿ ಘಟಕ ಮತ್ತು ಬಂಟ್ವಾಳ ತಾಲೂಕು ಬಿಲ್ಲವ ಮಹಿಳಾ ಸಮಾಜ ಸೇವಾ ಸಂಘ ಸಹಕಾರ ನೀಡಲಿದೆ ಎಂದು ತಹಶೀಲ್ದಾರ್ ತಿಳಿಸಿದ್ದಾರೆ.

ಜಾಹೀರಾತು

 

ಜಾಹೀರಾತು

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "6ರಂದು ಸಜೀಪಮೂಡದಲ್ಲಿ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಆಚರಣೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*