ಬಂಟ್ವಾಳ

ಬಂಟ್ವಾಳ ಯುವವಾಹಿನಿಯಿಂದ ನಾರಾಯಣಗುರು ಜನ್ಮದಿನಾಚರಣೆ

ಬಿ.ಸಿ.ರೋಡಿನ ಸಮಾಜ ಕಲ್ಯಾಣ ಇಲಾಖಾ ವಸತಿ ಶಾಲೆಯಲ್ಲಿ ಬ್ರಹ್ಮಶ್ರೀ ನಾರಾಯಣಗುರು ವರ್ಯರ 163ನೇ ಜನ್ಮದಿನಾಚರಣೆ ಬುಧವಾರ ಬೆಳಗ್ಗೆ ನಡೆಯಿತು.

ಜಾಹೀರಾತು

ಯುವವಾಹಿನಿಯ ಬಂಟ್ವಾಳ ತಾಲೂಕು ಘಟಕ ಆಶ್ರಯದಲ್ಲಿ ನಡೆದ ಕಾರ್ಯಕ್ರಮವನ್ನು ಬಂಟ್ವಾಳ ನ್ಯೂಸ್ ಸಂಪಾದಕ ಹರೀಶ ಮಾಂಬಾಡಿ ಜ್ಯೋತಿ ಬೆಳಗುವ ಮೂಲಕ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಶಿಕ್ಷಣದ ಮೂಲಕ ಸಮಾನತೆಯ ಸಂದೇಶ ಸಾರುವ ನಾರಾಯಣಗುರುಗಳ ಸಂದೇಶ ಇಂದು ಪ್ರಸ್ತುತ ಎಂದು ಹೇಳಿದರು.

ಅಧ್ಯಕ್ಷತೆಯನ್ನು ಯುವವಾಹಿನಿ ಬಂಟ್ವಾಳ ತಾಲೂಕು ಘಟಕ ಅಧ್ಯಕ್ಷ ಲೋಕೇಶ ಸುವರ್ಣ ಅಲೆತ್ತೂರು ವಹಿಸಿದ್ದರು. ವಸತಿ ಶಾಲೆಯ ಮೆಲ್ವಿಚಾರಕ ಪ್ರಸಾದ್, ಸವಿತಾ, ಯುವವಾಹಿನಿ ಸಲಹೆಗಾರರಾದ ಬಿ.ತಮ್ಮಯ, ಅಣ್ಣು ಪೂಜಾರಿ, ಕೋಶಾಧಿಕಾರಿ ಲೋಕೇಶ್ ಪೂಜಾರಿ ಪಿ.ಜೆ ಯುವವಾಹಿನಿ ನಿಕಟ ಪೂರ್ವ ಅಧ್ಯಕ್ಷರಾದ ಅರುಣ್ ಕುಮಾರ್, ಮಾಜಿ ಅಧ್ಯಕ್ಷರಾದ.ಹರೀಶ್ ಕೋಟ್ಯಾನ್,ನಾಗೇಶ್ ಪೊನ್ನೋಡಿ, ಸಂಘಟನಾ ಕಾರ್ಯದರ್ಶಿ ಸತೀಶ್ ಪೂಜಾರಿ ಬಾಯಿಲ, ಪ್ರಸಾದ್ ಬಾಯಿಲ, ಗಣೇಶ್ ಕುಮಾರ್, ನಿರ್ದೇಶಕರಾದ ಹರೀಶ್ ಕೋಟ್ಯಾನ್ ಕುದನೆ, ಜಯಶ್ರೀ ಕರ್ಕೇರಾ ಈ ಸಂದರ್ಭ ಉಪಸ್ಥಿತರಿದ್ದರು. ಇದೇ ವೇಳೆ ವಸತಿ ಶಾಲಾ ಮಕ್ಕಳಿಗೆ ಹಣ್ಣುಹಂಪಲು, ಸಿಹಿ ತಿಂಡಿ, ಶಾಲಾ ಸಾಮಗ್ರಿಗಳನ್ನು ವಿತರಿಸಲಾಯಿತು. ಉಪಾಧ್ಯಕ್ಷರಾದ ಗಣೇಶ್ ಪೂಂಜರೆಕೋಡಿ ಸ್ವಾಗತಿಸಿದರು. ಮಾಜಿ ಅದ್ಯಕ್ಷರಾದ ಪ್ರೇಮನಾಥ್ ಕೆ ವಂದಿಸಿದರು, ಮಾಜಿ ಅಧ್ಯಕ್ಷರಾದ ರಾಜೇಶ್ ಸುವರ್ಣ ಕಾರ್ಯಕ್ರಮ ನಿರೂಪಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ