ಬುಧವಾರ ಸಂಜೆ ಕೆಎಸ್ಸಾರ್ಟಿಸಿ ಬಸ್ಸುಗಳು ವಿರಳ ಸಂಖ್ಯೆಯಲ್ಲಿ ಸಂಚರಿಸಿ ಪ್ರಯಾಣಿಕರು ಪರದಾಡಬೇಕಾಯಿತು.
ಜಾಹೀರಾತು
ಬಸ್ಸುಗಳೆಲ್ಲ ಬಿ.ಸಿ.ರೋಡಿನ ಖಾಲಿ ಜಾಗಗಳಲ್ಲೆ ಠಿಕಾಣಿ ಹೂಡಿದ ಕಾರಣ ಪ್ರಯಾಣಿಕರು ಹಿಡಿಶಾಪ ಹಾಕುತ್ತಲೇ ತಮ್ಮ ಊರಿಗೆ ತೆರಳುವ ಬಸ್ಸಿನ ಆಗಮನಕ್ಕೆ ಕಾಯುತ್ತಿದ್ದ ದೃಶ್ಯ ಕಂಡುಬಂತು.
ಮಂಗಳೂರು ಚಲೋ ಹಿನ್ನೆಲೆ ಹಾಗೂ ಅಹಿತಕರ ಘಟನೆಗಳು ನಡೆಯದಂತೆ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಿದ ಕಾರಣ ಅವರ ಉಪಯೋಗಕ್ಕಾಗಿ ಕೆಎಸ್ಸಾರ್ಟಿಸಿ ಬಸ್ಸುಗಳ ಸೇವೆಯನ್ನು ಪಡೆಯಲಾಗಿದೆ. ವಿಶೇಷವಾಗಿ ಮಂಗಳೂರಿನಿಂದ ಧರ್ಮಸ್ಥಳ ಮಾರ್ಗದಲ್ಲಿ ಸಂಚರಿಸುವ ಬಿ.ಸಿ.ರೋಡ್, ಬೆಳ್ತಂಗಡಿ, ಮಡಂತ್ಯಾರು, ಪುಂಜಾಲಕಟ್ಟೆ ಪ್ರಯಾಣಿಕರು ಕೆಎಸ್ಸಾರ್ಟಿಸಿ ಬಸ್ಸುಗಳನ್ನೇ ನೆಚ್ಚಿಕೊಳ್ಳಬೇಕಿದ್ದ ಕಾರಣ ಸರಿಯಾದ ಸಮಯಕ್ಕೆ ಬಸ್ಸುಗಳು ಬಾರದೆ ಕಂಗಾಲಾದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಬಿ.ಸಿ.ರೋಡಿನಲ್ಲಿ ಪ್ರಯಾಣಿಕರ ಪರದಾಟ"