ಬಂಟ್ವಾಳ

ಬಂಟ್ವಾಳ ಪುರಸಭೆ ಎದುರು ಬಿಜೆಪಿ ಪ್ರತಿಭಟನೆ

ಪಿಎಫ್‌ಐ, ಎಸ್.ಡಿ.ಪಿ.ಐ , ಕೆಎಫ್‌ಡಿ ಸಂಘಟನೆಗಳನ್ನು ನಿಷೇಧಿಸಬೇಕು, ಹಿಂದು ಯುವಕರ ಹತ್ಯೆ ಮತ್ತು ಹಲ್ಲೆ ಪ್ರಕರಣಗಳನ್ನು ಸಿಬಿಐಗೆ ಹಸ್ತಾಂತರಿಸಬೇಕು, ಕೋಮು ಹಿಂಸೆಗೆ ಪ್ರಚೋದನೆ ನೀಡುತ್ತಿರುವ ಆರೋಪದಲ್ಲಿರುವ ಸಚಿವ ಬಿ.ರಮಾನಾಥ ರೈ ಅವರನ್ನು ಸಂಪುಟದಿಂದ ವಜಾಗೊಳಿಸಬೇಕು ಎಂದು ಒತ್ತಾಯಿಸಿ, ಬಿಜೆಪಿ ವತಿಯಿಂದ ಪ್ರತಿಭಟನೆ ಬಂಟ್ವಾಳ ಪುರಸಭೆಯ ಮುಂಭಾಗ ಸೋಮವಾರ ನಡೆಯಿತು.

ಜಾಹೀರಾತು

ಬಿಜೆಪಿ ಜಿಲ್ಲಾ ವಕ್ತಾರ ವಿಕಾಸ್ ಪುತ್ತೂರು ಮಾತನಾಡಿ ಸೆ.7ರಂದು ಪ್ರತಿಭಟನಾರ್ಥವಾಗಿ ನಡೆಯಲಿರುವ ಬೈಕ್ ರ್‍ಯಾಲಿಯನ್ನು ಹತ್ತಿಕ್ಕಲು ಮುಂದಾಗಿರುವ ಸರಕಾರದ ಕ್ರಮಕ್ಕೆ ಆಕ್ರೋಶ ವ್ಯಕ್ತಪಡಿಸಿದರು. ಸಭೆಯ ಬಳಿಕ ರಾಜ್ಯಪಾಲರಿಗೆ ಪುರಸಭಾ ಮುಖ್ಯಾಧಿಕಾರಿ ಎಂ.ಎಚ್.ಸುಧಾಕರ್ ಮೂಲಕ ಮನವಿ ಸಲ್ಲಿಸಲಾಯಿತು. ಅಲ್ಪಸಂಖ್ಯಾತ ಮೋರ್ಚಾ ಮುಖಂಡ ರೋನಾಲ್ಡ್ ಡಿಸೋಜ ಮನವಿ ವಾಚಿಸಿದರು.

ಬಿಜೆಪಿ ಮತ್ತು ಸಂಘಪರಿವಾರ ಮುಖಂಡರಾದ ರಾಜೇಶ್ ನಾಕ್ ಉಳಿಪ್ಪಾಡಿಗುತ್ತು, ಬಿ. ದೇವದಾಸ ಶೆಟ್ಟಿ, ಜಿ.ಆನಂದ, ರಾಮದಾಸ್ ಬಂಟ್ವಾಳ, ಎ. ಗೋವಿಂದ ಪ್ರಭು, ದಿನೇಶ್ ಭಂಡಾರಿ, ಭಾಸ್ಕರ್ ಟೈಲರ್, ಪ್ರಮೋದ್ ಕುಮಾರ್ ಅಜ್ಜಿಬೆಟ್ಟು, ರಾಜರಾಮ ನಾಯಕ್, ಗೋಪಾಲ ಸುವರ್ಣ, ಸುಗುಣ ಕಿಣಿ, ವಿದ್ಯಾವತಿ, ರವಿರಾಜ್ ಬಿ.ಸಿ.ರೋಡ್, ಖಲೀಲ್ ಅಹ್ಮದ್ ಮತ್ತಿತ್ತರು ನೇತೃತ್ವ ವಹಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ