ಸ್ನಾನಕ್ಕೆಂದು ನೇತ್ರಾವತಿ ನದಿಗಿಳಿದ ವಳಚ್ಚಿಲ್ ಖಾಸಗಿ ಕಾಲೇಜಿನ ಮೂವರು ವಿದ್ಯಾರ್ಥಿಗಳು ನೀರುಪಾಲಾದ ಘಟನೆ ಇನೋಳಿ ನಡುಗುಡ್ಡೆ ಎಂಬಲ್ಲಿ ಸೋಮವಾರ ಮಧ್ಯಾಹ್ನ ನಡೆದಿದೆ.
ಜಾಹೀರಾತು
ನೀರುಪಾಲಾದವರನ್ನು ವಿದ್ಯಾರ್ಥಿಗಳಾದ ಚಿತ್ರದುರ್ಗ ಮೂಲದ ಶ್ರೀರಾಮ್(21), ನಿಖಿಲ್(22) ಹಾಗೂ ಬಿಹಾರ ಮೂಲದ ಶುಭಂ(21) ಎಂದು ಗುರುತಿಸಲಾಗಿದೆ. ಈ ಪೈಕಿ ಶುಭಂ ಮತ್ತು ನಿಖಿಲ್ ಅವರ ಮೃತದೇಹ ಪತ್ತೆಯಾಗಿದೆ ಎಂದು ಇತ್ತೀಚಿನ ಮಾಹಿತಿ ತಿಳಿಸಿದೆ.
ಎಂಟು ವಿದ್ಯಾರ್ಥಿಗಳು ನೇತ್ರಾವತಿ ನದಿಯಲ್ಲಿ ಸ್ನಾನಕ್ಕೆಂದು ತೆರಳಿದ್ದರು. ಇವರು ಸ್ನಾನ ಮುಗಿಸಿ ಹಿಂದಿರುವ ಸಂದರ್ಭ ಶ್ರೀರಾಮ್ ಕಾಲು ಜಾರಿ ನದಿಗೆ ಬಿದ್ದರು. ಅವರನ್ನು ರಕ್ಷಿಸಲು ಮುಂದಾದ ಉಳಿದಿಬ್ಬರೂ ನೀರುಪಾಲಾದರು ಎನ್ನಲಾಗಿದೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಮೂವರು ವಿದ್ಯಾರ್ಥಿಗಳು ನೀರುಪಾಲು, ಐವರ ರಕ್ಷಣೆ"